Homeರಾಷ್ಟ್ರೀಯಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

- Advertisement -
- Advertisement -

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಬಿಜೆಪಿಯು ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ನೀಡಿದ್ದ ತನ್ನ ಹೇಳಿಕೆಯಲ್ಲಿ ತಿಳಿಸಿದ್ದರು.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೂಪುರ್‌ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ವಿರುದ್ದದ ಆಕ್ರೋಶಗಳನ್ನು ಶಮನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಶನಿವಾರವಷ್ಟೆ, ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಪ್ರತಿಯೊಂದು ಧರ್ಮವು ಅರಳಿತು ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಕೋಮು ಸಾಮರಸ್ಯ ಸಾರುವ ಉರುಸುಗಳು

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸಲು ಹಕ್ಕನ್ನು ನೀಡುತ್ತದೆ” ಎಂದು ಪಕ್ಷವೂ ಹೇಳಿತ್ತು.

ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ನೂಪುರ್ ಶರ್ಮಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಈ ವಿವಾದಾತ್ಮಕ ಹೇಳಿಕೆಗಳನ್ನು ಪ್ರತಿಭಟಿಸಿ ಮಾರುಕಟ್ಟೆಗಳನ್ನು ಮುಚ್ಚುವ ಕರೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಘರ್ಷಣೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ.

ಒಂದು ಗುಂಪು ಮತ್ತೊಂದು ಗುಂಪು ನೀಡಿದ್ದ ಬಂದ್‌ ಕರೆಯನ್ನು ವಿರೋಧಿಸಿತ್ತು. ಇದು ಘರ್ಷಣೆಗೆ ಕಾರಣವಾಗಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದ್ದವು. ನಂತರ ಪೊಲೀಸರು ಗುಂಪನ್ನು ಚದುರಿಸಲು ಮತ್ತು ಹೆಚ್ಚಿನ ಹಿಂಸಾಚಾರವನ್ನು ತಡೆಯಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು. ಪ್ರಕರಣದಲ್ಲಿ ಪೊಲೀಸರು 36 ಮಂದಿಯನ್ನು ಬಂಧಿಸಿದ್ದು, 1,500 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಘರ್ಷಣೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ಥಳದಿಂದ 80 ಕಿಲೋಮೀಟರ್ ದೂರದಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ!

ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಮಹಾರಾಷ್ಟ್ರದ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಅದರೆ ಅವರು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದು, ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದರು.

ಭಾರತದ ಆಡಳಿತ ಪಕ್ಷದ ವಕ್ತಾರೆಯ ಹೇಳಿಕೆಗಳ ವಿರುದ್ಧ ಅರಬ್ ರಾಷ್ಟ್ರಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೇಳಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್‌ಗಳೊಂದಿಗೆ, ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಇದರ ನಂತರ ಬಿಜೆಪಿ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಅರಬ್ ಮಹಿಳೆಯರ ವಿರುದ್ದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ

ಈ ಹಿಂದೆ ಬಿಜೆಪಿ ಸಂಸದ ತೇಜಸ್ವಿಸೂರ್ಯ ಅವರು ಅರಬ್ ಮಹಿಳೆಯರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವೇಳೆ ಕೂಡಾ ಅರಬ್ ದೇಶಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತೇಜಸ್ವಿ ಸೂರ್ಯ ತನ್ನ ಹೇಳಿಕೆಯಲ್ಲಿ, “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿ, ಗಲ್ಪ್‌‌ ರಾಷ್ಟ್ರಗಳು ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಬಿಜೆಪಿ ಅವರ ವಿರುದ್ಧ ಯಾವುದೆ ಗಂಭೀರ ಕ್ರಮ ಕೈಗೊಂಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...