Homeರಾಷ್ಟ್ರೀಯಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

- Advertisement -
- Advertisement -

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಬಿಜೆಪಿಯು ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ನೀಡಿದ್ದ ತನ್ನ ಹೇಳಿಕೆಯಲ್ಲಿ ತಿಳಿಸಿದ್ದರು.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೂಪುರ್‌ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ವಿರುದ್ದದ ಆಕ್ರೋಶಗಳನ್ನು ಶಮನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಶನಿವಾರವಷ್ಟೆ, ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಪ್ರತಿಯೊಂದು ಧರ್ಮವು ಅರಳಿತು ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಕೋಮು ಸಾಮರಸ್ಯ ಸಾರುವ ಉರುಸುಗಳು

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸಲು ಹಕ್ಕನ್ನು ನೀಡುತ್ತದೆ” ಎಂದು ಪಕ್ಷವೂ ಹೇಳಿತ್ತು.

ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ನೂಪುರ್ ಶರ್ಮಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಈ ವಿವಾದಾತ್ಮಕ ಹೇಳಿಕೆಗಳನ್ನು ಪ್ರತಿಭಟಿಸಿ ಮಾರುಕಟ್ಟೆಗಳನ್ನು ಮುಚ್ಚುವ ಕರೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಘರ್ಷಣೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ.

ಒಂದು ಗುಂಪು ಮತ್ತೊಂದು ಗುಂಪು ನೀಡಿದ್ದ ಬಂದ್‌ ಕರೆಯನ್ನು ವಿರೋಧಿಸಿತ್ತು. ಇದು ಘರ್ಷಣೆಗೆ ಕಾರಣವಾಗಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದ್ದವು. ನಂತರ ಪೊಲೀಸರು ಗುಂಪನ್ನು ಚದುರಿಸಲು ಮತ್ತು ಹೆಚ್ಚಿನ ಹಿಂಸಾಚಾರವನ್ನು ತಡೆಯಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು. ಪ್ರಕರಣದಲ್ಲಿ ಪೊಲೀಸರು 36 ಮಂದಿಯನ್ನು ಬಂಧಿಸಿದ್ದು, 1,500 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಘರ್ಷಣೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ಥಳದಿಂದ 80 ಕಿಲೋಮೀಟರ್ ದೂರದಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ!

ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಮಹಾರಾಷ್ಟ್ರದ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಅದರೆ ಅವರು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದು, ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದರು.

ಭಾರತದ ಆಡಳಿತ ಪಕ್ಷದ ವಕ್ತಾರೆಯ ಹೇಳಿಕೆಗಳ ವಿರುದ್ಧ ಅರಬ್ ರಾಷ್ಟ್ರಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೇಳಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್‌ಗಳೊಂದಿಗೆ, ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಇದರ ನಂತರ ಬಿಜೆಪಿ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಅರಬ್ ಮಹಿಳೆಯರ ವಿರುದ್ದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ

ಈ ಹಿಂದೆ ಬಿಜೆಪಿ ಸಂಸದ ತೇಜಸ್ವಿಸೂರ್ಯ ಅವರು ಅರಬ್ ಮಹಿಳೆಯರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವೇಳೆ ಕೂಡಾ ಅರಬ್ ದೇಶಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತೇಜಸ್ವಿ ಸೂರ್ಯ ತನ್ನ ಹೇಳಿಕೆಯಲ್ಲಿ, “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿ, ಗಲ್ಪ್‌‌ ರಾಷ್ಟ್ರಗಳು ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಬಿಜೆಪಿ ಅವರ ವಿರುದ್ಧ ಯಾವುದೆ ಗಂಭೀರ ಕ್ರಮ ಕೈಗೊಂಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...