Homeರಾಷ್ಟ್ರೀಯಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪಕ್ಷದಿಂದ ಅಮಾನತು

- Advertisement -
- Advertisement -

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಎಎನ್‌ಐ ವರದಿ ಮಾಡಿದೆ. ಬಿಜೆಪಿಯು ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಶನಿವಾರ ನೀಡಿದ್ದ ತನ್ನ ಹೇಳಿಕೆಯಲ್ಲಿ ತಿಳಿಸಿದ್ದರು.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೂಪುರ್‌ ಶರ್ಮಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆಗಳ ವಿರುದ್ದದ ಆಕ್ರೋಶಗಳನ್ನು ಶಮನಗೊಳಿಸಲು ಪಕ್ಷವು ಪ್ರಯತ್ನಿಸುತ್ತಿದೆ. ಶನಿವಾರವಷ್ಟೆ, ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಮಾನಿಸುವುದನ್ನು ಬಲವಾಗಿ ಖಂಡಿಸುತ್ತದೆ ಎಂದು ಹೇಳಿಕೊಂಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಪ್ರತಿಯೊಂದು ಧರ್ಮವು ಅರಳಿತು ಮತ್ತು ಪ್ರವರ್ಧಮಾನಕ್ಕೆ ಬಂದಿದೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ಕೋಮು ಸಾಮರಸ್ಯ ಸಾರುವ ಉರುಸುಗಳು

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವಶಾಸ್ತ್ರವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸಲು ಹಕ್ಕನ್ನು ನೀಡುತ್ತದೆ” ಎಂದು ಪಕ್ಷವೂ ಹೇಳಿತ್ತು.

ಇದೀಗ ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ. ನೂಪುರ್ ಶರ್ಮಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರೆ, ನವೀನ್ ಜಿಂದಾಲ್ ಪಕ್ಷದ ದೆಹಲಿ ಮಾಧ್ಯಮ ಘಟಕದ ಮುಖ್ಯಸ್ಥರಾಗಿದ್ದಾರೆ.

ಕಳೆದ ವಾರ ಟಿವಿ ಚರ್ಚೆಯ ಸಂದರ್ಭದಲ್ಲಿ ನೂಪುರ್‌ ಶರ್ಮಾ ಅವರು ಪ್ರವಾದಿಯನ್ನು ಅವಮಾನಿಸುವ ಉದ್ದೇಶದಿಂದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಯ ವಿರುದ್ಧ ಮುಸ್ಲಿಮರು ಭಾರಿ ಆಕ್ರೋಶ ಮತ್ತು ಪ್ರತಿಭಟನೆಯನ್ನು ನಡೆಸಿದ್ದರು. ಈ ಮಧ್ಯೆ ನವೀನ್ ಕುಮಾರ್ ಅವರು ಪ್ರವಾದಿಯವರ ಬಗ್ಗೆ ಟ್ವೀಟ್ ಮಾಡಿದ್ದು ವಿವಾದವು ಮತ್ತುಷ್ಟು ಬಿಗಡಾಯಿಸುವಂತೆ ಮಾಡಿತ್ತು.

ಇದನ್ನೂ ಓದಿ: ರೈತಬಂಧು ಪ್ರವಾದಿ ಮುಹಮ್ಮದ್ (ಸ) : ಮಿಸ್ರಿಯಾ ಐ ಪಜೀರ್

ಈ ವಿವಾದಾತ್ಮಕ ಹೇಳಿಕೆಗಳನ್ನು ಪ್ರತಿಭಟಿಸಿ ಮಾರುಕಟ್ಟೆಗಳನ್ನು ಮುಚ್ಚುವ ಕರೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಘರ್ಷಣೆಯಲ್ಲಿ 20 ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ.

ಒಂದು ಗುಂಪು ಮತ್ತೊಂದು ಗುಂಪು ನೀಡಿದ್ದ ಬಂದ್‌ ಕರೆಯನ್ನು ವಿರೋಧಿಸಿತ್ತು. ಇದು ಘರ್ಷಣೆಗೆ ಕಾರಣವಾಗಿ ಪ್ರದೇಶದಲ್ಲಿ ಕಲ್ಲು ತೂರಾಟ ಸಂಭವಿಸಿದ್ದವು. ನಂತರ ಪೊಲೀಸರು ಗುಂಪನ್ನು ಚದುರಿಸಲು ಮತ್ತು ಹೆಚ್ಚಿನ ಹಿಂಸಾಚಾರವನ್ನು ತಡೆಯಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು. ಪ್ರಕರಣದಲ್ಲಿ ಪೊಲೀಸರು 36 ಮಂದಿಯನ್ನು ಬಂಧಿಸಿದ್ದು, 1,500 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಘರ್ಷಣೆ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ಥಳದಿಂದ 80 ಕಿಲೋಮೀಟರ್ ದೂರದಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ‘ಪ್ರಧಾನಿ ಅಮಿತ್ ಶಾ’ ಎಂದು ಕರೆದ ಅಸ್ಸಾಂ ಸಿಎಂ ಹಿಮಂತ ಶರ್ಮಾ: ನಂತರ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ!

ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಯ ವಿರುದ್ಧ ಮಹಾರಾಷ್ಟ್ರದ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಅದರೆ ಅವರು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದು, ತನಗೆ ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಹೇಳಿದ್ದರು.

ಭಾರತದ ಆಡಳಿತ ಪಕ್ಷದ ವಕ್ತಾರೆಯ ಹೇಳಿಕೆಗಳ ವಿರುದ್ಧ ಅರಬ್ ರಾಷ್ಟ್ರಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೇಳಿಕೆಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್‌ಗಳೊಂದಿಗೆ, ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಇದರ ನಂತರ ಬಿಜೆಪಿ ಪ್ರಕರಣದ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಅರಬ್ ಮಹಿಳೆಯರ ವಿರುದ್ದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ

ಈ ಹಿಂದೆ ಬಿಜೆಪಿ ಸಂಸದ ತೇಜಸ್ವಿಸೂರ್ಯ ಅವರು ಅರಬ್ ಮಹಿಳೆಯರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ವೇಳೆ ಕೂಡಾ ಅರಬ್ ದೇಶಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತೇಜಸ್ವಿ ಸೂರ್ಯ ತನ್ನ ಹೇಳಿಕೆಯಲ್ಲಿ, “95% ಅರಬ್ ಮಹಿಳೆಯರು ಕಳೆದ ಕೆಲವು ನೂರು ವರ್ಷಗಳಲ್ಲಿ ಎಂದಿಗೂ ಸುಖವನ್ನು ಕಾಣಲಿಲ್ಲ. ಪ್ರತಿಯೊಬ್ಬ ತಾಯಿಯು ಮಕ್ಕಳನ್ನು ಲೈಂಗಿಕ ಕ್ರಿಯೆಯಲ್ಲಿ ಹುಟ್ಟಿಸಿದ್ದಾರೆಯೇ ಹೊರತು ಪ್ರೀತಿಯಿಂದಲ್ಲ” ಎಂದು ಹೇಳಿದ್ದರು.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ತೇಜಸ್ವಿ ಸೂರ್ಯ ಭಾಷಣಕ್ಕೆ ತೀವ್ರ ವಿರೋಧ; ಪ್ರತಿಭಟನೆ ಬಳಿಕ ಕಾರ್ಯಕ್ರಮ ರದ್ದು

ಈ ಟ್ವೀಟ್ ಗೆ ಸಾಕಷ್ಟು ವಿರೋಧ ವ್ಯಕ್ತವಾಗಿ, ಗಲ್ಪ್‌‌ ರಾಷ್ಟ್ರಗಳು ಮತ್ತು ಭಾರತದ ನಡುವೆ ಸೌಹಾರ್ದಯುತ ಸಂಬಂಧವಿದ್ದು, ನಮ್ಮ ಮಹಿಳೆಯ ಬಗ್ಗೆ ಅತ್ಯಂತ ಕೀಳಾಗಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕ್ರಮ ಜರುಗಿಸಬೇಕು ಎಂಬ ಆಗ್ರಹ ಬಂದಿತ್ತು. ಯುಎಇಯಲ್ಲಿನ ಭಾರತದ ರಾಯಭಾರಿಯಾಗಿದ್ದ ಪವನ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಬಿಜೆಪಿ ಅವರ ವಿರುದ್ಧ ಯಾವುದೆ ಗಂಭೀರ ಕ್ರಮ ಕೈಗೊಂಡಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...