Homeಸಿನಿಮಾಕ್ರೀಡೆಕೊಹ್ಲಿಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ: ಅನುಷ್ಕಾಗೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್

ಕೊಹ್ಲಿಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ: ಅನುಷ್ಕಾಗೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್

ಸುನಿಲ್ ಗವಾಸ್ಕರ್ ತನ್ನ ಕಾಮೆಂಟ್ರಿಯಲ್ಲಿ, "ಲಾಕ್‌ಡೌನ್ ವೇಳೆ ಅನುಷ್ಕಾ ಅವರ ಬೌಲಿಂಗ್‌ಗೇ ಕೊಹ್ಲಿ ಹೆಚ್ಚು ಉತ್ತರಿಸಿದ್ದಾರೆ. ಅದು ಇಲ್ಲಿ ಪ್ರಯೋಜನಕ್ಕೆ ಬರಲಿಲ್ಲ" ಎಂದು ಹಿಂದಿಯಲ್ಲಿ ಹೇಳಿದ್ದರು.

- Advertisement -
- Advertisement -

ಖ್ಯಾತ ಮಾಜಿ ಕ್ರಿಕೆಟಿಗ ಮತ್ತು ಐಪಿಎಲ್ ಕಾಮೆಂಟ್ರಿ ಸುನಿಲ್ ಗವಾಸ್ಕರ್ ಗುರುವಾರದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ ಅನುಷ್ಕಾ ಶರ್ಮಾ ತಿರುಗೇಟು ನೀಡಿದ್ದು, ಸದ್ಯ ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಐಪಿಎಲ್ ಟೂರ್ನಿಯ ಗುರುವಾರದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಆರ್‌ಸಿಬಿ ಮುಖಾಮುಖಿಯಾಗಿತ್ತು. ಇದರಲ್ಲಿ ಆರ್‌ಸಿಬಿ 97 ರನ್‌ಗಳಿಂದ ಸೋತಿತ್ತು. ಆರ್‌ಸಿಬಿ ನಾಯಕ ಕೊಹ್ಲಿ, ಕೇವಲ 1 ರನ್ ಗಳಿಸಿ ಔಟಾಗಿದ್ದರು. ಈ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ನಿಡಿದ ಹೇಳಿಕೆಯು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಇದರ ವಿರುದ್ಧ ಕೊಹ್ಲಿ ಅಭಿಮಾನಿಗಳೂ ತಿರುಗಿಬಿದ್ದಿದ್ದು, ಅನುಷ್ಕಾ ಶರ್ಮಾ ಕೂಡ ಇನ್ಸ್‌ಟಾಗ್ರಾಂನಲ್ಲಿ ಇದನ್ನು ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!

ಗವಾಸ್ಕರ್ ತನ್ನ ಕಾಮೆಂಟ್ರಿಯಲ್ಲಿ, “ಲಾಕ್‌ಡೌನ್ ವೇಳೆ ಅನುಷ್ಕಾ ಅವರ ಬೌಲಿಂಗ್‌ಗೇ ಕೊಹ್ಲಿ ಹೆಚ್ಚು ಉತ್ತರಿಸಿದ್ದಾರೆ. ಅದು ಇಲ್ಲಿ ಪ್ರಯೋಜನಕ್ಕೆ ಬರಲಿಲ್ಲ” ಎಂದು ಹಿಂದಿಯಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅನುಷ್ಕಾ, “ಇದು ಸದಭಿರುಚಿಯ ಹೇಳಿಕೆಯಲ್ಲ. ಇದಕ್ಕೆ ಗವಾಸ್ಕರ್ ಸ್ಪಷ್ಟನೆ ನೀಡಬೇಕು” ಎಂದು ಹೇಳಿದ್ದರು.

ಅನುಷ್ಕಾ ತನ್ನ ಇನ್‌ಸ್ಟಾಗ್ರಾಂನಲ್ಲಿ, “ಗೌರವಾನ್ವಿತ ಸುನಿಲ್ ಗವಾಸ್ಕರ್ ಅವರೇ, ಪಂದ್ಯದಲ್ಲಿ ಪತಿಯ ಸಾಮರ್ಥ್ಯಕ್ಕೂ ಪತ್ನಿಯ ಜೊತೆಗಿನ ಸಂಬಂಧಕ್ಕೂ ತಾಳೆ ಹಾಕಿ ಹೇಳಿಕೆ ನೀಡುವಂಥ ಚಾಳಿ ನಿಮಗೆ ಯಾಕೆ ಬಂತು ಎಂಬುದು ಅರ್ಥವಾಗುತ್ತಿಲ್ಲ. ಇಷ್ಟು ವರ್ಷ ಕ್ರಿಕೆಟಿಗರ ಖಾಸಗೀ ಜೀವನದ ಬಗ್ಗೆ ನೀವು ಇಷ್ಟೇನಾ ಗೌರವ ಹೊಂದಿರುವುದು?” ಎಂದು ಬರೆದುಕೊಂಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್, “ಲಾಕ್‌ಡೌನ್ ಸಮಯದಲ್ಲಿ, ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮನೆಯ ಆವರಣದಲ್ಲಿ ಕ್ರಿಕೆಟ್ ಆಡುತ್ತಿರುವ ವೀಡಿಯೋವೊಂದನ್ನು ನೋಡಿದ್ದೆ. ಅದರಲ್ಲಿ ಅನುಷ್ಕಾ ಬೌಲಿಂಗ್ ಮಾಡುತ್ತಿದ್ದರು. ನಾನು ಅದನ್ನಷ್ಟೇ ಪ್ರಸ್ತಾಪಿಸಿದ್ದೆ. ಸಾಕಷ್ಟು ಅಭ್ಯಾಸ ಮಾಡಲು ಅವಕಾಶ ಸಿಗಲಿಲ್ಲ ಎಂಬುದನ್ನು ಹೇಳಲು ಈ ಮಾತನ್ನು ಬಳಸಿದ್ದೆ” ಹೇಳಿದರು.


ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...