Homeಸಿನಿಮಾಕ್ರೀಡೆಕೊಹ್ಲಿಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ: ಅನುಷ್ಕಾಗೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್

ಕೊಹ್ಲಿಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ: ಅನುಷ್ಕಾಗೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್

ಸುನಿಲ್ ಗವಾಸ್ಕರ್ ತನ್ನ ಕಾಮೆಂಟ್ರಿಯಲ್ಲಿ, "ಲಾಕ್‌ಡೌನ್ ವೇಳೆ ಅನುಷ್ಕಾ ಅವರ ಬೌಲಿಂಗ್‌ಗೇ ಕೊಹ್ಲಿ ಹೆಚ್ಚು ಉತ್ತರಿಸಿದ್ದಾರೆ. ಅದು ಇಲ್ಲಿ ಪ್ರಯೋಜನಕ್ಕೆ ಬರಲಿಲ್ಲ" ಎಂದು ಹಿಂದಿಯಲ್ಲಿ ಹೇಳಿದ್ದರು.

- Advertisement -
- Advertisement -

ಖ್ಯಾತ ಮಾಜಿ ಕ್ರಿಕೆಟಿಗ ಮತ್ತು ಐಪಿಎಲ್ ಕಾಮೆಂಟ್ರಿ ಸುನಿಲ್ ಗವಾಸ್ಕರ್ ಗುರುವಾರದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ ಅನುಷ್ಕಾ ಶರ್ಮಾ ತಿರುಗೇಟು ನೀಡಿದ್ದು, ಸದ್ಯ ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಐಪಿಎಲ್ ಟೂರ್ನಿಯ ಗುರುವಾರದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಆರ್‌ಸಿಬಿ ಮುಖಾಮುಖಿಯಾಗಿತ್ತು. ಇದರಲ್ಲಿ ಆರ್‌ಸಿಬಿ 97 ರನ್‌ಗಳಿಂದ ಸೋತಿತ್ತು. ಆರ್‌ಸಿಬಿ ನಾಯಕ ಕೊಹ್ಲಿ, ಕೇವಲ 1 ರನ್ ಗಳಿಸಿ ಔಟಾಗಿದ್ದರು. ಈ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ನಿಡಿದ ಹೇಳಿಕೆಯು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಇದರ ವಿರುದ್ಧ ಕೊಹ್ಲಿ ಅಭಿಮಾನಿಗಳೂ ತಿರುಗಿಬಿದ್ದಿದ್ದು, ಅನುಷ್ಕಾ ಶರ್ಮಾ ಕೂಡ ಇನ್ಸ್‌ಟಾಗ್ರಾಂನಲ್ಲಿ ಇದನ್ನು ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!

ಗವಾಸ್ಕರ್ ತನ್ನ ಕಾಮೆಂಟ್ರಿಯಲ್ಲಿ, “ಲಾಕ್‌ಡೌನ್ ವೇಳೆ ಅನುಷ್ಕಾ ಅವರ ಬೌಲಿಂಗ್‌ಗೇ ಕೊಹ್ಲಿ ಹೆಚ್ಚು ಉತ್ತರಿಸಿದ್ದಾರೆ. ಅದು ಇಲ್ಲಿ ಪ್ರಯೋಜನಕ್ಕೆ ಬರಲಿಲ್ಲ” ಎಂದು ಹಿಂದಿಯಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅನುಷ್ಕಾ, “ಇದು ಸದಭಿರುಚಿಯ ಹೇಳಿಕೆಯಲ್ಲ. ಇದಕ್ಕೆ ಗವಾಸ್ಕರ್ ಸ್ಪಷ್ಟನೆ ನೀಡಬೇಕು” ಎಂದು ಹೇಳಿದ್ದರು.

ಅನುಷ್ಕಾ ತನ್ನ ಇನ್‌ಸ್ಟಾಗ್ರಾಂನಲ್ಲಿ, “ಗೌರವಾನ್ವಿತ ಸುನಿಲ್ ಗವಾಸ್ಕರ್ ಅವರೇ, ಪಂದ್ಯದಲ್ಲಿ ಪತಿಯ ಸಾಮರ್ಥ್ಯಕ್ಕೂ ಪತ್ನಿಯ ಜೊತೆಗಿನ ಸಂಬಂಧಕ್ಕೂ ತಾಳೆ ಹಾಕಿ ಹೇಳಿಕೆ ನೀಡುವಂಥ ಚಾಳಿ ನಿಮಗೆ ಯಾಕೆ ಬಂತು ಎಂಬುದು ಅರ್ಥವಾಗುತ್ತಿಲ್ಲ. ಇಷ್ಟು ವರ್ಷ ಕ್ರಿಕೆಟಿಗರ ಖಾಸಗೀ ಜೀವನದ ಬಗ್ಗೆ ನೀವು ಇಷ್ಟೇನಾ ಗೌರವ ಹೊಂದಿರುವುದು?” ಎಂದು ಬರೆದುಕೊಂಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್, “ಲಾಕ್‌ಡೌನ್ ಸಮಯದಲ್ಲಿ, ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮನೆಯ ಆವರಣದಲ್ಲಿ ಕ್ರಿಕೆಟ್ ಆಡುತ್ತಿರುವ ವೀಡಿಯೋವೊಂದನ್ನು ನೋಡಿದ್ದೆ. ಅದರಲ್ಲಿ ಅನುಷ್ಕಾ ಬೌಲಿಂಗ್ ಮಾಡುತ್ತಿದ್ದರು. ನಾನು ಅದನ್ನಷ್ಟೇ ಪ್ರಸ್ತಾಪಿಸಿದ್ದೆ. ಸಾಕಷ್ಟು ಅಭ್ಯಾಸ ಮಾಡಲು ಅವಕಾಶ ಸಿಗಲಿಲ್ಲ ಎಂಬುದನ್ನು ಹೇಳಲು ಈ ಮಾತನ್ನು ಬಳಸಿದ್ದೆ” ಹೇಳಿದರು.


ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...