Homeಸಿನಿಮಾಕ್ರೀಡೆಕೊಹ್ಲಿಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ: ಅನುಷ್ಕಾಗೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್

ಕೊಹ್ಲಿಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆ: ಅನುಷ್ಕಾಗೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್

ಸುನಿಲ್ ಗವಾಸ್ಕರ್ ತನ್ನ ಕಾಮೆಂಟ್ರಿಯಲ್ಲಿ, "ಲಾಕ್‌ಡೌನ್ ವೇಳೆ ಅನುಷ್ಕಾ ಅವರ ಬೌಲಿಂಗ್‌ಗೇ ಕೊಹ್ಲಿ ಹೆಚ್ಚು ಉತ್ತರಿಸಿದ್ದಾರೆ. ಅದು ಇಲ್ಲಿ ಪ್ರಯೋಜನಕ್ಕೆ ಬರಲಿಲ್ಲ" ಎಂದು ಹಿಂದಿಯಲ್ಲಿ ಹೇಳಿದ್ದರು.

- Advertisement -
- Advertisement -

ಖ್ಯಾತ ಮಾಜಿ ಕ್ರಿಕೆಟಿಗ ಮತ್ತು ಐಪಿಎಲ್ ಕಾಮೆಂಟ್ರಿ ಸುನಿಲ್ ಗವಾಸ್ಕರ್ ಗುರುವಾರದ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯ ವಿರುದ್ಧ ಅನುಷ್ಕಾ ಶರ್ಮಾ ತಿರುಗೇಟು ನೀಡಿದ್ದು, ಸದ್ಯ ಇದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಐಪಿಎಲ್ ಟೂರ್ನಿಯ ಗುರುವಾರದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಆರ್‌ಸಿಬಿ ಮುಖಾಮುಖಿಯಾಗಿತ್ತು. ಇದರಲ್ಲಿ ಆರ್‌ಸಿಬಿ 97 ರನ್‌ಗಳಿಂದ ಸೋತಿತ್ತು. ಆರ್‌ಸಿಬಿ ನಾಯಕ ಕೊಹ್ಲಿ, ಕೇವಲ 1 ರನ್ ಗಳಿಸಿ ಔಟಾಗಿದ್ದರು. ಈ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ನಿಡಿದ ಹೇಳಿಕೆಯು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. ಇದರ ವಿರುದ್ಧ ಕೊಹ್ಲಿ ಅಭಿಮಾನಿಗಳೂ ತಿರುಗಿಬಿದ್ದಿದ್ದು, ಅನುಷ್ಕಾ ಶರ್ಮಾ ಕೂಡ ಇನ್ಸ್‌ಟಾಗ್ರಾಂನಲ್ಲಿ ಇದನ್ನು ಖಂಡಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಬೇಡ, ಐಪಿಎಲ್ ಬೇಕು.. ಬದಲಾಗ್ತಿದೆ ಕ್ರಿಕೆಟಿಗರ ಮೈಂಡ್‍ಸೆಟ್!

ಗವಾಸ್ಕರ್ ತನ್ನ ಕಾಮೆಂಟ್ರಿಯಲ್ಲಿ, “ಲಾಕ್‌ಡೌನ್ ವೇಳೆ ಅನುಷ್ಕಾ ಅವರ ಬೌಲಿಂಗ್‌ಗೇ ಕೊಹ್ಲಿ ಹೆಚ್ಚು ಉತ್ತರಿಸಿದ್ದಾರೆ. ಅದು ಇಲ್ಲಿ ಪ್ರಯೋಜನಕ್ಕೆ ಬರಲಿಲ್ಲ” ಎಂದು ಹಿಂದಿಯಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅನುಷ್ಕಾ, “ಇದು ಸದಭಿರುಚಿಯ ಹೇಳಿಕೆಯಲ್ಲ. ಇದಕ್ಕೆ ಗವಾಸ್ಕರ್ ಸ್ಪಷ್ಟನೆ ನೀಡಬೇಕು” ಎಂದು ಹೇಳಿದ್ದರು.

ಅನುಷ್ಕಾ ತನ್ನ ಇನ್‌ಸ್ಟಾಗ್ರಾಂನಲ್ಲಿ, “ಗೌರವಾನ್ವಿತ ಸುನಿಲ್ ಗವಾಸ್ಕರ್ ಅವರೇ, ಪಂದ್ಯದಲ್ಲಿ ಪತಿಯ ಸಾಮರ್ಥ್ಯಕ್ಕೂ ಪತ್ನಿಯ ಜೊತೆಗಿನ ಸಂಬಂಧಕ್ಕೂ ತಾಳೆ ಹಾಕಿ ಹೇಳಿಕೆ ನೀಡುವಂಥ ಚಾಳಿ ನಿಮಗೆ ಯಾಕೆ ಬಂತು ಎಂಬುದು ಅರ್ಥವಾಗುತ್ತಿಲ್ಲ. ಇಷ್ಟು ವರ್ಷ ಕ್ರಿಕೆಟಿಗರ ಖಾಸಗೀ ಜೀವನದ ಬಗ್ಗೆ ನೀವು ಇಷ್ಟೇನಾ ಗೌರವ ಹೊಂದಿರುವುದು?” ಎಂದು ಬರೆದುಕೊಂಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಸುನಿಲ್ ಗವಾಸ್ಕರ್, “ಲಾಕ್‌ಡೌನ್ ಸಮಯದಲ್ಲಿ, ಕೊಹ್ಲಿ ಮತ್ತು ಅನುಷ್ಕಾ ತಮ್ಮ ಮನೆಯ ಆವರಣದಲ್ಲಿ ಕ್ರಿಕೆಟ್ ಆಡುತ್ತಿರುವ ವೀಡಿಯೋವೊಂದನ್ನು ನೋಡಿದ್ದೆ. ಅದರಲ್ಲಿ ಅನುಷ್ಕಾ ಬೌಲಿಂಗ್ ಮಾಡುತ್ತಿದ್ದರು. ನಾನು ಅದನ್ನಷ್ಟೇ ಪ್ರಸ್ತಾಪಿಸಿದ್ದೆ. ಸಾಕಷ್ಟು ಅಭ್ಯಾಸ ಮಾಡಲು ಅವಕಾಶ ಸಿಗಲಿಲ್ಲ ಎಂಬುದನ್ನು ಹೇಳಲು ಈ ಮಾತನ್ನು ಬಳಸಿದ್ದೆ” ಹೇಳಿದರು.


ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ವಿಭಿನ್ನವಾಗಿ ಗೌರವ ಸಲ್ಲಿಸಿದ ಆರ್‌ಸಿಬಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...