Homeಮುಖಪುಟದಿಶಾ ಬಂಧನ: ತನ್ನ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಯಾಣದ ಬಿಜೆಪಿ ಸಚಿವ

ದಿಶಾ ಬಂಧನ: ತನ್ನ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಯಾಣದ ಬಿಜೆಪಿ ಸಚಿವ

ಅನಿಲ್ ವಿಜ್ ಅವರ ಹೇಳಿಕೆಗಳು ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಬೆಂಗಳೂರು ಮೂಲದ ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್ ಎನ್ನುವ ತಂಡವೊಂದು ಸಚಿವರ ವಿರುದ್ಧ ದೂರು ದಾಖಲಿಸಿದೆ.

- Advertisement -
- Advertisement -

ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಅವರು ದಿಶಾ ರವಿ ಬಂಧನಕ್ಕೆ ಸಂಬಂಧಿಸಿದಂತೆ ತಾನು ಮಾಡಿದ್ದ ಟ್ವೀಟ್‌ಗೆ ಸಮರ್ಥನೆ ನೀಡಿದ್ದಾರೆ. ಸಚಿವರು ತಮ್ಮ ಟ್ವೀಟ್‌ನಲ್ಲಿ “ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ನಾಶಮಾಡಬೇಕು” ಎಂದು ಬರೆದುಕೊಂಡಿದ್ದರು. ಇದು ದೇಶದಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿತ್ತು. ಆದರೆ ಈಗ ಸಚಿವರು ತಮ್ಮ ಹೇಳಿಕೆಗೆ ಸಮರ್ಥನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸುವಂತೆ ಸ್ವೀಡಿಷ್ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಟ್ವೀಟ್ ಮಾಡಿದ್ದ ಟೂಲ್‌ಕಿಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿಯನ್ನು ಬಂಧಿಸಲಾಗಿತ್ತು. ಇದರ ಬಗ್ಗೆ ಅನಿಲ್ ವಿಜ್ ಪ್ರತಿಕ್ರಿಯಿಸಿದ್ದರು. “ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” ಎಂದು ಅವರು ಸೋಮವಾರ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ತಮ್ಮ ಟ್ವೀಟ್ ಅನ್ನು ಸಮರ್ಥಿಸಿಕೊಂಡ ಅನಿಲ್ ವಿಜ್, “ನಾನು ಆ ಜನರ ನಾಶಕ್ಕೆ ಕರೆ ನೀಡಿಲ್ಲ. ರಾಷ್ಟ್ರಕ್ಕೆ ವಿರುದ್ಧವಾದ ಚಿಂತನಾ ಪ್ರಕ್ರಿಯೆಯನ್ನು ನಾಶ ಮಾಡಬೇಕು ಎಂದು ಕರೆ ನೀಡಿದ್ದೇನೆ. ನಾವು ಚಿಂತನೆಗಳನ್ನು ಶುದ್ಧೀಕರಿಸಲು ಬಯಸುತ್ತೇವೆ ಅಷ್ಟೆ. ಈ ಚಿಂತನಾ ಪ್ರಕ್ರಿಯೆಯನ್ನು ಬಿತ್ತಿದ ಬೀಜಗಳ ನಾಶದ ಬಗ್ಗೆ ನಾನು ಮಾತನಾಡಿದ್ದೇನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ಅದಾಗ್ಯೂ ಅನಿಲ್ ವಿಜ್ ಅವರ ಹೇಳಿಕೆಗಳು ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಬೆಂಗಳೂರು ಮೂಲದ ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್ ಎನ್ನುವ ತಂಡವೊಂದು ಸಚಿವರ ವಿರುದ್ಧ ದೂರು ದಾಖಲಿಸಿದೆ.

ಈ ದೂರಿಗೆ ಸ್ಪಂದಿಸುವುದಾಗಿ ಹೇಳಿದ ಸಚಿವರು, “ಈ ಜನರು (ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್) ಇಂಗ್ಲಿಷ್ ಶಾಲೆಗಳಿಂದ ಶಿಕ್ಷಣ ಪಡೆದಿದ್ದಾರೆ. ಅವರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಟ್ವೀಟ್‌ಗೆ ಸಂಬಂಧಿಸಿದಂತೆ ಜರ್ಮನಿಯಿಂದಲೂ ದೂರು ದಾಖಲಾಗಿದೆ. ಆದರೂ ನನ್ನ ಟ್ವೀಟನ್ನು ನಿರ್ಬಂಧಿಸಿಲ್ಲ. ಇದರಿಂದ ನನ್ನ ಟ್ವೀಟ್‌ನಲ್ಲಿ ಯಾವುದೇ ದೋಷವಿಲ್ಲ ಎಂಬುವುದು ತಿಳಿಯುತ್ತದೆ” ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ವಿದೇಶಿಯರೊಂದಿಗೆ ಸೇರಿಕೊಂಡು ನಡೆಸುವ ಪಿತೂರಿಯನ್ನು ನಿಲ್ಲಿಸಬೇಕು. ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್‌ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ದಿಶಾ ರವಿ ಪ್ರಕರಣದಲ್ಲಿ ಸಾಕಷ್ಟು ಮಾಹಿತಿಗಳು ಹೊರಬರುತ್ತಿವೆ. ರಾಷ್ಟ್ರದ ವಿರುದ್ಧ ಜನರನ್ನು ಸಂಘಟಿಸುವ ಮತ್ತು ವಿದೇಶಿಯರೊಂದಿಗೆ ಪಿತೂರಿ ನಡೆಸುತ್ತಿರುವ ಎಲ್ಲ ಜನರ ಜೊತೆಗಿನ ಇಂತಹ ಲಿಂಕ್‌ಗಳನ್ನು ಹೊರಗೆಳೆಯಬೇಕು ಎಂದು ಸಚಿವರು ಹೇಳಿದ್ದಾರೆ ಎಂಬುದಾಗಿ ಸ್ಕ್ರಾಲ್ ಇನ್ ವರದಿ ಮಾಡಿದೆ.

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ದಿಶಾಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...