Homeಮುಖಪುಟದಿಶಾ ಬಂಧನ: ತನ್ನ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಯಾಣದ ಬಿಜೆಪಿ ಸಚಿವ

ದಿಶಾ ಬಂಧನ: ತನ್ನ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಯಾಣದ ಬಿಜೆಪಿ ಸಚಿವ

ಅನಿಲ್ ವಿಜ್ ಅವರ ಹೇಳಿಕೆಗಳು ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಬೆಂಗಳೂರು ಮೂಲದ ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್ ಎನ್ನುವ ತಂಡವೊಂದು ಸಚಿವರ ವಿರುದ್ಧ ದೂರು ದಾಖಲಿಸಿದೆ.

- Advertisement -
- Advertisement -

ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಅವರು ದಿಶಾ ರವಿ ಬಂಧನಕ್ಕೆ ಸಂಬಂಧಿಸಿದಂತೆ ತಾನು ಮಾಡಿದ್ದ ಟ್ವೀಟ್‌ಗೆ ಸಮರ್ಥನೆ ನೀಡಿದ್ದಾರೆ. ಸಚಿವರು ತಮ್ಮ ಟ್ವೀಟ್‌ನಲ್ಲಿ “ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ನಾಶಮಾಡಬೇಕು” ಎಂದು ಬರೆದುಕೊಂಡಿದ್ದರು. ಇದು ದೇಶದಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿತ್ತು. ಆದರೆ ಈಗ ಸಚಿವರು ತಮ್ಮ ಹೇಳಿಕೆಗೆ ಸಮರ್ಥನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸುವಂತೆ ಸ್ವೀಡಿಷ್ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಟ್ವೀಟ್ ಮಾಡಿದ್ದ ಟೂಲ್‌ಕಿಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿಯನ್ನು ಬಂಧಿಸಲಾಗಿತ್ತು. ಇದರ ಬಗ್ಗೆ ಅನಿಲ್ ವಿಜ್ ಪ್ರತಿಕ್ರಿಯಿಸಿದ್ದರು. “ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” ಎಂದು ಅವರು ಸೋಮವಾರ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ತಮ್ಮ ಟ್ವೀಟ್ ಅನ್ನು ಸಮರ್ಥಿಸಿಕೊಂಡ ಅನಿಲ್ ವಿಜ್, “ನಾನು ಆ ಜನರ ನಾಶಕ್ಕೆ ಕರೆ ನೀಡಿಲ್ಲ. ರಾಷ್ಟ್ರಕ್ಕೆ ವಿರುದ್ಧವಾದ ಚಿಂತನಾ ಪ್ರಕ್ರಿಯೆಯನ್ನು ನಾಶ ಮಾಡಬೇಕು ಎಂದು ಕರೆ ನೀಡಿದ್ದೇನೆ. ನಾವು ಚಿಂತನೆಗಳನ್ನು ಶುದ್ಧೀಕರಿಸಲು ಬಯಸುತ್ತೇವೆ ಅಷ್ಟೆ. ಈ ಚಿಂತನಾ ಪ್ರಕ್ರಿಯೆಯನ್ನು ಬಿತ್ತಿದ ಬೀಜಗಳ ನಾಶದ ಬಗ್ಗೆ ನಾನು ಮಾತನಾಡಿದ್ದೇನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ಅದಾಗ್ಯೂ ಅನಿಲ್ ವಿಜ್ ಅವರ ಹೇಳಿಕೆಗಳು ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಬೆಂಗಳೂರು ಮೂಲದ ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್ ಎನ್ನುವ ತಂಡವೊಂದು ಸಚಿವರ ವಿರುದ್ಧ ದೂರು ದಾಖಲಿಸಿದೆ.

ಈ ದೂರಿಗೆ ಸ್ಪಂದಿಸುವುದಾಗಿ ಹೇಳಿದ ಸಚಿವರು, “ಈ ಜನರು (ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್) ಇಂಗ್ಲಿಷ್ ಶಾಲೆಗಳಿಂದ ಶಿಕ್ಷಣ ಪಡೆದಿದ್ದಾರೆ. ಅವರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಟ್ವೀಟ್‌ಗೆ ಸಂಬಂಧಿಸಿದಂತೆ ಜರ್ಮನಿಯಿಂದಲೂ ದೂರು ದಾಖಲಾಗಿದೆ. ಆದರೂ ನನ್ನ ಟ್ವೀಟನ್ನು ನಿರ್ಬಂಧಿಸಿಲ್ಲ. ಇದರಿಂದ ನನ್ನ ಟ್ವೀಟ್‌ನಲ್ಲಿ ಯಾವುದೇ ದೋಷವಿಲ್ಲ ಎಂಬುವುದು ತಿಳಿಯುತ್ತದೆ” ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ವಿದೇಶಿಯರೊಂದಿಗೆ ಸೇರಿಕೊಂಡು ನಡೆಸುವ ಪಿತೂರಿಯನ್ನು ನಿಲ್ಲಿಸಬೇಕು. ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್‌ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ದಿಶಾ ರವಿ ಪ್ರಕರಣದಲ್ಲಿ ಸಾಕಷ್ಟು ಮಾಹಿತಿಗಳು ಹೊರಬರುತ್ತಿವೆ. ರಾಷ್ಟ್ರದ ವಿರುದ್ಧ ಜನರನ್ನು ಸಂಘಟಿಸುವ ಮತ್ತು ವಿದೇಶಿಯರೊಂದಿಗೆ ಪಿತೂರಿ ನಡೆಸುತ್ತಿರುವ ಎಲ್ಲ ಜನರ ಜೊತೆಗಿನ ಇಂತಹ ಲಿಂಕ್‌ಗಳನ್ನು ಹೊರಗೆಳೆಯಬೇಕು ಎಂದು ಸಚಿವರು ಹೇಳಿದ್ದಾರೆ ಎಂಬುದಾಗಿ ಸ್ಕ್ರಾಲ್ ಇನ್ ವರದಿ ಮಾಡಿದೆ.

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ದಿಶಾಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...