Homeಮುಖಪುಟದಿಶಾ ಬಂಧನ: ತನ್ನ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಯಾಣದ ಬಿಜೆಪಿ ಸಚಿವ

ದಿಶಾ ಬಂಧನ: ತನ್ನ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡ ಹರಿಯಾಣದ ಬಿಜೆಪಿ ಸಚಿವ

ಅನಿಲ್ ವಿಜ್ ಅವರ ಹೇಳಿಕೆಗಳು ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಬೆಂಗಳೂರು ಮೂಲದ ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್ ಎನ್ನುವ ತಂಡವೊಂದು ಸಚಿವರ ವಿರುದ್ಧ ದೂರು ದಾಖಲಿಸಿದೆ.

- Advertisement -
- Advertisement -

ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಅವರು ದಿಶಾ ರವಿ ಬಂಧನಕ್ಕೆ ಸಂಬಂಧಿಸಿದಂತೆ ತಾನು ಮಾಡಿದ್ದ ಟ್ವೀಟ್‌ಗೆ ಸಮರ್ಥನೆ ನೀಡಿದ್ದಾರೆ. ಸಚಿವರು ತಮ್ಮ ಟ್ವೀಟ್‌ನಲ್ಲಿ “ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ನಾಶಮಾಡಬೇಕು” ಎಂದು ಬರೆದುಕೊಂಡಿದ್ದರು. ಇದು ದೇಶದಲ್ಲಿ ಪರ-ವಿರೋಧದ ಚರ್ಚೆಯನ್ನು ಹುಟ್ಟುಹಾಕಿತ್ತು. ಆದರೆ ಈಗ ಸಚಿವರು ತಮ್ಮ ಹೇಳಿಕೆಗೆ ಸಮರ್ಥನೆ ನೀಡುವ ಪ್ರಯತ್ನ ಮಾಡಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸುವಂತೆ ಸ್ವೀಡಿಷ್ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಟ್ವೀಟ್ ಮಾಡಿದ್ದ ಟೂಲ್‌ಕಿಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನ ಹವಾಮಾನ ಕಾರ್ಯಕರ್ತೆ ದಿಶಾ ರವಿಯನ್ನು ಬಂಧಿಸಲಾಗಿತ್ತು. ಇದರ ಬಗ್ಗೆ ಅನಿಲ್ ವಿಜ್ ಪ್ರತಿಕ್ರಿಯಿಸಿದ್ದರು. “ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” ಎಂದು ಅವರು ಸೋಮವಾರ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ತಮ್ಮ ಟ್ವೀಟ್ ಅನ್ನು ಸಮರ್ಥಿಸಿಕೊಂಡ ಅನಿಲ್ ವಿಜ್, “ನಾನು ಆ ಜನರ ನಾಶಕ್ಕೆ ಕರೆ ನೀಡಿಲ್ಲ. ರಾಷ್ಟ್ರಕ್ಕೆ ವಿರುದ್ಧವಾದ ಚಿಂತನಾ ಪ್ರಕ್ರಿಯೆಯನ್ನು ನಾಶ ಮಾಡಬೇಕು ಎಂದು ಕರೆ ನೀಡಿದ್ದೇನೆ. ನಾವು ಚಿಂತನೆಗಳನ್ನು ಶುದ್ಧೀಕರಿಸಲು ಬಯಸುತ್ತೇವೆ ಅಷ್ಟೆ. ಈ ಚಿಂತನಾ ಪ್ರಕ್ರಿಯೆಯನ್ನು ಬಿತ್ತಿದ ಬೀಜಗಳ ನಾಶದ ಬಗ್ಗೆ ನಾನು ಮಾತನಾಡಿದ್ದೇನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ದಿಶಾ ಅವರಂತೆ ಎಲ್ಲರೂ ಸುಳಿಯಲ್ಲಿದ್ದಾರೆ! – ಲಿಯೋ ಸಾಲ್ಡಾನಾ

ಅದಾಗ್ಯೂ ಅನಿಲ್ ವಿಜ್ ಅವರ ಹೇಳಿಕೆಗಳು ಭಾರಿ ಆಕ್ರೋಶಕ್ಕೆ ಕಾರಣವಾಗಿವೆ. ಬೆಂಗಳೂರು ಮೂಲದ ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್ ಎನ್ನುವ ತಂಡವೊಂದು ಸಚಿವರ ವಿರುದ್ಧ ದೂರು ದಾಖಲಿಸಿದೆ.

ಈ ದೂರಿಗೆ ಸ್ಪಂದಿಸುವುದಾಗಿ ಹೇಳಿದ ಸಚಿವರು, “ಈ ಜನರು (ಕ್ಯಾಂಪೇನ್ ಎಗೈನ್ಸ್ಟ್‌ ಹೇಟ್ ಸ್ಪೀಚ್) ಇಂಗ್ಲಿಷ್ ಶಾಲೆಗಳಿಂದ ಶಿಕ್ಷಣ ಪಡೆದಿದ್ದಾರೆ. ಅವರಿಗೆ ಹಿಂದಿ ಅರ್ಥವಾಗುವುದಿಲ್ಲ. ನನ್ನ ಟ್ವೀಟ್‌ಗೆ ಸಂಬಂಧಿಸಿದಂತೆ ಜರ್ಮನಿಯಿಂದಲೂ ದೂರು ದಾಖಲಾಗಿದೆ. ಆದರೂ ನನ್ನ ಟ್ವೀಟನ್ನು ನಿರ್ಬಂಧಿಸಿಲ್ಲ. ಇದರಿಂದ ನನ್ನ ಟ್ವೀಟ್‌ನಲ್ಲಿ ಯಾವುದೇ ದೋಷವಿಲ್ಲ ಎಂಬುವುದು ತಿಳಿಯುತ್ತದೆ” ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ವಿದೇಶಿಯರೊಂದಿಗೆ ಸೇರಿಕೊಂಡು ನಡೆಸುವ ಪಿತೂರಿಯನ್ನು ನಿಲ್ಲಿಸಬೇಕು. ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್‌ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ದಿಶಾ ರವಿ ಪ್ರಕರಣದಲ್ಲಿ ಸಾಕಷ್ಟು ಮಾಹಿತಿಗಳು ಹೊರಬರುತ್ತಿವೆ. ರಾಷ್ಟ್ರದ ವಿರುದ್ಧ ಜನರನ್ನು ಸಂಘಟಿಸುವ ಮತ್ತು ವಿದೇಶಿಯರೊಂದಿಗೆ ಪಿತೂರಿ ನಡೆಸುತ್ತಿರುವ ಎಲ್ಲ ಜನರ ಜೊತೆಗಿನ ಇಂತಹ ಲಿಂಕ್‌ಗಳನ್ನು ಹೊರಗೆಳೆಯಬೇಕು ಎಂದು ಸಚಿವರು ಹೇಳಿದ್ದಾರೆ ಎಂಬುದಾಗಿ ಸ್ಕ್ರಾಲ್ ಇನ್ ವರದಿ ಮಾಡಿದೆ.

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ದಿಶಾಳನ್ನು ದೆಹಲಿ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...