Homeಮುಖಪುಟವಿಎಚ್‌ಪಿ ವೇದಿಕೆಯಲ್ಲಿ ವಿವಾದಾತ್ಮಕ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್

ವಿಎಚ್‌ಪಿ ವೇದಿಕೆಯಲ್ಲಿ ವಿವಾದಾತ್ಮಕ ಹೇಳಿಕೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ‘ದೇಶವು ಬಹುಸಂಖ್ಯಾತರ ಇಚ್ಛೆಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು’ ಎಂಬ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರ ಹೇಳಿಕೆಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮನ್ಸ್ ನೀಡಿದೆ. ಅವರನ್ನು ಖುದ್ದಾಗಿ ಹಾಜರಾಗಲು ಸೂಚಿಸಿದೆ.

ಮೂಲಗಳ ಪ್ರಕಾರ, ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಮಂಗಳವಾರ (ಡಿಸೆಂಬರ್ 17) ಸುಪ್ರೀಂ ಕೋರ್ಟ್‌ನ ಚಳಿಗಾಲದ ವಿರಾಮದ ಮೊದಲು ಈ ವಿಷಯದ ಬಗ್ಗೆ ಚರ್ಚಿಸಲು ಸಭೆ ಸೇರಲಿದೆ.

ಡಿಸೆಂಬರ್ 8 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕ್ರಮದಲ್ಲಿ, ನ್ಯಾಯಮೂರ್ತಿ ಯಾದವ್ ಅವರು ಏಕರೂಪ ನಾಗರಿಕ ಸಂಹಿತೆಯನ್ನು ಅನುಮೋದಿಸಿದರು ಎಂದು ವರದಿಯಾಗಿದೆ. “ಇದು ಕಾನೂನು.. ವಾಸ್ತವವಾಗಿ, ಕಾನೂನು ಬಹುಸಂಖ್ಯಾತರ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಪ್ರಯೋಜನಕಾರಿಯೋ ಅದನ್ನು ಮಾತ್ರ ಸ್ವೀಕರಿಸಲಾಗುವುದು” ಎಂದು ಹೇಳಿದ್ದರು.

ಅವರ ಮಾತಿನ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆದ ಬಳಿಕ ಟೀಕೆಗೆ ಕಾರಣವಾಯಿತು. ವಿರೋಧ ಪಕ್ಷದ ನಾಯಕರು, ನ್ಯಾಯಾಧಿಶರ ಕಾಮೆಂಟ್‌ಗಳನ್ನು ವಿಭಜಕ ಮತ್ತು ಅಸಂವಿಧಾನಿಕ ಎಂದು ಕರೆದರು.

ನ್ಯಾಯಮೂರ್ತಿ ಯಾದವ್ ಅವರ ಹೇಳಿಕೆಗಳ ಕುರಿತು ಮಾಧ್ಯಮ ವರದಿಗಳಿಗೆ ಪ್ರತಿಕ್ರಿಯೆಯಾಗಿ, ಸುಪ್ರೀಂ ಕೋರ್ಟ್ ಡಿಸೆಂಬರ್ 10 ರಂದು ಅಲಹಾಬಾದ್ ಹೈಕೋರ್ಟ್‌ನಿಂದ ವರದಿ ಕೇಳಿದೆ. ಉನ್ನತ ನ್ಯಾಯಾಲಯದ ಅಧಿಕೃತ ಹೇಳಿಕೆಯಲ್ಲಿ, “ಅಲಹಾಬಾದ್‌ನಲ್ಲಿರುವ ನ್ಯಾಯಾಂಗದ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ನೀಡಿದ ಭಾಷಣದ ಪತ್ರಿಕೆಗಳ ವರದಿಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ.

ನ್ಯಾಯಮೂರ್ತಿ ಯಾದವ್ ಅವರ ಹೇಳಿಕೆಗಳನ್ನು ರಾಜಕೀಯ ಮತ್ತು ಕಾನೂನು ವಲಯಗಳಲ್ಲಿ ಖಂಡಿಸಲಾಯಿತು. ವಿಮರ್ಶಕರು ಅದನ್ನು ನ್ಯಾಯಾಂಗ ನಿಷ್ಪಕ್ಷಪಾತದ ಉಲ್ಲಂಘನೆ ಎಂದು ವಿವರಿಸಿದ್ದಾರೆ. ವಕೀಲ ಪ್ರಶಾಂತ್ ಭೂಷಣ್ ಮತ್ತು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರು ಮುಖ್ಯ ನ್ಯಾಯಮೂರ್ತಿ ಖನ್ನಾ ಅವರಿಗೆ ಪತ್ರ ಬರೆದು, ಹೇಳಿಕೆಗಳು ನ್ಯಾಯಾಧೀಶರ ಪ್ರಮಾಣವಚನವನ್ನು ಉಲ್ಲಂಘಿಸುತ್ತವೆ ಎಂದು ಪ್ರತಿಪಾದಿಸಿದರು.

ಭಾರತೀಯ ವಕೀಲರ ಸಂಘವು ನ್ಯಾಯಾಧೀಶರ ಹೇಳಿಕೆಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿತು. “ಕಠಿಣ ಮತ್ತು ದೃಢವಾದ ರೀತಿಯಲ್ಲಿ” ಸಮಸ್ಯೆಯನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿತು.

ಈ ಮಧ್ಯೆ, ಕಳೆದ ಶುಕ್ರವಾರ ರಾಜ್ಯಸಭೆಯಲ್ಲಿ 55 ಪ್ರತಿಪಕ್ಷ ಸಂಸದರು ನ್ಯಾಯಮೂರ್ತಿ ಯಾದವ್ ಅವರನ್ನು ದೋಷಾರೋಪಣೆ ಮಾಡುವಂತೆ ನೋಟಿಸ್ ಸಲ್ಲಿಸಿದ್ದಾರೆ. ನ್ಯಾಯಾಧೀಶರು “ದ್ವೇಷ ಭಾಷಣ ಮತ್ತು ಪ್ರಚೋದನೆಯಲ್ಲಿ ತೊಡಗಿದ್ದಾರೆ. ಅವರು ವಿಎಚ್‌ಪಿ ಸಮಾರಂಭದ ತಮ್ಮ ಭಾಷಣದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿದರು; ಪಕ್ಷಪಾತ ಮತ್ತು ಪೂರ್ವಾಗ್ರಹವನ್ನು ಪ್ರದರ್ಶಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿ; ಅವಿಶ್ವಾಸ ಗೊತ್ತುವಳಿ ಮಂಡನೆಯ ನಡುವೆಯೇ ಇಂದು ರಾಜ್ಯಸಭೆಯಲ್ಲಿ ಸಂವಿಧಾನ ಕುರಿತು ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...