Homeಮುಖಪುಟಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

- Advertisement -
- Advertisement -

ಕಳೆದ ಕೆಲವು ದಿನಗಳಲ್ಲಿ ಲೈಂಗಿಕ ದೌರ್ಜನ್ಯಗಳ ಕುರಿತು ಎರಡು ವಿವಾದಾತ್ಮಕ ಆದೇಶಗಳನ್ನು ಜಾರಿಗೊಳಿಸಿದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ಶಾಶ್ವತ ಸ್ಥಾನಮಾನದ ದೃಢಿಕರಣದ ಕುರಿತು ತಾನು ಮಾಡಿದ್ದ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲ್ಜಿಯಂ ಹಿಂತೆಗೆದುಕೊಂಡಿದೆ. ಅಂತಹ ಪ್ರಕರಣಗಳಲ್ಲಿ “ಹೆಚ್ಚಿನ ಮಾನ್ಯತೆ” ನೀಡುವ ಅಗತ್ಯವನ್ನು ಆಧರಿಸಿ ಶಾಶ್ವತ ಸ್ಥಾನಮಾನವನ್ನು ನೀಡದಿರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ ನ್ಯಾಯಾಲಯದ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

“ಆ ನ್ಯಾಯಾಧೀಶೆಯ ವಿರುದ್ಧ ವೈಯಕ್ತಿಕವಾಗಿ ಏನೂ ಇಲ್ಲ. ಅವರಿಗೆ ಇನ್ನೂ ಅನುಭವ ಬೇಕು ಮತ್ತು ಅವರು ವಕೀಲರಾಗಿದ್ದಾಗ ಈ ರೀತಿಯ ಪ್ರಕರಣಗಳನ್ನು ಎದುರಿಸದಿರಬಹುದು… ಅವರಿಗೆ ತರಬೇತಿ ಬೇಕು” ಎಂದು ಕೊಲೆಜಿಯಂ ಅಭಿಪ್ರಾಯ ಪಟ್ಟಿದ್ದಾಗಿ ಸುಪ್ರೀಂ ಕೋರ್ಟ್‌ನ ಮೂಲಗಳು ಉಲ್ಲೇಖಿಸಿವೆ.

ಖಾಯಂ ನ್ಯಾಯಾಧೀಶರನ್ನು ನೇಮಿಸುವ ಅಥವಾ ನ್ಯಾಯಾಧೀಶರನ್ನು ಶಾಶ್ವತಗೊಳಿಸುವ ಕುರಿತು ಕೊಲೆಜಿಯಂ ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳಿಸುತ್ತದೆ ಮತ್ತು ನಂತರ ಕೇಂದ್ರ ಅದನ್ನು ಅನುಮೋದಿಸುತ್ತದೆ. ಕೆಲವೊಮ್ಮೆ, ಶಿಫಾರಸುಗಳನ್ನು ಪ್ರಶ್ನೆಗಳೊಂದಿಗೆ ಕೊಲೆಜಿಯಂಗೆ ಹಿಂತಿರುಗಿಸಲಾಗುತ್ತದೆ.

ಜನವರಿ 20 ರಂದು, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಖಾಯಂ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ಹೆಸರನ್ನು ದೃಢಿಕರಿಸಲು ಕೊಲೆಜಿಯಂ ಶಿಫಾರಸು ಮಾಡಿತ್ತು.

ನ್ಯಾಯಾಧೀಶೆ ಇತ್ತೀಚೆಗೆ ಲೈಂಗಿಕ ದೌರ್ಜನ್ಯದ ಕುರಿತು ಎರಡು ತೀರ್ಪುಗಳನ್ನು ಜಾರಿಗೊಳಿಸಿದರು, ಅದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಈಗ ಅದೇ ಅವರಿಗೆ ಮುಳುವಾಗಿದೆ.

ಜನವರಿ 19 ರ ತೀರ್ಪಿನಲ್ಲಿ, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅಪ್ರಾಪ್ತ ವಯಸ್ಕಳ ಸ್ತನವನ್ನು ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಅವರು ವಿವಾದಾತ್ಮಕ ತೀರ್ಪು ನೀಡಿದ್ದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಬುಧವಾರ ಆ ಆದೇಶವನ್ನು ತಡೆಹಿಡಿದಿದೆ. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಗುರುವಾರ, ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಗಣದೇವಾಲಾ ಅವರು ‘ ಅಪ್ರಾಪ್ತ ವಯಸ್ಕಳ ಕೈಗಳನ್ನು ಹಿಡಿದಿಟ್ಟುಕೊಳ್ಳುವ ಕ್ರಿಯೆಗಳು, ಅಥವಾ ಅವಳ ಎದುರು ಪ್ಯಾಂಟ್ ಜಿಪ್ ತೆರೆಯುವುದು ‘ಲೈಂಗಿಕ ದೌರ್ಜನ್ಯ’ದ ವ್ಯಾಖ್ಯಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ತೀರ್ಪು ನೀಡಿದ್ದರು. ಈ ಆಧಾರದಲ್ಲಿ ಆರೋಪಿಯೊಬ್ಬನಿಗೆ ಪೋಕ್ಸೋ ಅಡಿಯಲ್ಲಿ ನೀಡಿದ ಶಿಕ್ಷೆಯನ್ನು ರದ್ದುಪಡಿಸಿದ್ದರು. ಈ ಪ್ರಕರಣದಲ್ಲಿ ಬಲಿಪಶು, ಐದು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯಾಗಿದ್ದಳು.

ಈ ತೀರ್ಪುಗಳ ನಂತರ, ಕೊಲೆಜಿಯಂ ನ್ಯಾಯಮೂರ್ತಿಗಳು ಗಣದೇವಾಲಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಶಿಫಾರಸು ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆದರು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...