Homeಮುಖಪುಟಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

- Advertisement -
- Advertisement -

ಕಳೆದ ಕೆಲವು ದಿನಗಳಲ್ಲಿ ಲೈಂಗಿಕ ದೌರ್ಜನ್ಯಗಳ ಕುರಿತು ಎರಡು ವಿವಾದಾತ್ಮಕ ಆದೇಶಗಳನ್ನು ಜಾರಿಗೊಳಿಸಿದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ಶಾಶ್ವತ ಸ್ಥಾನಮಾನದ ದೃಢಿಕರಣದ ಕುರಿತು ತಾನು ಮಾಡಿದ್ದ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲ್ಜಿಯಂ ಹಿಂತೆಗೆದುಕೊಂಡಿದೆ. ಅಂತಹ ಪ್ರಕರಣಗಳಲ್ಲಿ “ಹೆಚ್ಚಿನ ಮಾನ್ಯತೆ” ನೀಡುವ ಅಗತ್ಯವನ್ನು ಆಧರಿಸಿ ಶಾಶ್ವತ ಸ್ಥಾನಮಾನವನ್ನು ನೀಡದಿರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ ನ್ಯಾಯಾಲಯದ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

“ಆ ನ್ಯಾಯಾಧೀಶೆಯ ವಿರುದ್ಧ ವೈಯಕ್ತಿಕವಾಗಿ ಏನೂ ಇಲ್ಲ. ಅವರಿಗೆ ಇನ್ನೂ ಅನುಭವ ಬೇಕು ಮತ್ತು ಅವರು ವಕೀಲರಾಗಿದ್ದಾಗ ಈ ರೀತಿಯ ಪ್ರಕರಣಗಳನ್ನು ಎದುರಿಸದಿರಬಹುದು… ಅವರಿಗೆ ತರಬೇತಿ ಬೇಕು” ಎಂದು ಕೊಲೆಜಿಯಂ ಅಭಿಪ್ರಾಯ ಪಟ್ಟಿದ್ದಾಗಿ ಸುಪ್ರೀಂ ಕೋರ್ಟ್‌ನ ಮೂಲಗಳು ಉಲ್ಲೇಖಿಸಿವೆ.

ಖಾಯಂ ನ್ಯಾಯಾಧೀಶರನ್ನು ನೇಮಿಸುವ ಅಥವಾ ನ್ಯಾಯಾಧೀಶರನ್ನು ಶಾಶ್ವತಗೊಳಿಸುವ ಕುರಿತು ಕೊಲೆಜಿಯಂ ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳಿಸುತ್ತದೆ ಮತ್ತು ನಂತರ ಕೇಂದ್ರ ಅದನ್ನು ಅನುಮೋದಿಸುತ್ತದೆ. ಕೆಲವೊಮ್ಮೆ, ಶಿಫಾರಸುಗಳನ್ನು ಪ್ರಶ್ನೆಗಳೊಂದಿಗೆ ಕೊಲೆಜಿಯಂಗೆ ಹಿಂತಿರುಗಿಸಲಾಗುತ್ತದೆ.

ಜನವರಿ 20 ರಂದು, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಖಾಯಂ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ಹೆಸರನ್ನು ದೃಢಿಕರಿಸಲು ಕೊಲೆಜಿಯಂ ಶಿಫಾರಸು ಮಾಡಿತ್ತು.

ನ್ಯಾಯಾಧೀಶೆ ಇತ್ತೀಚೆಗೆ ಲೈಂಗಿಕ ದೌರ್ಜನ್ಯದ ಕುರಿತು ಎರಡು ತೀರ್ಪುಗಳನ್ನು ಜಾರಿಗೊಳಿಸಿದರು, ಅದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಈಗ ಅದೇ ಅವರಿಗೆ ಮುಳುವಾಗಿದೆ.

ಜನವರಿ 19 ರ ತೀರ್ಪಿನಲ್ಲಿ, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅಪ್ರಾಪ್ತ ವಯಸ್ಕಳ ಸ್ತನವನ್ನು ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಅವರು ವಿವಾದಾತ್ಮಕ ತೀರ್ಪು ನೀಡಿದ್ದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಬುಧವಾರ ಆ ಆದೇಶವನ್ನು ತಡೆಹಿಡಿದಿದೆ. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಗುರುವಾರ, ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಗಣದೇವಾಲಾ ಅವರು ‘ ಅಪ್ರಾಪ್ತ ವಯಸ್ಕಳ ಕೈಗಳನ್ನು ಹಿಡಿದಿಟ್ಟುಕೊಳ್ಳುವ ಕ್ರಿಯೆಗಳು, ಅಥವಾ ಅವಳ ಎದುರು ಪ್ಯಾಂಟ್ ಜಿಪ್ ತೆರೆಯುವುದು ‘ಲೈಂಗಿಕ ದೌರ್ಜನ್ಯ’ದ ವ್ಯಾಖ್ಯಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ತೀರ್ಪು ನೀಡಿದ್ದರು. ಈ ಆಧಾರದಲ್ಲಿ ಆರೋಪಿಯೊಬ್ಬನಿಗೆ ಪೋಕ್ಸೋ ಅಡಿಯಲ್ಲಿ ನೀಡಿದ ಶಿಕ್ಷೆಯನ್ನು ರದ್ದುಪಡಿಸಿದ್ದರು. ಈ ಪ್ರಕರಣದಲ್ಲಿ ಬಲಿಪಶು, ಐದು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯಾಗಿದ್ದಳು.

ಈ ತೀರ್ಪುಗಳ ನಂತರ, ಕೊಲೆಜಿಯಂ ನ್ಯಾಯಮೂರ್ತಿಗಳು ಗಣದೇವಾಲಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಶಿಫಾರಸು ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆದರು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...