Homeಮುಖಪುಟಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ತೀರ್ಪು: ನ್ಯಾಯಾಧೀಶೆಯ ದೃಢೀಕರಣ ತಡೆ ಹಿಡಿದ ಸುಪ್ರಿಂ

- Advertisement -
- Advertisement -

ಕಳೆದ ಕೆಲವು ದಿನಗಳಲ್ಲಿ ಲೈಂಗಿಕ ದೌರ್ಜನ್ಯಗಳ ಕುರಿತು ಎರಡು ವಿವಾದಾತ್ಮಕ ಆದೇಶಗಳನ್ನು ಜಾರಿಗೊಳಿಸಿದ ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ಶಾಶ್ವತ ಸ್ಥಾನಮಾನದ ದೃಢಿಕರಣದ ಕುರಿತು ತಾನು ಮಾಡಿದ್ದ ಶಿಫಾರಸನ್ನು ಸುಪ್ರೀಂ ಕೋರ್ಟ್ ಕೊಲ್ಜಿಯಂ ಹಿಂತೆಗೆದುಕೊಂಡಿದೆ. ಅಂತಹ ಪ್ರಕರಣಗಳಲ್ಲಿ “ಹೆಚ್ಚಿನ ಮಾನ್ಯತೆ” ನೀಡುವ ಅಗತ್ಯವನ್ನು ಆಧರಿಸಿ ಶಾಶ್ವತ ಸ್ಥಾನಮಾನವನ್ನು ನೀಡದಿರುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಉನ್ನತ ನ್ಯಾಯಾಲಯದ ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

“ಆ ನ್ಯಾಯಾಧೀಶೆಯ ವಿರುದ್ಧ ವೈಯಕ್ತಿಕವಾಗಿ ಏನೂ ಇಲ್ಲ. ಅವರಿಗೆ ಇನ್ನೂ ಅನುಭವ ಬೇಕು ಮತ್ತು ಅವರು ವಕೀಲರಾಗಿದ್ದಾಗ ಈ ರೀತಿಯ ಪ್ರಕರಣಗಳನ್ನು ಎದುರಿಸದಿರಬಹುದು… ಅವರಿಗೆ ತರಬೇತಿ ಬೇಕು” ಎಂದು ಕೊಲೆಜಿಯಂ ಅಭಿಪ್ರಾಯ ಪಟ್ಟಿದ್ದಾಗಿ ಸುಪ್ರೀಂ ಕೋರ್ಟ್‌ನ ಮೂಲಗಳು ಉಲ್ಲೇಖಿಸಿವೆ.

ಖಾಯಂ ನ್ಯಾಯಾಧೀಶರನ್ನು ನೇಮಿಸುವ ಅಥವಾ ನ್ಯಾಯಾಧೀಶರನ್ನು ಶಾಶ್ವತಗೊಳಿಸುವ ಕುರಿತು ಕೊಲೆಜಿಯಂ ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳಿಸುತ್ತದೆ ಮತ್ತು ನಂತರ ಕೇಂದ್ರ ಅದನ್ನು ಅನುಮೋದಿಸುತ್ತದೆ. ಕೆಲವೊಮ್ಮೆ, ಶಿಫಾರಸುಗಳನ್ನು ಪ್ರಶ್ನೆಗಳೊಂದಿಗೆ ಕೊಲೆಜಿಯಂಗೆ ಹಿಂತಿರುಗಿಸಲಾಗುತ್ತದೆ.

ಜನವರಿ 20 ರಂದು, ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ಖಾಯಂ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಪುಷ್ಪಾ ಗಣದೇವಾಲಾ ಅವರ ಹೆಸರನ್ನು ದೃಢಿಕರಿಸಲು ಕೊಲೆಜಿಯಂ ಶಿಫಾರಸು ಮಾಡಿತ್ತು.

ನ್ಯಾಯಾಧೀಶೆ ಇತ್ತೀಚೆಗೆ ಲೈಂಗಿಕ ದೌರ್ಜನ್ಯದ ಕುರಿತು ಎರಡು ತೀರ್ಪುಗಳನ್ನು ಜಾರಿಗೊಳಿಸಿದರು, ಅದು ಭಾರಿ ಕೋಲಾಹಲಕ್ಕೆ ಕಾರಣವಾಯಿತು. ಈಗ ಅದೇ ಅವರಿಗೆ ಮುಳುವಾಗಿದೆ.

ಜನವರಿ 19 ರ ತೀರ್ಪಿನಲ್ಲಿ, “ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ” ಅಪ್ರಾಪ್ತ ವಯಸ್ಕಳ ಸ್ತನವನ್ನು ಹಿಡಿಯುವುದನ್ನು ಲೈಂಗಿಕ ದೌರ್ಜನ್ಯ ಎಂದು ಕರೆಯಲಾಗುವುದಿಲ್ಲ ಎಂದು ಪೋಕ್ಸೋ ಕಾಯಿದೆಯಡಿ ವ್ಯಾಖ್ಯಾನಿಸಲಾಗಿದೆ ಎಂದು ಅವರು ವಿವಾದಾತ್ಮಕ ತೀರ್ಪು ನೀಡಿದ್ದರು.

ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ನ್ಯಾಯಾಧೀಶರ ಈ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಬುಧವಾರ ಆ ಆದೇಶವನ್ನು ತಡೆಹಿಡಿದಿದೆ. ‘ಈ ಆದೇಶವು ಗೊಂದಲದ ಮತ್ತು ಅಪಾಯಕಾರಿ ಪೂರ್ವನಿದರ್ಶನವನ್ನು ಸೃಷ್ಟಿಸುತ್ತದೆ’ ಎಂದು ಅಟಾರ್ನಿ ಜನರಲ್ ಹೇಳಿದ್ದರು.

ಗುರುವಾರ, ಮತ್ತೊಂದು ಪ್ರಕರಣದಲ್ಲಿ, ನ್ಯಾಯಮೂರ್ತಿ ಗಣದೇವಾಲಾ ಅವರು ‘ ಅಪ್ರಾಪ್ತ ವಯಸ್ಕಳ ಕೈಗಳನ್ನು ಹಿಡಿದಿಟ್ಟುಕೊಳ್ಳುವ ಕ್ರಿಯೆಗಳು, ಅಥವಾ ಅವಳ ಎದುರು ಪ್ಯಾಂಟ್ ಜಿಪ್ ತೆರೆಯುವುದು ‘ಲೈಂಗಿಕ ದೌರ್ಜನ್ಯ’ದ ವ್ಯಾಖ್ಯಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ತೀರ್ಪು ನೀಡಿದ್ದರು. ಈ ಆಧಾರದಲ್ಲಿ ಆರೋಪಿಯೊಬ್ಬನಿಗೆ ಪೋಕ್ಸೋ ಅಡಿಯಲ್ಲಿ ನೀಡಿದ ಶಿಕ್ಷೆಯನ್ನು ರದ್ದುಪಡಿಸಿದ್ದರು. ಈ ಪ್ರಕರಣದಲ್ಲಿ ಬಲಿಪಶು, ಐದು ವರ್ಷದ ಅಪ್ರಾಪ್ತ ವಯಸ್ಕ ಬಾಲಕಿಯಾಗಿದ್ದಳು.

ಈ ತೀರ್ಪುಗಳ ನಂತರ, ಕೊಲೆಜಿಯಂ ನ್ಯಾಯಮೂರ್ತಿಗಳು ಗಣದೇವಾಲಾ ಅವರನ್ನು ಖಾಯಂ ನ್ಯಾಯಾಧೀಶರನ್ನಾಗಿ ಶಿಫಾರಸು ಮಾಡುವ ನಿರ್ಧಾರವನ್ನು ಹಿಂದಕ್ಕೆ ಪಡೆದರು ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಅಪ್ರಾಪ್ತರ ಎದುರು ಪ್ಯಾಂಟ್ ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...