Homeಮುಖಪುಟಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

- Advertisement -
- Advertisement -

ಉತ್ತರಪ್ರದೇಶದ ಕಾಲೇಜೊಂದರ ಫ್ಯಾಷನ್ ಶೋನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ನಡೆಸಿದ್ದು ಜಮಿಯತ್ ಉಲಾಮಾ-ಇ-ಹಿಂದ್ ಈ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ.

ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರದ ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ, ಕಾರ್ಯಕ್ರಮದ ಆಯೋಜಕರು ಧರ್ಮವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಸಾಂಪ್ರದಾಯಿಕ ಉಡುಪನ್ನು ಅಗೌರವದಿಂದ ಚಿತ್ರಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಆಯೋಜಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ಶ್ರೀ ರಾಮ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಫ್ಯಾಷನ್ ಶೋ ವಿಡಿಯೋ ವೈರಲ್‌ ಬಳಿಕ ವಿವಾದ ಭುಗಿಲೆದ್ದಿದೆ. ವಿಡಿಯೋದಲ್ಲಿ  ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ಮಾಡುವುದು ಸೆರೆಯಾಗಿತ್ತು.

ಬುರ್ಖಾ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದು ಪರ್ದಾ ಸಂಪ್ರದಾಯವನ್ನು ಪ್ರತಿನಿಧಿಸುತ್ತದೆ. ಫ್ಯಾಶನ್ ಶೋನಲ್ಲಿ ಬುರ್ಖಾವನ್ನು ಪ್ರದರ್ಶನದ ವಸ್ತುವಾಗಿ ಪರಿಗಣಿಸಬಾರದು. ಈ ಘಟನೆಯು ವಸ್ತ್ರಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಖಾಸ್ಮಿ ಹೇಳಿದ್ದು, ಬುರ್ಖಾವನ್ನು ಈ ರೀತಿಯಾಗಿ ಬಳಸಿರುವುದು ಖಂಡನೀಯ ಮತ್ತು ಕಾಲೇಜು ಆಡಳಿತಾಧಿಕಾರಿಗಳು ತಕ್ಷಣ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅವರು ಕ್ಷಮೆಯಾಚಿಸಲು ವಿಫಲವಾದರೆ, ನಮ್ಮ ಸಂಘಟನೆಯು ಕಾಲೇಜು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಇಂತಹ ಘಟನೆ ಧಾರ್ಮಿಕ ಭಾವನೆಗಳನ್ನು ಅಗೌರವಿಸುವುದು ಮಾತ್ರವಲ್ಲದೆ ಸಾಂಸ್ಕೃತಿಕ ಆಚರಣೆಗಳ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತವೆ ಎಂದು ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ ಹೇಳಿದ್ದಾರೆ.

ಬುರ್ಖಾ ಅಥವಾ ಫರ್ದಾ ಎನ್ನುವುದು ಮುಸ್ಲಿಂ ಮಹಿಳೆಯರು ಬಳಸುವ ವಸ್ತ್ರವಾಗಿದೆ. ಬುರ್ಖಾ ಇತರ ವಸ್ತ್ರಗಳಂತೆ ಕೇವಲ ವಸ್ತ್ರವಲ್ಲ ಅದು ಇಸ್ಲಾಂ ಧರ್ಮದ ಧಾರ್ಮಿಕ ನಂಬಿಕೆಯ ಒಂದು ಭಾಗ. ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವ ಸಂದರ್ಭಗಳಲ್ಲಿ ಬುರ್ಖಾವನ್ನು ಧರಿಸುತ್ತಾರೆ. ಬುರ್ಖಾ ಎಲ್ಲಾ ಕೆಟ್ಟ ದೃಷ್ಠಿಯಿಂದ ಮಹಿಳೆಯರನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಇಸ್ಲಾಂ ಧರ್ಮದಲ್ಲಿದೆ.

ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಇಸ್ಲಾಮಿನ ಕಡ್ಡಾಯ ನಿಯಮಗಳಲ್ಲಿ ಒಂದಾಗಿದೆ. ಮಹಿಳೆಯರು ತಮ್ಮ ಎರಡು ಕಣ್ಣುಗಳು ಮತ್ತು ಮುಂಗೈಗಳನ್ನು ಹೊರತು ಇತರ ಯಾವುದೇ ಅಂಗಾಗಳನ್ನು ತನ್ನ ಪತಿ, ಪೋಷಕರು ಮತ್ತು ಸಹೋದರರನ್ನು ಹೊರತು ಪಡಿಸಿ ಇತರ ಯಾವುದೇ ಅನ್ಯ ಪುರುಷನಿಗೆ ಪ್ರದರ್ಶಿಸಬಾರದೆಂಬ ನಿಯಮ ಇಸ್ಲಾಮಿನಲ್ಲಿದೆ. ಅದಕ್ಕಾಗಿ ಸಂಪೂರ್ಣ ಮೈಮುಚ್ಚಲು ಬುರ್ಖಾವನ್ನು ಧರಿಸಲಾಗುತ್ತದೆ. ಆದರೆ ಇದೇ ಸಾಂಪ್ರದಾಯಿಕ ವಸ್ತ್ರವನ್ನು ಫ್ಯಾಷನ್‌ ಶೋನಲ್ಲಿ ಬಳಸಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಇದನ್ನು ಓದಿ: ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...