Homeಮುಖಪುಟಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

ಕಾಲೇಜಿನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌: ಭುಗಿಲೆದ್ದ ವಿವಾದ

- Advertisement -
- Advertisement -

ಉತ್ತರಪ್ರದೇಶದ ಕಾಲೇಜೊಂದರ ಫ್ಯಾಷನ್ ಶೋನಲ್ಲಿ ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ನಡೆಸಿದ್ದು ಜಮಿಯತ್ ಉಲಾಮಾ-ಇ-ಹಿಂದ್ ಈ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ.

ಈ ಬಗ್ಗೆ ಮಾತನಾಡಿದ ಮುಜಾಫರ್‌ನಗರದ ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ, ಕಾರ್ಯಕ್ರಮದ ಆಯೋಜಕರು ಧರ್ಮವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಸಾಂಪ್ರದಾಯಿಕ ಉಡುಪನ್ನು ಅಗೌರವದಿಂದ ಚಿತ್ರಿಸಲಾಗಿದೆ. ಈ ಬಗ್ಗೆ ಕಾರ್ಯಕ್ರಮದ ಆಯೋಜಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ಶ್ರೀ ರಾಮ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಫ್ಯಾಷನ್ ಶೋ ವಿಡಿಯೋ ವೈರಲ್‌ ಬಳಿಕ ವಿವಾದ ಭುಗಿಲೆದ್ದಿದೆ. ವಿಡಿಯೋದಲ್ಲಿ  ಬುರ್ಖಾ ಧರಿಸಿ ಕ್ಯಾಟ್‌ವಾಕ್‌ ಮಾಡುವುದು ಸೆರೆಯಾಗಿತ್ತು.

ಬುರ್ಖಾ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿದೆ. ಇದು ಪರ್ದಾ ಸಂಪ್ರದಾಯವನ್ನು ಪ್ರತಿನಿಧಿಸುತ್ತದೆ. ಫ್ಯಾಶನ್ ಶೋನಲ್ಲಿ ಬುರ್ಖಾವನ್ನು ಪ್ರದರ್ಶನದ ವಸ್ತುವಾಗಿ ಪರಿಗಣಿಸಬಾರದು. ಈ ಘಟನೆಯು ವಸ್ತ್ರಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಖಾಸ್ಮಿ ಹೇಳಿದ್ದು, ಬುರ್ಖಾವನ್ನು ಈ ರೀತಿಯಾಗಿ ಬಳಸಿರುವುದು ಖಂಡನೀಯ ಮತ್ತು ಕಾಲೇಜು ಆಡಳಿತಾಧಿಕಾರಿಗಳು ತಕ್ಷಣ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಅವರು ಕ್ಷಮೆಯಾಚಿಸಲು ವಿಫಲವಾದರೆ, ನಮ್ಮ ಸಂಘಟನೆಯು ಕಾಲೇಜು ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಇಂತಹ ಘಟನೆ ಧಾರ್ಮಿಕ ಭಾವನೆಗಳನ್ನು ಅಗೌರವಿಸುವುದು ಮಾತ್ರವಲ್ಲದೆ ಸಾಂಸ್ಕೃತಿಕ ಆಚರಣೆಗಳ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗುತ್ತವೆ ಎಂದು ಜಮಿಯತ್ ಉಲಮಾ-ಇ-ಹಿಂದ್ ಸಂಚಾಲಕ ಮೌಲಾನಾ ಮುಕರ್ರಂ ಖಾಸ್ಮಿ ಹೇಳಿದ್ದಾರೆ.

ಬುರ್ಖಾ ಅಥವಾ ಫರ್ದಾ ಎನ್ನುವುದು ಮುಸ್ಲಿಂ ಮಹಿಳೆಯರು ಬಳಸುವ ವಸ್ತ್ರವಾಗಿದೆ. ಬುರ್ಖಾ ಇತರ ವಸ್ತ್ರಗಳಂತೆ ಕೇವಲ ವಸ್ತ್ರವಲ್ಲ ಅದು ಇಸ್ಲಾಂ ಧರ್ಮದ ಧಾರ್ಮಿಕ ನಂಬಿಕೆಯ ಒಂದು ಭಾಗ. ಮುಸ್ಲಿಂ ಮಹಿಳೆಯರು ಮನೆಯಿಂದ ಹೊರಗೆ ಹೋಗುವ ಸಂದರ್ಭಗಳಲ್ಲಿ ಬುರ್ಖಾವನ್ನು ಧರಿಸುತ್ತಾರೆ. ಬುರ್ಖಾ ಎಲ್ಲಾ ಕೆಟ್ಟ ದೃಷ್ಠಿಯಿಂದ ಮಹಿಳೆಯರನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಇಸ್ಲಾಂ ಧರ್ಮದಲ್ಲಿದೆ.

ಮುಸ್ಲಿಂ ಮಹಿಳೆಯರು ಬುರ್ಖಾ ಧರಿಸುವುದು ಇಸ್ಲಾಮಿನ ಕಡ್ಡಾಯ ನಿಯಮಗಳಲ್ಲಿ ಒಂದಾಗಿದೆ. ಮಹಿಳೆಯರು ತಮ್ಮ ಎರಡು ಕಣ್ಣುಗಳು ಮತ್ತು ಮುಂಗೈಗಳನ್ನು ಹೊರತು ಇತರ ಯಾವುದೇ ಅಂಗಾಗಳನ್ನು ತನ್ನ ಪತಿ, ಪೋಷಕರು ಮತ್ತು ಸಹೋದರರನ್ನು ಹೊರತು ಪಡಿಸಿ ಇತರ ಯಾವುದೇ ಅನ್ಯ ಪುರುಷನಿಗೆ ಪ್ರದರ್ಶಿಸಬಾರದೆಂಬ ನಿಯಮ ಇಸ್ಲಾಮಿನಲ್ಲಿದೆ. ಅದಕ್ಕಾಗಿ ಸಂಪೂರ್ಣ ಮೈಮುಚ್ಚಲು ಬುರ್ಖಾವನ್ನು ಧರಿಸಲಾಗುತ್ತದೆ. ಆದರೆ ಇದೇ ಸಾಂಪ್ರದಾಯಿಕ ವಸ್ತ್ರವನ್ನು ಫ್ಯಾಷನ್‌ ಶೋನಲ್ಲಿ ಬಳಸಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಇದನ್ನು ಓದಿ: ಎಲ್ಗರ್ ಪರಿಷತ್ ಪ್ರಕರಣ: ವರವರ ರಾವ್ ಹೈದರಾಬಾದ್‌ ಪ್ರಯಾಣಕ್ಕೆ ಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...