Homeಮುಖಪುಟವಿವಾದಕ್ಕೆ ಒಳಗಾಗಿರುವ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅಧಿಕಾರಾವಧಿ ಡಿಸೆಂಬರ್‌ 31ಕ್ಕೆ ಅಂತ್ಯ

ವಿವಾದಕ್ಕೆ ಒಳಗಾಗಿರುವ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅಧಿಕಾರಾವಧಿ ಡಿಸೆಂಬರ್‌ 31ಕ್ಕೆ ಅಂತ್ಯ

- Advertisement -
- Advertisement -

ಬಾಲಿವುಡ್ ನಟ ಶಾರುಖ್ ಖಾನ್ ಮಗ ಆರ್ಯನ್‌ ಖಾನ್ ಪ್ರಕರಣದಲ್ಲಿ ವಿವಾದದಿಂದ ಗುರುತಿಸಲ್ಪಟ್ಟಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಜೊತೆಗೆ ಐಆರ್‌ಎಸ್ ಅಧಿಕಾರಿಯಾಗಿರುವ ಸಮೀರ್ ವಾಂಖೆಡೆ ಅವರ ಅಧಿಕಾರಾವಧಿ ಡಿಸೆಂಬರ್ 31 ರಂದು ಕೊನೆಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಮೀರ್ ವಾಂಖೆಡೆ, 2008-ಬ್ಯಾಚ್‌ನ ಭಾರತೀಯ ಕಂದಾಯ ಸೇವಾ ಅಧಿಕಾರಿ, ಸೆಪ್ಟೆಂಬರ್ 2020 ರಿಂದ NCB ಗೆ ಡೆಪ್ಯುಟೇಶನ್‌ನಲ್ಲಿದ್ದರು. ಪ್ರಸ್ತುತ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮುಂಬೈ ವಲಯ ನಿರ್ದೇಶಕರಾಗಿದ್ದಾರೆ. ಈ ಹಿಂದೆ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಅಸಹಜ ಸಾವಿನ ನಂತರ ಬಾಲಿವುಡ್ ಸೆಲೆಬ್ರಿಟಿಗಳನ್ನು ಒಳಗೊಂಡಿರುವ ಡ್ರಗ್ ರಾಕೆಟ್ ವಿರುದ್ಧ ಎನ್‌ಸಿಬಿಯ ಮುಂಬೈ ವಲಯ ನಿರ್ದೇಶಕರಾಗಿ ಸಮೀರ್ ವಾಂಖೆಡೆ ತನಿಖೆ ನಡೆಸುತ್ತಿದ್ದರು.

ಇದನ್ನೂ ಓದಿ: ತಮ್ಮ ವಿರುದ್ಧದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ: ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮನವಿ

ಈ ವರ್ಷದ ಅಕ್ಟೋಬರ್‌ನಲ್ಲಿ ಸಮೀರ್ ವಾಂಖೆಡೆ ನೇತೃತ್ವದ ತಂಡವು ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿ ಡ್ರಗ್ಸ್ ವಶಪಡಿಸಿಕೊಂಡರು. ಈ ದಾಳಿಯಲ್ಲಿ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಇತರರನ್ನು ಬಂಧಿಸಿದ್ದರು.

ಆದರೆ ದಾಳಿಯ ಸಮಯದಲ್ಲಿ ಎನ್‌ಸಿಬಿ ದಾಖಲಿಸಿದ್ದ ಸ್ವತಂತ್ರ ಸಾಕ್ಷಿಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಲಾಯಿತು. ಜೊತೆಗೆ ಎನ್‌ಸಿಬಿ ಅಧಿಕಾರಿಗಳು ನಟ ಶಾರುಖ್ ಖಾನ್‌ರಿಂದ ಹಣವನ್ನು ಸುಲಿಗೆ ಮಾಡುವ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್, ಸಮೀರ್‌ ವಾಂಖೆಡೆ ಅವರನ್ನು ಗುರಿಯಾಗಿಸಿಕೊಂಡು, ಆತ ಮುಸ್ಲಿಮರಾಗಿ ಹುಟ್ಟಿದ್ದರೂ ನಕಲಿ ಜಾತಿ ಪ್ರಮಾಣಪತ್ರವನ್ನು ನೀಡುವ ಮೂಲಕ ಪರಿಶಿಷ್ಟ ಜಾತಿಯ ಕೋಟಾದಲ್ಲಿ ಉದ್ಯೋಗ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ, ಈ ಆರೋಪವನ್ನು ಸಮೀರ್ ವಾಂಖೆಡೆ ನಿರಾಕರಿಸಿದ್ದಾರೆ. ಜೊತೆಗೆ ವಾಂಖೆಡೆ ಅವರ ತಂದೆ ಎನ್‌ಸಿಪಿ ನಾಯಕ ಮಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸದ್ಯ ಸಮೀರ್‌ ವಾಂಖೆಡೆ ಅವರ ಎನ್‌ಸಿಬಿ ಡೆಪ್ಯುಟೇಶನ್ ಮುಗಿದ ನಂತರ ಅವರನ್ನು ಎಲ್ಲಿ ನಿಯೋಜಿಸಲಾಗುವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ‘ನಿಮ್ಮ ಅತ್ತಿಗೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರಾ?’: NCB ಅಧಿಕಾರಿಗೆ ನವಾಬ್ ಮಲಿಕ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...