Homeಮುಖಪುಟಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

- Advertisement -
- Advertisement -

ಜನವರಿ 29 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳ ಯಾತ್ರಾ ಸ್ಥಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಸಂಖ್ಯೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮರೆಮಾಚಿದೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಆರೋಪಿಸಿದ್ದಾರೆ. ಕಾಲ್ತುಳಿತದಲ್ಲಿ 82 ಜನರು ಸಾವನ್ನಪ್ಪಿದ್ದು, ಆದರೆ ರಾಜ್ಯ ಸರ್ಕಾರ 37 ಜನರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಹೇಳಿದೆ ಎಂದು ಬಿಬಿಸಿ ಹಿಂದಿ ಮಾಡಿದ್ದ ತನಿಖಾ ವರದಿ ಹೇಳಿದೆ. ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಬಿಬಿಸಿ ಹಿಂದಿ ವರದಿಯು ಕಾಲ್ತುತದಲ್ಲಿ ಸಾವನ್ನಪ್ಪಿದವರನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿದೆ. ಮೊದಲನೆಯದು ಅಧಿಕೃತ ಸಂಖ್ಯೆಯಲ್ಲಿ ಸೇರಿದ ಮತ್ತು ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ದೊರೆತಿದೆ. ಎರಡನೇ ಗುಂಪಿನಲ್ಲಿ ಅಧಿಕೃತ ಸಂಖ್ಯೆಯಲ್ಲಿ ಎಣಿಕೆಯಾಗಿಲ್ಲ, ಆದರೆ ಅವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ದೊರೆತಿದೆ ಎಂದು ವರದಿ ಹೇಳಿದೆ.

ಮೂರನೇ ಗುಂಪಿನಲ್ಲಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಅಧಿಕೃತ ಸಂಖ್ಯೆಯಲ್ಲೂ ದಾಖಲಾಗಿಲ್ಲ, ಜೊತೆಗೆ ಅವರ ಕುಟುಂಬಕ್ಕೆ ಸರ್ಕಾರ ಯಾವುದೇ ಪರಿಹಾರವನ್ನೂ ನೀಡಿಲ್ಲ ಎಂದು ಬಿಬಿಸಿ ವರದಿ ತಿಳಿಸಿದೆ. ಕಾಲ್ತುಳಿತದ ನಿಜವಾದ ಸಂಖ್ಯೆ ತೀವ್ರವಾಗಿ ಹೆಚ್ಚಿರಬಹುದು ಎಂದು ಮಾಧ್ಯಮ ವರದಿಗಳು ಈ ಹಿಂದೆಯೂ ತಿಳಿಸಿತ್ತು.

ಬಿಬಿಸಿ ವರದಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, “ಯಾವುದೇ ಮಾಹಿತಿ ನಿರ್ವಹಣೆಯು ಸತ್ಯ ಹೊರಬರುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಸುಳ್ಳು ಅಂಕಿಅಂಶಗಳನ್ನು” ಒದಗಿಸುವವರನ್ನು ಸಾರ್ವಜನಿಕ ನಂಬಿಕೆಗೆ ಅರ್ಹರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಹೇಳಿದ್ದಾರೆ.

“ಸಮಸ್ಯೆ, ಅಂಕಿಅಂಶಗಳನ್ನು ಮರೆಮಾಡುವುದರ ಬಗ್ಗೆ ಮಾತ್ರವಲ್ಲ, ಸದನದಲ್ಲಿ ಸುಳ್ಳು ಹೇಳುವುದು ಕೂಡಾ ಸಮಸ್ಯೆಯಾಗಿದೆ” ಎಂದು ಅಖೀಲೇಶ್ ಅವರು ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ”30 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಫೆಬ್ರವರಿ 19 ರಂದು ರಾಜ್ಯದ ವಿಧಾನಸಭೆಯಲ್ಲಿ ಹೇಳಿದ್ದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯ ಬಗ್ಗೆಯೂ ಅಖಿಲೇಶ್ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಪರಿಹಾರವನ್ನು ನಗದು ರೂಪದಲ್ಲಿ ಏಕೆ ನೀಡಲಾಯಿತು?. ನಗದಿನ ಮೂಲ ಯಾವುದು? ವಿತರಿಸದ ನಗದು ಎಲ್ಲಿಗೆ ಹೋಯಿತು? ಯಾವ ನಿಯಮದ ಅಡಿಯಲ್ಲಿ ನಗದು ವಿತರಣೆಯನ್ನು ಅನುಮೋದಿಸಲಾಗಿದೆ? ನಗದು ಪಾವತಿಗಳಿಗೆ ಯಾರು ಅಧಿಕಾರ ನೀಡಿದರು? ವಿತರಣೆಯನ್ನು ಬೆಂಬಲಿಸುವ ಯಾವುದೇ ಲಿಖಿತ ಆದೇಶವಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಕೂಡ ಬಿಬಿಸಿಯ ವರದಿಯನ್ನು ಹಂಚಿಕೊಂಡಿದ್ದು, ಬಿಜೆಪಿ ಸರ್ಕಾರವು “ಮೃತ ದೇಹಗಳ ಮೇಲೆ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದೆ. “ಅವರು ತಮ್ಮ ಇಮೇಜ್ ಅನ್ನು ರಕ್ಷಿಸಿಕೊಳ್ಳಲು ಮತ್ತು ತಮ್ಮ ಕ್ರಿಮಿನಲ್ ನಿರ್ಲಕ್ಷ್ಯವನ್ನು ಮುಚ್ಚಿಕೊಳ್ಳಲು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಚಿದ್ದಾರೆ” ಎಂದು ಪಕ್ಷವು ಎಕ್ಸ್‌ನಲ್ಲಿ ತಿಳಿಸಿದೆ.

ಬಿಜೆಪಿ ಜನರ ಸಾವಿನಿಗಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಕಾಂಗ್ರೆಸ್ ಕೇಳಿದೆ. “ಈ ಬಿಬಿಸಿ ವರದಿಯು ಸರ್ಕಾರದ ಅಸಂವೇದನಾಶೀಲತೆಯನ್ನು ತೋರಿಸುತ್ತದೆ. ಸರ್ಕಾರ ಜನರ ಜೀವಗಳನ್ನು ಪಣಕ್ಕಿಟ್ಟು, ತನ್ನ ಟೊಳ್ಳಾದ ಇಮೇಜ್ ಅನ್ನು ಉಳಿಸಿಕೊಳ್ಳುತ್ತಿದೆ” ಎಂದು ಕಾಂಗ್ರೆಸ್  ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...