Homeಮುಖಪುಟಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ ಮರೆಮಾಚಿದ ವಿವಾದ | ಬಿಜೆಪಿ ವಿರುದ್ಧ ವಿಪಕ್ಷಗಳ ಆಕ್ರೊಶ

- Advertisement -
- Advertisement -

ಜನವರಿ 29 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳ ಯಾತ್ರಾ ಸ್ಥಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಸಂಖ್ಯೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮರೆಮಾಚಿದೆ ಎಂದು ವಿರೋಧ ಪಕ್ಷದ ನಾಯಕರು ಮಂಗಳವಾರ ಆರೋಪಿಸಿದ್ದಾರೆ. ಕಾಲ್ತುಳಿತದಲ್ಲಿ 82 ಜನರು ಸಾವನ್ನಪ್ಪಿದ್ದು, ಆದರೆ ರಾಜ್ಯ ಸರ್ಕಾರ 37 ಜನರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಹೇಳಿದೆ ಎಂದು ಬಿಬಿಸಿ ಹಿಂದಿ ಮಾಡಿದ್ದ ತನಿಖಾ ವರದಿ ಹೇಳಿದೆ. ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಬಿಬಿಸಿ ಹಿಂದಿ ವರದಿಯು ಕಾಲ್ತುತದಲ್ಲಿ ಸಾವನ್ನಪ್ಪಿದವರನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿದೆ. ಮೊದಲನೆಯದು ಅಧಿಕೃತ ಸಂಖ್ಯೆಯಲ್ಲಿ ಸೇರಿದ ಮತ್ತು ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ದೊರೆತಿದೆ. ಎರಡನೇ ಗುಂಪಿನಲ್ಲಿ ಅಧಿಕೃತ ಸಂಖ್ಯೆಯಲ್ಲಿ ಎಣಿಕೆಯಾಗಿಲ್ಲ, ಆದರೆ ಅವರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ದೊರೆತಿದೆ ಎಂದು ವರದಿ ಹೇಳಿದೆ.

ಮೂರನೇ ಗುಂಪಿನಲ್ಲಿ, ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು ಅಧಿಕೃತ ಸಂಖ್ಯೆಯಲ್ಲೂ ದಾಖಲಾಗಿಲ್ಲ, ಜೊತೆಗೆ ಅವರ ಕುಟುಂಬಕ್ಕೆ ಸರ್ಕಾರ ಯಾವುದೇ ಪರಿಹಾರವನ್ನೂ ನೀಡಿಲ್ಲ ಎಂದು ಬಿಬಿಸಿ ವರದಿ ತಿಳಿಸಿದೆ. ಕಾಲ್ತುಳಿತದ ನಿಜವಾದ ಸಂಖ್ಯೆ ತೀವ್ರವಾಗಿ ಹೆಚ್ಚಿರಬಹುದು ಎಂದು ಮಾಧ್ಯಮ ವರದಿಗಳು ಈ ಹಿಂದೆಯೂ ತಿಳಿಸಿತ್ತು.

ಬಿಬಿಸಿ ವರದಿಯನ್ನು ಉಲ್ಲೇಖಿಸಿ ಬಿಜೆಪಿ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, “ಯಾವುದೇ ಮಾಹಿತಿ ನಿರ್ವಹಣೆಯು ಸತ್ಯ ಹೊರಬರುವುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಸುಳ್ಳು ಅಂಕಿಅಂಶಗಳನ್ನು” ಒದಗಿಸುವವರನ್ನು ಸಾರ್ವಜನಿಕ ನಂಬಿಕೆಗೆ ಅರ್ಹರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅಖಿಲೇಶ್ ಹೇಳಿದ್ದಾರೆ.

“ಸಮಸ್ಯೆ, ಅಂಕಿಅಂಶಗಳನ್ನು ಮರೆಮಾಡುವುದರ ಬಗ್ಗೆ ಮಾತ್ರವಲ್ಲ, ಸದನದಲ್ಲಿ ಸುಳ್ಳು ಹೇಳುವುದು ಕೂಡಾ ಸಮಸ್ಯೆಯಾಗಿದೆ” ಎಂದು ಅಖೀಲೇಶ್ ಅವರು ಆದಿತ್ಯನಾಥ್ ಅವರನ್ನು ಉಲ್ಲೇಖಿಸಿ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು, ”30 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ” ಎಂದು ಫೆಬ್ರವರಿ 19 ರಂದು ರಾಜ್ಯದ ವಿಧಾನಸಭೆಯಲ್ಲಿ ಹೇಳಿದ್ದರು.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆಯ ಬಗ್ಗೆಯೂ ಅಖಿಲೇಶ್ ಪ್ರಶ್ನೆಗಳನ್ನು ಎತ್ತಿದ್ದಾರೆ.

“ಪರಿಹಾರವನ್ನು ನಗದು ರೂಪದಲ್ಲಿ ಏಕೆ ನೀಡಲಾಯಿತು?. ನಗದಿನ ಮೂಲ ಯಾವುದು? ವಿತರಿಸದ ನಗದು ಎಲ್ಲಿಗೆ ಹೋಯಿತು? ಯಾವ ನಿಯಮದ ಅಡಿಯಲ್ಲಿ ನಗದು ವಿತರಣೆಯನ್ನು ಅನುಮೋದಿಸಲಾಗಿದೆ? ನಗದು ಪಾವತಿಗಳಿಗೆ ಯಾರು ಅಧಿಕಾರ ನೀಡಿದರು? ವಿತರಣೆಯನ್ನು ಬೆಂಬಲಿಸುವ ಯಾವುದೇ ಲಿಖಿತ ಆದೇಶವಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಕೂಡ ಬಿಬಿಸಿಯ ವರದಿಯನ್ನು ಹಂಚಿಕೊಂಡಿದ್ದು, ಬಿಜೆಪಿ ಸರ್ಕಾರವು “ಮೃತ ದೇಹಗಳ ಮೇಲೆ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದೆ. “ಅವರು ತಮ್ಮ ಇಮೇಜ್ ಅನ್ನು ರಕ್ಷಿಸಿಕೊಳ್ಳಲು ಮತ್ತು ತಮ್ಮ ಕ್ರಿಮಿನಲ್ ನಿರ್ಲಕ್ಷ್ಯವನ್ನು ಮುಚ್ಚಿಕೊಳ್ಳಲು ನಿಜವಾದ ಸಾವಿನ ಸಂಖ್ಯೆಯನ್ನು ಮರೆಮಾಚಿದ್ದಾರೆ” ಎಂದು ಪಕ್ಷವು ಎಕ್ಸ್‌ನಲ್ಲಿ ತಿಳಿಸಿದೆ.

ಬಿಜೆಪಿ ಜನರ ಸಾವಿನಿಗಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಕಾಂಗ್ರೆಸ್ ಕೇಳಿದೆ. “ಈ ಬಿಬಿಸಿ ವರದಿಯು ಸರ್ಕಾರದ ಅಸಂವೇದನಾಶೀಲತೆಯನ್ನು ತೋರಿಸುತ್ತದೆ. ಸರ್ಕಾರ ಜನರ ಜೀವಗಳನ್ನು ಪಣಕ್ಕಿಟ್ಟು, ತನ್ನ ಟೊಳ್ಳಾದ ಇಮೇಜ್ ಅನ್ನು ಉಳಿಸಿಕೊಳ್ಳುತ್ತಿದೆ” ಎಂದು ಕಾಂಗ್ರೆಸ್  ಆಕ್ರೋಶ ವ್ಯಕ್ತಪಡಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.ಕುಂಭಮೇಳ ಕಾಲ್ತುಳಿತ ಸಾವಿನ ಸಂಖ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...