Homeಮುಖಪುಟಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಹಲವರು ನನಗೆ ಮುಂಬೈಗೆ ಬಾರದಂತೆ ಬೆದರಿಕೆಯೊಡ್ಡುತ್ತಿದ್ದಾರೆ. ಆದರೆ ನಾನು ಸೆ.9ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ. ಧೈರ್ಯವಿದ್ದರೆ ತಡೆಯಲಿ ನೋಡೋಣ ಎಂದಿದ್ದಾರೆ ಕಂಗನಾ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದು ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಟ್ವಿಟ್ಟರ್‌ನಲ್ಲಿ ಸಾರ್ವಜನಿಕರು, ರಾಜಕಾರಣಿಗಳು ಸೇರಿದಂತೆ ನಟ, ನಟಿಯರು ರಾಣಾವತ್ ಪರ-ವಿರುದ್ಧ ಮುಗಿಬಿದ್ದಿದ್ದಾರೆ.

ಮರಾಠಿ ಚಲನಚಿತ್ರೋದ್ಯಮ ಮತ್ತು ಬಾಲಿವುಡ್ ಚಿತ್ರರಂಗದವರು ಕೂಡ ನಟಿಯ ಹೇಳಿಕೆಗೆ ಬಲವಾದ ಪ್ರತಿರೋಧ ನೀಡಿದ್ದಾರೆ. ಟ್ವಿಟ್ಟರ್‌ನಲ್ಲಿ ಮಹಾರಾಷ್ಟ್ರದ ಸಾರ್ವಜನಿಕರು ಮತ್ತು ಮಹಾ ವಿಕಾಸ್ ಅಘಾಡಿ ಬೆಂಬಲಿಗರು ಸೇರಿ ರಾಣಾವತ್ ಹೇಳಿಕೆ ಉಲ್ಲೇಖಿಸಿ #AmchiMumbai ಮತ್ತು #ILoveMumbai ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಟ್ರೆಂಡಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ಇತ್ತ ಉದ್ಧವ್ ಠಾಕ್ರೆ ಸಂಪುಟದಲ್ಲಿ ಕೆಲವು ಹಿರಿಯ ಮಂತ್ರಿಗಳು, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, ಶಿವಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಸೇರಿ ಹಲವರು ಕಂಗನಾ ಟ್ವೀಟ್‌ಗಳನ್ನು ಟೀಕಿಸಿದ್ದಾರೆ.

ಇಂದು ಮುಂಬೈ ಮತ್ತು ಮಹಾರಾಷ್ಟ್ರ ನಮ್ಮ ಪೊಲೀಸರಿಂದ ಸುರಕ್ಷಿತವಾಗಿದೆ. ಇದು ಸುರಕ್ಷಿತವಲ್ಲ ಎಂದು ಭಾವಿಸುವವರಿಗೆ ಇಲ್ಲಿ ವಾಸಿಸುವ ಹಕ್ಕಿಲ್ಲ ಎಂದು ಅನಿಲ್ ದೇಶ್ಮುಖ್ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಂಗನಾ ಹಲವರು ನನಗೆ ಮುಂಬೈಗೆ ಬಾರದಂತೆ ಬೆದರಿಕೆಯೊಡ್ಡುತ್ತಿದ್ದಾರೆ. ಆದರೆ ನಾನು ಸೆಪ್ಟಂಬರ್ 9 ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ. ಧೈರ್ಯವಿದ್ದರೆ ತಡೆಯಲಿ ನೋಡೋಣ. ಮತ್ತು ನಾನು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯವನ್ನು ಪೋಸ್ಟ್ ಮಾಡುತ್ತೇನೆ ಎಂದು ಕಂಗನಾ ಸವಾಲು ಹಾಕಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಬಗ್ಗೆ ಕಂಗನಾ ರನೌತ್ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಕಂಗನಾ ರಾಣಾವತ್ ಮಹಾರಾಷ್ಟ್ರಕ್ಕೆ ಏನನ್ನೂ ಕಲಿಸಲು ಪ್ರಯತ್ನಿಸಬಾರದು. ಅಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಕಂಗನಾ ಮೂಲಕ ಬಿಜೆಪಿಯನ್ನು ಆಕ್ರಮಣ ಮಾಡಲು ಯಾರೂ ಪ್ರಯತ್ನಿಸಬಾರದು ಎಂದು ಬಿಜೆಪಿಯ ಹಿರಿಯ ಮುಖಂಡ ಆಶಿಶ್ ಶೆಲಾರ್ ಟ್ವೀಟ್ ಮಾಡಿದ್ದಾರೆ. ಆದರೆ ಈ ಎಲ್ಲಾ ಘಟನೆಗಳಿಂದ, ಕಾಮೆಂಟ್‌ಗಳಿಂದ ಬಿಜೆಪಿ ದೂರವೇ ಉಳಿದಿದೆ.

ಇತ್ತ ನಟಿ ರಾಣಾವತ್ ಬೆಂಬಲಿಗರು ಸಹ ಅವರ ಪರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಕಂಗನಾ ನಿಜ ಹೇಳಿದ್ದಾರೆ. ಭಾರತ ಸುರಕ್ಷಿತವಲ್ಲ ಎಂದು ಶಾರುಖ್ ಖಾನ್, ಅಮೀರ್ ಖಾನ್ ಹೇಳಿದರೆ ಸುಮ್ಮನಿರುತ್ತೀರಿ, ಕಂಗನಾ ಮುಂಬೈ ಸೇಫ್ ಅಲ್ಲ ಎಂದರೆ ಹೀಗೆ ಆಕ್ರಮಣ ಮಾಡುತ್ತೀರಿ ಎಂದಿದ್ದಾರೆ.

ರಾಣಾವತ್ ಅಭಿಮಾನಿಗಳು #KanganaVsSena ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಮಾಡಿದ್ದಾರೆ. ಮರಾಠಿ ಸಂಸ್ಕೃತಿ ಮತ್ತು ಶಿವಾಜಿ ಮಹಾರಾಜರನ್ನು ಕಂಗನಾ ಎಲ್ಲಿ ಅವಮಾನಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ, ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮುಗಿಬಿದ್ದು, ಮುಂಬೈ ಬಗ್ಗೆ ಕಂಗನಾ ಮಾಡಿದ ಟ್ವೀಟ್ ಮರಾಠಿ, ಬಾಲಿವುಡ್, ಮಹಾರಾಷ್ಟ್ರದಲ್ಲಿ ಕಿಡಿ ಹಚ್ಚಿರುವುದಂತೂ ಸುಳ್ಳಲ್ಲ. ಈಗಲೂ ನಟಿಯ ಹೇಳಿಕೆ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಸೆ.9ರಂದು ಮುಂಬೈಗೆ ಬರುತ್ತೇನೆ ಎಂದು ಕಂಗನಾ ಹೇಳಿದ್ದಾರೆ. ಅವರು ವಿರುದ್ಧ ಅಂದು ಏನೇನು ಘಟನೆಗಳು ನಡೆಯುತ್ತವೆಯೋ ಎಂಬುದು ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಚರ್ಚೆ ಹುಟ್ಟುಹಾಕಿದೆ.


ಇದನ್ನೂ ಓದಿ: ಕಂಗನಾಗೆ ನಮ್ಮ ರಾಜ್ಯದಲ್ಲಿ ವಾಸಿಸುವ ಹಕ್ಕಿಲ್ಲ: ಮಹಾರಾಷ್ಟ್ರ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...