Homeಮುಖಪುಟಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಮುಂಬೈಯನ್ನು ಪಿಒಕೆಗೆ ಹೋಲಿಕೆ ವಿಚಾರ: ಟ್ವಿಟ್ಟರ್‌ನಲ್ಲಿ ಕಂಗನಾ ವಿರುದ್ಧ ಆಕ್ರೋಶ

ಹಲವರು ನನಗೆ ಮುಂಬೈಗೆ ಬಾರದಂತೆ ಬೆದರಿಕೆಯೊಡ್ಡುತ್ತಿದ್ದಾರೆ. ಆದರೆ ನಾನು ಸೆ.9ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ. ಧೈರ್ಯವಿದ್ದರೆ ತಡೆಯಲಿ ನೋಡೋಣ ಎಂದಿದ್ದಾರೆ ಕಂಗನಾ.

- Advertisement -
- Advertisement -

ಬಾಲಿವುಡ್ ನಟಿ ಕಂಗನಾ ರಾಣಾವತ್ ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದು ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಟ್ವಿಟ್ಟರ್‌ನಲ್ಲಿ ಸಾರ್ವಜನಿಕರು, ರಾಜಕಾರಣಿಗಳು ಸೇರಿದಂತೆ ನಟ, ನಟಿಯರು ರಾಣಾವತ್ ಪರ-ವಿರುದ್ಧ ಮುಗಿಬಿದ್ದಿದ್ದಾರೆ.

ಮರಾಠಿ ಚಲನಚಿತ್ರೋದ್ಯಮ ಮತ್ತು ಬಾಲಿವುಡ್ ಚಿತ್ರರಂಗದವರು ಕೂಡ ನಟಿಯ ಹೇಳಿಕೆಗೆ ಬಲವಾದ ಪ್ರತಿರೋಧ ನೀಡಿದ್ದಾರೆ. ಟ್ವಿಟ್ಟರ್‌ನಲ್ಲಿ ಮಹಾರಾಷ್ಟ್ರದ ಸಾರ್ವಜನಿಕರು ಮತ್ತು ಮಹಾ ವಿಕಾಸ್ ಅಘಾಡಿ ಬೆಂಬಲಿಗರು ಸೇರಿ ರಾಣಾವತ್ ಹೇಳಿಕೆ ಉಲ್ಲೇಖಿಸಿ #AmchiMumbai ಮತ್ತು #ILoveMumbai ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿ ಟ್ರೆಂಡಿಂಗ್ ಮಾಡಿದ್ದಾರೆ.

ಇದನ್ನೂ ಓದಿ: ಜಾತಿ ಮತ್ತು ಮೀಸಲಾತಿ ಬಗ್ಗೆ ನಟಿ ಕಂಗನಾ ರಣಾವತ್‌ಗೊಂದು ಪತ್ರ

ಇತ್ತ ಉದ್ಧವ್ ಠಾಕ್ರೆ ಸಂಪುಟದಲ್ಲಿ ಕೆಲವು ಹಿರಿಯ ಮಂತ್ರಿಗಳು, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, ಶಿವಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಸೇರಿ ಹಲವರು ಕಂಗನಾ ಟ್ವೀಟ್‌ಗಳನ್ನು ಟೀಕಿಸಿದ್ದಾರೆ.

ಇಂದು ಮುಂಬೈ ಮತ್ತು ಮಹಾರಾಷ್ಟ್ರ ನಮ್ಮ ಪೊಲೀಸರಿಂದ ಸುರಕ್ಷಿತವಾಗಿದೆ. ಇದು ಸುರಕ್ಷಿತವಲ್ಲ ಎಂದು ಭಾವಿಸುವವರಿಗೆ ಇಲ್ಲಿ ವಾಸಿಸುವ ಹಕ್ಕಿಲ್ಲ ಎಂದು ಅನಿಲ್ ದೇಶ್ಮುಖ್ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕಂಗನಾ ಹಲವರು ನನಗೆ ಮುಂಬೈಗೆ ಬಾರದಂತೆ ಬೆದರಿಕೆಯೊಡ್ಡುತ್ತಿದ್ದಾರೆ. ಆದರೆ ನಾನು ಸೆಪ್ಟಂಬರ್ 9 ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದೇನೆ. ಧೈರ್ಯವಿದ್ದರೆ ತಡೆಯಲಿ ನೋಡೋಣ. ಮತ್ತು ನಾನು ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಯುವ ಸಮಯವನ್ನು ಪೋಸ್ಟ್ ಮಾಡುತ್ತೇನೆ ಎಂದು ಕಂಗನಾ ಸವಾಲು ಹಾಕಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಬಗ್ಗೆ ಕಂಗನಾ ರನೌತ್ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಕಂಗನಾ ರಾಣಾವತ್ ಮಹಾರಾಷ್ಟ್ರಕ್ಕೆ ಏನನ್ನೂ ಕಲಿಸಲು ಪ್ರಯತ್ನಿಸಬಾರದು. ಅಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಕಂಗನಾ ಮೂಲಕ ಬಿಜೆಪಿಯನ್ನು ಆಕ್ರಮಣ ಮಾಡಲು ಯಾರೂ ಪ್ರಯತ್ನಿಸಬಾರದು ಎಂದು ಬಿಜೆಪಿಯ ಹಿರಿಯ ಮುಖಂಡ ಆಶಿಶ್ ಶೆಲಾರ್ ಟ್ವೀಟ್ ಮಾಡಿದ್ದಾರೆ. ಆದರೆ ಈ ಎಲ್ಲಾ ಘಟನೆಗಳಿಂದ, ಕಾಮೆಂಟ್‌ಗಳಿಂದ ಬಿಜೆಪಿ ದೂರವೇ ಉಳಿದಿದೆ.

ಇತ್ತ ನಟಿ ರಾಣಾವತ್ ಬೆಂಬಲಿಗರು ಸಹ ಅವರ ಪರವಾಗಿ ಟ್ವೀಟ್ ಮಾಡುತ್ತಿದ್ದಾರೆ. ಕಂಗನಾ ನಿಜ ಹೇಳಿದ್ದಾರೆ. ಭಾರತ ಸುರಕ್ಷಿತವಲ್ಲ ಎಂದು ಶಾರುಖ್ ಖಾನ್, ಅಮೀರ್ ಖಾನ್ ಹೇಳಿದರೆ ಸುಮ್ಮನಿರುತ್ತೀರಿ, ಕಂಗನಾ ಮುಂಬೈ ಸೇಫ್ ಅಲ್ಲ ಎಂದರೆ ಹೀಗೆ ಆಕ್ರಮಣ ಮಾಡುತ್ತೀರಿ ಎಂದಿದ್ದಾರೆ.

ರಾಣಾವತ್ ಅಭಿಮಾನಿಗಳು #KanganaVsSena ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಮಾಡಿದ್ದಾರೆ. ಮರಾಠಿ ಸಂಸ್ಕೃತಿ ಮತ್ತು ಶಿವಾಜಿ ಮಹಾರಾಜರನ್ನು ಕಂಗನಾ ಎಲ್ಲಿ ಅವಮಾನಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಒಟ್ಟಾರೆ, ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮುಗಿಬಿದ್ದು, ಮುಂಬೈ ಬಗ್ಗೆ ಕಂಗನಾ ಮಾಡಿದ ಟ್ವೀಟ್ ಮರಾಠಿ, ಬಾಲಿವುಡ್, ಮಹಾರಾಷ್ಟ್ರದಲ್ಲಿ ಕಿಡಿ ಹಚ್ಚಿರುವುದಂತೂ ಸುಳ್ಳಲ್ಲ. ಈಗಲೂ ನಟಿಯ ಹೇಳಿಕೆ ವಿರುದ್ಧ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಸೆ.9ರಂದು ಮುಂಬೈಗೆ ಬರುತ್ತೇನೆ ಎಂದು ಕಂಗನಾ ಹೇಳಿದ್ದಾರೆ. ಅವರು ವಿರುದ್ಧ ಅಂದು ಏನೇನು ಘಟನೆಗಳು ನಡೆಯುತ್ತವೆಯೋ ಎಂಬುದು ಸಾರ್ವಜನಿಕ ವಲಯದಲ್ಲಿ ಮತ್ತಷ್ಟು ಚರ್ಚೆ ಹುಟ್ಟುಹಾಕಿದೆ.


ಇದನ್ನೂ ಓದಿ: ಕಂಗನಾಗೆ ನಮ್ಮ ರಾಜ್ಯದಲ್ಲಿ ವಾಸಿಸುವ ಹಕ್ಕಿಲ್ಲ: ಮಹಾರಾಷ್ಟ್ರ ಗೃಹ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...