Homeಮುಖಪುಟಸಂವಿಧಾನದ ಆಶಯಕ್ಕೆ ವಿರುದ್ಧವಾದ ಮತಾಂತರದ ಚರ್ಚೆಗಳು: ಡಾ.ಹೆಚ್.ಸಿ ಮಹದೇವಪ್ಪ

ಸಂವಿಧಾನದ ಆಶಯಕ್ಕೆ ವಿರುದ್ಧವಾದ ಮತಾಂತರದ ಚರ್ಚೆಗಳು: ಡಾ.ಹೆಚ್.ಸಿ ಮಹದೇವಪ್ಪ

“ಧಾರ್ಮಿಕ ಮತ್ತು ಸಾಮಾಜಿಕ ಘನತೆಯನ್ನು ಬಯಸಿ ಆಗುವ ಮತಾಂತರವನ್ನು ಯಾರಾದರೂ ಕೂಡಾ ಅಣಕಿಸಿದರೆ ಅಂತಹ ಮೂರ್ಖರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಮುನ್ನಡೆಯಿರಿ” ಎಂದು ಬಾಬಾ ಸಾಹೇಬರು ಹೇಳುತ್ತಾರೆ.

- Advertisement -
- Advertisement -

ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಕುರಿತಂತೆ ರಾಜ್ಯ ಸರ್ಕಾರದ ಸಚಿವರು ಮಾತನಾಡಲು ಆರಂಭಿಸಿರುವ ಬೆನ್ನಲ್ಲೇ ಮತಾಂತರದ ಕುರಿತಂತೆ ಚರ್ಚೆಗಳು ಮುನ್ನಲೆಗೆ ಬಂದಿವೆ. ಭಾರತೀಯ ಸಂವಿಧಾನದಲ್ಲಿ 25 -28 ನೇ ವಿಧಿಯ ಅನುಸಾರ ನೀಡಲಾಗಿರುವ ಮೂಲಭೂತ ಹಕ್ಕುಗಳಲ್ಲಿ ಸ್ವಾತಂತ್ರ್ಯದ ಹಕ್ಕು ಕೂಡಾ ಒಂದು. ನಮ್ಮಲ್ಲಿನ ಧಾರ್ಮಿಕ, ಭೌಗೋಳಿಕ ಹಾಗೂ ಜನಾಂಗೀಯ ಹಾಗೂ ಇನ್ನಿತರೆ ವೈವಿಧ್ಯತೆಯ ಕಾರಣದಿಂದಾಗಿಯೇ 1976 ರಲ್ಲಿ ಸಂವಿಧಾನದ ಪ್ರಸ್ತಾವನೆಯಲ್ಲಿ ತಿದ್ದುಪಡಿ ತಂದು ಭಾರತವನ್ನು ಜಾತ್ಯಾತೀತ ದೇಶವೆಂದು ಕರೆಯಲಾಗಿದೆ.

ಇನ್ನು ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಭಾರತದ ಯಾವುದೇ ಪ್ರಜೆಯೂ ಕೂಡಾ ಶಾಂತಿಯುತವಾಗಿ ಸಂವಿಧಾನದ ಚೌಕಟ್ಟಿನಲ್ಲಿ ತಾನು ಇಚ್ಛಿಸುವ ಧರ್ಮವನ್ನು ಆಯ್ಕೆ ಮಾಡಿಕೊಂಡು ಅದನ್ನು ಪ್ರಚಾರ ಮಾಡಬಹುದಾಗಿದೆ. ಆದರೆ ಧಾರ್ಮಿಕ ಸಾಮರಸ್ಯವನ್ನು ಮೂಡಿಸುವ ಉದ್ದೇಶದಿಂದ ಸಂವಿಧಾನದಲ್ಲಿ ನೀಡಿದ ಈ ಅವಕಾಶವನ್ನು ಅರ್ಥ ಮಾಡಿಕೊಳ್ಳದೇ ಬಹಳಷ್ಟು ಮಂದಿ ಎಡವಿದ್ದಾರೆ. ಹಾಗಾಗಿಯೇ ಧಾರ್ಮಿಕ ಅಸಹನೆ ಉಂಟಾಗಿ ಕೋಮು ಗಲಭೆಗಳು ಉಂಟಾಗಿದ್ದು 1984 ರಲ್ಲಿ ದೆಹಲಿಯಲ್ಲಿ ನಡೆದ ಸಿಖ್ಖರ ಹತ್ಯೆ, 1990 ರಲ್ಲಿ ಕಾಶ್ಮೀರ ಮತ್ತು ಪಂಜಾಬ್ ನಲ್ಲಿ ನಡೆದ ಹಿಂದೂ ವಿರೋಧಿ ಕಲಹಗಳು, 2002 ರ ಗುಜರಾತ್ ಹತ್ಯಾಕಾಂಡ ಹಾಗೂ 2008 ರಲ್ಲಿ ಓರಿಸ್ಸಾದಲ್ಲಿ ನಡೆದ ಕ್ರೈಸ್ತರ ಕಲಹಗಳನ್ನು ನಾವು ಕಾಣಬಹುದು.

ಜಾತ್ಯಾತೀತ ತತ್ವಗಳ ನಮ್ಮ ದೇಶದಲ್ಲಿ ಆಯಾ ರಾಜ್ಯಗಳಲ್ಲಿ ನಿರ್ದಿಷ್ಟವಾದ ಧಾರ್ಮಿಕ ಆಚರಣೆಗಳಿವೆ. ಉದಾಹರಣೆಗೆ ಮುಸ್ಲೀಮರು ಹೆಚ್ಚಾಗಿರುವ ಜಮ್ಮು ಕಾಶ್ಮೀರದಲ್ಲಿ ಇಸ್ಲಾಂ ಧರ್ಮದ ಆಚರಣೆಗಳು ಹೆಚ್ಚಾಗಿದ್ದರೆ, ಸಿಖ್ಖರು ಹೆಚ್ಚಾಗಿರುವ ಪಂಜಾಬಿನಲ್ಲಿ ಸಿಖ್ ಧರ್ಮದ ಆಚರಣೆಗಳು ಹೆಚ್ಚಾಗಿವೆ. ಇನ್ನು ಕ್ರೈಸ್ತ ಸಮುದಾಯದ ಜನರು ಹೆಚ್ಚಾಗಿರುವ ನಾಗಾಲ್ಯಾಂಡ್, ಮೇಘಾಲಯ ಮತ್ತು ಮಿಜೋರಾಂನಲ್ಲಿ ಆ ಧರ್ಮದ ಆಚರಣೆಗಳು ಜನ ಸಾಮಾನ್ಯರ ಸಹಜ ಸಂಪ್ರದಾಯಗಳಂತಿವೆ. ಇನ್ನು ಸಿಕ್ಕಿಂ, ಲಡಾಕ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ ಹಾಗೂ ಡಾರ್ಜಿಲಿಂಗ್ ನಲ್ಲಿ ಬೌದ್ಧರ ಜನಸಂಖ್ಯೆಯು ಗಣನೀಯವಾಗಿದೆ. ಸಿಖ್, ಬೌದ್ಧ, ಜೈನ, ಕ್ರೈಸ್ತ ಮತ್ತು ಮುಸ್ಲಿಂ ಧರ್ಮಗಳು ಭಾರತದ ಪ್ರಾದೇಶಿಕ ಅಸ್ಮಿತೆಯ ಭಾಗವಾಗಿದ್ದು ಮುಸ್ಲೀಮರು ಅಲ್ಪಸಂಖ್ಯಾತರ ವಿಭಾಗದಲ್ಲಿ ಹೆಚ್ಚಿನ ಜನರನ್ನು ಹೊಂದಿದ ಸಮುದಾಯವಾಗಿದ್ದಾರೆ. ಹೀಗಿರುವಾಗಿ ಇಲ್ಲಿನ ಧಾರ್ಮಿಕ ವೈವಿಧ್ಯತೆಗಳನ್ನು ಅರ್ಥ ಮಾಡಿಕೊಳ್ಳದೇ ಕಲಹಗಳನ್ನು ಉಂಟು ಮಾಡಬಲ್ಲಂತಹ ಕಾಯ್ದೆಗಳನ್ನು ಜಾರಿ ಮಾಡಲು ಹೊರಟಿರುವುದು ಅರ್ಥಹೀನ

ಅಭಿವೃದ್ಧಿಶೀಲ ಸಮಾಜಗಳ ಅಧ್ಯಯನ ಕೇಂದ್ರದ ಸ್ಥಾಪಕರಾದ ರಜನಿ ಕೊಠಾರಿ ಅವರು “ಭಾರತವು ಮೂಲತಃ ಸಹಿಷ್ಣುತೆಯ ತತ್ವದ ಮೇಲೆ ನಿರ್ಮಿಸಲ್ಪಟ್ಟ ನಾಗರೀಕ ದೇಶವಾಗಿದೆ” ಎಂದು ಅಭಿಪ್ರಾಯ ಪಡುತ್ತಾರೆ. ಅದು ವಾಸ್ತವವೂ ಕೂಡಾ.

ಆದರೆ ಸಂವಿಧಾನದ ಆಶಯಗಳ ಬಗ್ಗೆ ಸರಿಯಾದ ತಿಳುವಳಿಕೆ ಮತ್ತು ಸಂವಿಧಾನದ ಕುರಿತು ಗೌರವ ಇಲ್ಲದ ಬಿಜೆಪಿಗರು ಧಾರ್ಮಿಕ ಅಸಹಿಷ್ಣುತೆಯನ್ನು ಹಬ್ಬುವ ಮೂಲಕ ಭಾರತದ ಸಾಮರಸ್ಯವನ್ನು ಹಾಳು ಮಾಡುವಂತಹ ಕೆಲಸವನ್ನು ಮಾಡುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇದೀಗ ಕರೋನಾ ಮತ್ತು ಒಮೈಕ್ರಾನ್ ವೈರಸ್ ನ ತೊಂದರೆ ಇರುವ ಮತ್ತು ಜನ ಸಾಮಾನ್ಯರು ಬೆಲೆ ಏರಿಕೆ ಹಾಗೂ ಸರ್ಕಾರದ ದುರಾಡಳಿತದಿಂದ ತತ್ತರಿಸಿ ಹೋಗಿರುವ ಸಂದರ್ಭದಲ್ಲಿ ಧಾರ್ಮಿಕ ಕಲಹವನ್ನು ಸೃಷ್ಟಿಸಲು ಮುಂದಾಗಿರುವ ಇವರು ಅಸಂವಿಧಾನಿಕವಾಗಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ನಿಜಕ್ಕೂ ಜನ ಸಾಮಾನ್ಯರ ಸಂಕಷ್ಟಗಳ ನಡುವೆ ಇವರು ಮಾಡುತ್ತಿರುವ ಕಪಿಚೇಷ್ಟೆಗಳು ತೀರಾ ಅಮಾನವೀಯವಾಗಿರುವಂತಹವು.

ಮತಾಂತರ ಎಂಬುದು ಸಂವಿಧಾನವು ವ್ಯಕ್ತಿಯೊಬ್ಬನಿಗೆ ನೀಡಿದ ಆಯ್ಕೆ. ಇಂತಹ ಸಂವಿಧಾನಿಕ ಆಯ್ಕೆಯನ್ನೇ ನಿಷೇಧಿಸಲು ಹೊರಟಿರುವ ಬಿಜೆಪಿಗರಿಗೆ ಸಂವಿಧಾನ ಎಂದರೇನು ಎಂದು ಇನ್ನೂ ಅರ್ಥವಾದಂತೆ ತೋರುತ್ತಿಲ್ಲ. ಕೇವಲ ಆರ್ ಎಸ್ ಎಸ್ ನ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ರಾಜ್ಯವನ್ನು ಕಲಹದ ಕೇಂದ್ರವಾಗಿ ಮಾರ್ಪಡಿಸಲು ಹೊರಟಿರುವ ಮತ್ತು ಸಂವಿಧಾನದ ಮೂಲ ಆಶಯವನ್ನೇ ಅರಿಯದೇ ಅಜ್ಞಾನದಿಂದ ವರ್ತಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ಅಸಂವಿಧಾನಿಕವಾಗಿ ವರ್ತಿಸುತ್ತಿದ್ದು ತಾವು ಮುಖ್ಯಮಂತ್ರಿ ಆಗಿರುವುದು ಸಂವಿಧಾನದ ಬಲದಿಂದ ಎಂಬುದನ್ನು ಮರೆತು ವರ್ತಿಸುತ್ತಿರುವುದು ದುರಂತ!

ಸಂವಿಧಾನಿಕ ವ್ಯವಸ್ಥೆಯಲ್ಲಿ ಜನ ಸಾಮಾನ್ಯರ ಸೇವೆಗಾಗಿ ಆಯ್ಕೆಯಾಗಿರುವ ಬಿಜೆಪಿಯ ಜನ ಪ್ರತಿನಿಧಿಗಳು ಧರ್ಮದ ಹೆಸರಲ್ಲಿ ಜನ ಸಾಮಾನ್ಯರ ಹಿತಕ್ಕೆ ವಿರುದ್ಧವಾದ ಮೌಢ್ಯದ ಪ್ರತಿಪಾದಕರಾಗಿ ಬದಲಾಗಿರುವುದು ಅವರ ದುರ್ಬಲ ಮನಸ್ಥಿತಿಯ ಮತ್ತು ಅತಿ ಅಜ್ಞಾನದ ಪ್ರತೀಕವಾಗಿದೆ.

ಹಿಂದೂ ಧರ್ಮದಿಂದ ಬೇರೆ ಧರ್ಮಕ್ಕೆ ಮತಾಂತರ ಆಗುವುದು ಹಿಂದೂ ಧರ್ಮದ ಉಳಿವಿಗೆ ಉಂಟಾಗುವ ಅಪಾಯವಾಗಿರುವುದರಿಂದ ಅದನ್ನು ತಡೆಯಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಹೊರಟಿರುವ ಬಿಜೆಪಿಗರು ತಮ್ಮದು ಜಾತಿ ಅಸಮಾನತೆ, ಅಸ್ಪೃಶ್ಯತೆ ಹಾಗೂ ಶೋಷಣೆಯನ್ನು ವಿಜೃಂಭಿಸುವ ಧರ್ಮ ಎಂಬುದನ್ನು ಮರೆಯಬಾರದು

ಈ ಹೊತ್ತಿಗೂ ಹಿಂದೂ ಧರ್ಮದ ಪರಿಧಿಯ ಒಳಗೆ ಜಾತಿಯ ಅಸಮಾನತೆಯ ಕಾರಣಕ್ಕೆ ದೌರ್ಜನ್ಯ ಅನುಭವಿಸುತ್ತಿರುವ ಮತ್ತು ಅನಗತ್ಯವಾಗಿ ಕೀಳರಿಮೆಯನ್ನು ಅನುಭವಿಸುತ್ತಿರುವ ಜನ ಸಮುದಾಯಕ್ಕೆ ಎಂದಿಗೂ ಕೂಡಾ ಹಿಂದೂ ಧರ್ಮ ಪ್ರೀತಿ ತೋರಿಸುವ ಮತ್ತು ಘನತೆಯಿಂದ ನಿಯಂತ್ರಿಸುವ ಪ್ರಯತ್ನವನ್ನು ಮಾಡಿಲ್ಲ. ಯಾವಾಗಲೋ ಒಮ್ಮೆ ಸಾರ್ವಜನಿಕವಾಗಿ ನೆನಪಾದಾಗ ಬರೀ ಬಾಯಿ ಮಾತಲ್ಲಿ ಆದರ್ಶ ಸಮಾಜದ ಬಗ್ಗೆ ಪ್ರವಚನ ನೀಡುವ ಮಂದಿ, ಅಂತರಂಗದಲ್ಲಿ ಅಸಮಾನತೆಯನ್ನು ಆರಾಧಿಸುವವರಾಗಿದ್ದಾರೆ. ದುರ್ದೈವ ಎಂದರೆ ಇದೇ ನೀಚ ಮನಸ್ಥಿತಿಗಳೇ ಸಾಮಾಜಿಕ ನ್ಯಾಯಕ್ಕಾಗಿ ಜಾರಿಗೊಳಿಸಿರುವ ಮೀಸಲಾತಿ ಹಾಗೂ ಇನ್ನಿತರೆ ಜನಪರ ಯೋಜನೆಗಳ ಜಾರಿಯ ವಿರೋಧಿಗಳಾಗಿದ್ದಾರೆ. ಇವರ ಬಾಯಿಂದ ಯಾವತ್ತೂ ಕೂಡಾ ಶೋಷಣೆಯ ವಿರುದ್ಧ ಪ್ರತಿರೋಧದ ದನಿ ಹೊರಡುವುದಿಲ್ಲ, ಸಮಾನತೆಗಾಗಿ ಹೋರಾಟವಂತೂ ಇಲ್ಲವೇ ಇಲ್ಲ. ದಿನ ಬೆಳಗಾದರೆ ಶೋಷಣೆಯನ್ನೇ ಅಸ್ತ್ರ ಮಾಡಿಕೊಂಡು ನಮ್ಮ ಧರ್ಮ ಬಿಟ್ಟು ಹೋಗಬೇಡಿ ಎಂದರೆ ಅದಕ್ಕೆ ನಗದೆ ಇನ್ನೇನು ಮಾಡಬೇಕು?

ಹಿಂದೂ ಧರ್ಮದ ಒಳಗೆ ಪ್ರಜ್ಞಾ ಪೂರ್ವಕವಾಗಿಯೇ ಆಚರಿಸುತ್ತಿರುವ ಜಾತಿ ಶ್ರೇಷ್ಠತೆ, ಅಸ್ಪೃಶ್ಯತೆ ಹಾಗೂ ಸಾಮಾಜಿಕ ಅಸಮಾನತೆಯಂತಹ ಅಮೇದ್ಯದ ವಿರುದ್ಧ ನಿರಂತರ ಹೋರಾಟ ನಡೆಸಿ, ಸಮಾಜದಲ್ಲಿ ಸಮಾನತೆ ಎಂಬುದು ಒಂದು ದೇಶದ ಆರೋಗ್ಯಕರ ಅಭಿವೃದ್ಧಿ ಹಾಗೂ ಮಾನವೀಯ ಮೌಲ್ಯಗಳ ದೃಷ್ಟಿಯಿಂದ ಎಷ್ಟು ಮುಖ್ಯ ಎಂಬ ಸಂಗತಿಯನ್ನು ಮನ ಮುಟ್ಟುವಂತೆ ಪ್ರತಿಪಾದಿಸಿದರೂ ಹಿಂದೂ ಧರ್ಮ ಸುಧಾರಣೆ ಮಾಡುವಲ್ಲಿ ಬಾಬಾ ಸಾಹೇಬರು ಯಶಸ್ಸು ಕಾಣಲಿಲ್ಲ. ಹೀಗಾಗಿಯೇ ಬೇಸರಗೊಂಡ ಅವರು ಹಿಂದೂ ಧರ್ಮವನ್ನು ತೊರೆಯುವಂತಹ ಪರಿಸ್ಥಿತಿ ಉಂಟಾಯಿತು.

ತನ್ನ ಸಹಜೀವಿಗಳೆಲ್ಲಾ ಘನತೆಯಿಂದ ಇರಬೇಕೆಂದು ಬಯಸಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿಯನ್ನೇ ಸಂಕಟದಲ್ಲಿ ಮುಳುಗಿಸಿದ ಇವರ ಧರ್ಮದ ಕಲ್ಪನೆಯಲ್ಲಿ ಯಾವುದೇ ಪ್ರಾಮಾಣಿಕತೆ ಉಳಿದಿಲ್ಲ ಎಂಬುದನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಅರ್ಥ ಮಾಡಿಕೊಳ್ಳಬೇಕು. ಬಾಬಾ ಸಾಹೇಬರ ವಿಷಯದಲ್ಲಿ ಮತಾಂತರ ಎಂಬುದು ಬೇರೊಂದು ಧರ್ಮದ ಆಕರ್ಷಣೆಗೆ ಒಳಗಾಗಿ ಹೋದ ಸಂಗತಿಯಾಗಿರಲಿಲ್ಲ, ಬದಲಿಗೆ ಹಿಂದೂ ಧರ್ಮದ ಒಳಗೇ ಘನತೆ ಮತ್ತು ಮಾನಸಿಕ ನೆಮ್ಮದಿಯಿಂದ ಬದುಕಲು ಸಾಧ್ಯವಾಗದೇ ಮಾಡಿಕೊಂಡ ಅನಿವಾರ್ಯವಾದ ಆಯ್ಕೆಯಾಗಿತ್ತು. ಹೀಗಾಗಿ ಮೂಲಭೂತ ಸಮಸ್ಯೆಗಳನ್ನು ಪರಿಹರಿಸದೇ ಹಿಂದೂ ಧರ್ಮದಿಂದ ಉಂಟಾಗುವ ಮತಾಂತರದ ಬಗ್ಗೆ ಮಾತನಾಡುವ ಹಕ್ಕು ಬಿಜೆಪಿಗರಿಗೆ ಇಲ್ಲ.

1935 ರಲ್ಲಿ ಹಿಂದೂ ಧರ್ಮ ತೊರೆಯುವಾಗ ಬಾಬಾ ಸಾಹೇಬರು “ಧಾರ್ಮಿಕ ಮತ್ತು ಸಾಮಾಜಿಕ ಘನತೆಯನ್ನು ಬಯಸಿ ಆಗುವ ಮತಾಂತರವನ್ನು ಯಾರಾದರೂ ಕೂಡಾ ಅಣಕಿಸಿದರೆ ಅಂತಹ ಮೂರ್ಖರ ಬಗ್ಗೆ ತಲೆ ಕೆಡಿಸಿಕೊಳ್ಳದೇ ಮುನ್ನಡೆಯಿರಿ” ಎಂದು ಹೇಳುತ್ತಾರೆ.

ಈ ನಿಟ್ಟಿನಲ್ಲಿ ಧಾರ್ಮಿಕತೆ ಎಂಬುದು ಸಂವಿಧಾನಿಕವಾದ ಸ್ವತಂತ್ರ ಆಯ್ಕೆಯೇ ವಿನಃ ಯಾರದ್ದೋ ಮತಿಗೆಟ್ಟ ಮೌಢ್ಯದ ಜನರ ಆಜ್ಞೆಗೆ ತಲೆ ಬಾಗಿ ಮಾಡುವ ಆಚರಣೆ ಅಲ್ಲ. ಈ ಸಂಗತಿಯನ್ನು ನಾವು ಅರ್ಥ ಮಾಡಿಕೊಳ್ಳಲೇಬೇಕು.

ಸಂವಿಧಾನವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಬಿಜೆಪಿಯ ಕೋಮು ಶಕ್ತಿಗಳು ಸನಾತನ ಧರ್ಮ, ಹಿಂದುತ್ವ, ವರ್ಣಾಶ್ರಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಸಮಾಜದಲ್ಲಿ ಅಸ್ಪೃಶ್ಯತೆ, ಅಸಮಾನತೆ ಹಾಗೂ ಶೋಷಣೆಯ ವಾತಾವರಣವನ್ನೇ ಮುಂದುವರೆಸುತ್ತಾ ಸಾಗಿದರೆ ಈ ದೇಶದ ಎಲ್ಲಾ ಶೋಷಿತ ಜನರೂ ಕೂಡಾ ಬಾಬಾ ಸಾಹೇಬರಂತೆಯೇ ಮತ್ತೊಮ್ಮೆ ಬೌದ್ಧ ಧರ್ಮವನ್ನು ಸ್ವೀಕರಿಸುವ ಮೂಲಕ ಬೌದ್ಧ ಧರ್ಮದ ಮಾನವೀಯ ತತ್ವಗಳ ಆಧಾರದ ಮೇಲೆ ಸಾಮಾಜಿಕತೆಯನ್ನು ಅಧಿಕೃತವಾಗಿ ರೂಪಿಸಿಕೊಂಡು ಅದರ ಆಧಾರದ ಮೇಲೆಯೇ ರಾಜಕೀಯ ಮಾಡಬೇಕಾಗುತ್ತದೆ ಎಂಬುದನ್ನು ನೆನಪಿಸಲು ಬಯಸುತ್ತೇನೆ.

ಮತಾಂತರ ನಿಷೇಧ ಕಾಯ್ದೆ ತರಲು ಹೊರಟಿರುವ ಬಿಜೆಪಿಗರೇ,

“ಯಾವುದೇ ಧರ್ಮದ ಆಚರಣೆಯನ್ನು ಮಾಡುತ್ತಿರುವ ವ್ಯಕ್ತಿಯನ್ನು ಅವರ ಇಚ್ಛೆಗೆ ವಿರುದ್ಧ ಬಲವಂತವಾಗಿ ಇಲ್ಲವೇ ಮೋಸದ ತಂತ್ರಗಳ ಮೂಲಕ ಮತಾಂತರ ಮಾಡಲು ಯತ್ನಿಸುವುದು ಸಂವಿಧಾನ ಬಾಹಿರವಾದ ಕೃತ್ಯ” ಎಂಬುದು ಸಾಮಾನ್ಯ ತಿಳುವಳಿಕೆ ಆಗಿದೆ. ಇನ್ನು ಐಚ್ಛಿಕ ಮತಾಂತರವನ್ನು ತಡೆಯುವುದೂ ಕೂಡಾ ಸಂವಿಧಾನ ಬಾಹಿರ ಎಂಬ ಬೇಗ ಅರಿತುಕೊಂಡು, ಇಂತಹ ಕೆಲಸಕ್ಕೆ ಬಾರದ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ಬಿಟ್ಟು, ರೈತರು, ಯುವಕರು ಹಾಗೂ ಸದಾ ಶ್ರಮ ವಹಿಸಿ ದುಡಿಯುತ್ತಿರುವ ಜನ ಸಾಮಾನ್ಯರ ಹಿತಕ್ಕಾಗಿ ಕೆಲಸ ಮಾಡಬೇಕೆಂದು ಈ ಮೂಲಕ ನಾನು ಆಗ್ರಹಿಸುತ್ತೇನೆ!

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು, ಕಾಂಗ್ರೆಸ್ ಮುಖಂಡರು.)


ಇದನ್ನೂ ಓದಿ: ಮತಾಂತರ ಆರೋಪ: ಬಿಜೆಪಿ ಬೆಂಬಲಿತ ಸಂಘಟನೆ ಬಜರಂಗದಳದಿಂದ ಶಾಲೆ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಗುಲಾಮರಿಗೆ ಮತಾಂತರ ಮಾಡಲು ಕಷ್ಟ ಅನ್ನುವ ಅಳಲು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...