Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...