Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...