Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...