Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...