Homeಕರ್ನಾಟಕಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

ಬಾಗಲಕೋಟೆ: ಮತಾಂತರ ಆರೋಪದ ಮೇಲೆ ಶಾಲೆ ಮುಚ್ಚಿದ ಶಿಕ್ಷಣ ಇಲಾಖೆ

- Advertisement -
- Advertisement -

ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ಇಳಕಲ್‌ನಲ್ಲಿರುವ ಸೇಂಟ್‌ ಪೌಲ್ಸ್‌‌ ಹೈಯರ್‌ ಪ್ರೈಮರಿ ಶಾಲೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯನ್ನು ಮುಚ್ಚಿದ್ದಾರೆ.

‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಮತಾಂತರಕ್ಕೆ ಶಾಲೆಯವರು ಯತ್ನಿಸುತ್ತಿದ್ದಾರೆ’ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದ್ದು, “ಕೆಲ ಬಲಪಂಥೀಯ ಸಂಘಟನೆಗಳು ದೂರು ನೀಡಿದ್ದವು” ಎಂದು ಡಿ.30ರಂದು ಬ್ಲಾಕ್ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

‘ನಿಯಮ ಉಲ್ಲಂಘಿಸಿ ಕ್ರಿಸ್‌ಮಸ್‌ ಆಚರಿಸಿದ ಕಾರಣಕ್ಕೆ ಶಾಲೆಯನ್ನು ಅನಿರ್ದಿಷ್ಟಾವಧಿ ಮುಚ್ಚಲಾಗುತ್ತಿದೆ’ ಎಂದು ಹೇಳಲಾಗಿದೆ. ಆದರೆ ಆದೇಶದಲ್ಲಿ ನಿಯಮಗಳು ಯಾವುವೆಂದು ಉಲ್ಲೇಖಿಸಿಲ್ಲ. “ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆಯ ಸಂದರ್ಭದಲ್ಲಿ ನೀವು ತರಗತಿ ಕೊಠಡಿಗಳಲ್ಲಿ ಮಾಂಸವನ್ನು ಬಡಿಸಿದ್ದೀರಿ. ಇದು ಸಾರ್ವಜನಿಕರಿಗೆ ಮತ್ತು ಇಲಾಖೆಗೆ ಮುಜುಗರಕ್ಕೆ ಕಾರಣವಾಗಿದೆ. ಮುಂದಿನ ಆದೇಶದವರೆಗೆ ನೀವು ಶಾಲೆಯನ್ನು ಮುಚ್ಚಬೇಕು. ಅನುಮತಿ ಪಡೆಯದೇ ಶಾಲೆ ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಹಿಂದುತ್ವ ಪರ ಸಂಘಟನೆಗಳ ಸಂಚಾಲಕ ಪ್ರದೀಪ ಅಮರಣ್ಣನವರ್‌, ‘ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಮತಾಂತರಕ್ಕೆ ಯತ್ನಿಸಲಾಗುತ್ತಿದೆ’ ಎಂದು ತಹಶೀಲ್ದಾರ್‌ ಕೆ.ರತ್ನ ಅವರಿಗೆ ದೂರು ನೀಡಿದರು.

“ಶಾಲೆಯ ಮ್ಯಾನೇಜ್‌ಮೆಂಟ್‌ ಕ್ರಿಸ್ಮಸ್ ದಿನದಂದು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಶಾಲೆಗೆ ಆಹ್ವಾನಿಸಿತು. ಮಾಂಸ, ಮದ್ಯ ಮತ್ತು ಬೈಬಲ್‌ನ ಕನ್ನಡ ಅನುವಾದವಾದ ‘ಸತ್ಯ ವೇದ’ ನೀಡಲಾಯಿತು. ಇದು ಆಮಿಷ ಮತ್ತು ಬಲವಂತದ ಮೂಲಕ ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ” ಎಂದು ಹಿಂದುತ್ವ ಮುಖಂಡರು ಆರೋಪಿಸಿದ್ದಾರೆ.

ಪ್ರಾಂಶುಪಾಲರಾದ ಸಿಲ್ವಿಯಾ ಡಿ ಮಾರ್ಕ್, ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಮತ್ತು ಉಮೇಶ್ ನಾಯಕ್ ಹರಪನಹಳ್ಳಿ ಅವರನ್ನು ದೂರಿನಲ್ಲಿ ಹೆಸರಿಸಲಾಗಿದೆ.

“ಶಾಲೆ ಪ್ರಾರಂಭವಾದಾಗಿನಿಂದಲೂ ಬಂಜಾರ, ಅಂಬಿಗ ಮತ್ತು ಇತರ ಗುಂಪುಗಳಂತಹ ಬಡ ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಮತಾಂತರಿಸಲಾಗುತ್ತಿದೆ. ಅವರು ಹಿಂದೂ ದೇವರುಗಳನ್ನು ಅವಮಾನಿಸುತ್ತಿದ್ದಾರೆ ಮತ್ತು ದುರ್ಬಲ ಗುಂಪುಗಳನ್ನು ಮತಾಂತರ ಮಾಡುತ್ತಿದ್ದಾರೆ. ಅವರು ಮತಾಂತರಗೊಂಡ ನಂತರ ತಮ್ಮ ಮನೆಗಳಿಂದ ಹಿಂದೂ ದೇವರುಗಳ ಪ್ರತಿಮೆಗಳು ಮತ್ತು ಚಿತ್ರಗಳನ್ನು ಎಸೆಯುವಂತೆ ಅವರು ಒತ್ತಾಯಿಸುತ್ತಾರೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅದಕ್ಕಿಂತ ಹೆಚ್ಚಾಗಿ ಶಾಲೆಯ ಆಡಳಿತ ಮಂಡಳಿಯು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳಿಗೆ ಲಂಚ ನೀಡುವುದರಿಂದ ಶಾಲೆಯ ಪರವಾನಗಿಯನ್ನು ವಾರ್ಷಿಕವಾಗಿ ನವೀಕರಿಸಲಾಗುತ್ತಿದೆ. ಅಧಿಕಾರಿಗಳು ಶಾಲೆಯನ್ನು ಮುಚ್ಚಬೇಕು ಮತ್ತು ಪರವಾನಗಿ ರದ್ದುಗೊಳಿಸಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದರು.

ದೂರಿನ ಮೇರೆಗೆ ಶಿಕ್ಷಣ ಇಲಾಖೆಯ ಬ್ಲಾಕ್ ಸಂಪನ್ಮೂಲ ಸಮನ್ವಯಾಧಿಕಾರಿ ಐ.ಎಂ.ಅಂಗಡಿ ಶಾಲೆಯಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದಾರೆ. ಬಿಇಒ ವರದಿ ಅನ್ವಯ ಕ್ರಮಕೈಗೊಂಡು ಮುಚ್ಚಲು ಆದೇಶಿಸಿದ್ದಾರೆ.

ಶಾಲಾ ಆಡಳಿತ ಸಮಿತಿ ಸದಸ್ಯರಾದ ಜಾಕ್ಸನ್ ಡಿ ಮಾರ್ಕ್ ಇಳಕಲ್ ಅವರು ಪತ್ರಕರ್ತರೊಂದಿಗೆ ಮಾತನಾಡಿದ್ದು, “ಬಲಪಂಥೀಯ ಗುಂಪುಗಳು ಹೊರಿಸಿರುವ ಆರೋಪಗಳು ಆಧಾರ ರಹಿತವಾಗಿವೆ” ಎಂದು ತಿಳಿಸಿದ್ದಾರೆ.

“ನಾವು ಯಾರನ್ನೂ ಮತಾಂತರ ಮಾಡುತ್ತಿಲ್ಲ. ಮೊದಲನೆಯದಾಗಿ, ಶಾಲೆಯನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿಲ್ಲ. ಇಳಕಲ್‌ನ ಕೆಲ ನಿವಾಸಿಗಳು ಇದನ್ನು ನಡೆಸುತ್ತಿದ್ದಾರೆ. ಬಾಡಿಗೆ ಆವರಣದಲ್ಲಿ ಶಾಲೆ ನಡೆಸಲಾಗುತ್ತಿದೆ. ಶಾಲಾ ಸಮಿತಿಯು ಎಲ್ಲಾ ಧರ್ಮಗಳ ಸದಸ್ಯರನ್ನು ಒಳಗೊಂಡಿದೆ. ಶಾಲೆಯಲ್ಲಿ ಎಲ್ಲಾ ಧರ್ಮದ ವಿದ್ಯಾರ್ಥಿಗಳಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿರಿ: ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಶಾಲೆ ಮುಚ್ಚಿದರೆ ಸಾಲದು, ಮತಾಂತರ ಮಾಡಲು ಯತ್ನಿಸಿದ ಎಲ್ಲರಿಗೂ ಶಿಕ್ಷೇ ಆಗಲಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...