Homeಮುಖಪುಟಮತಾಂತರ ಅಕ್ರಮವಾಗಿದ್ದಲ್ಲಿ, ಮದುವೆ ಅಮಾನ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು

ಮತಾಂತರ ಅಕ್ರಮವಾಗಿದ್ದಲ್ಲಿ, ಮದುವೆ ಅಮಾನ್ಯ: ಅಲಹಾಬಾದ್ ಹೈಕೋರ್ಟ್ ತೀರ್ಪು

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಒಂದು ಮಹತ್ವದ ತೀರ್ಪಿನಲ್ಲಿ, ಮತಾಂತರವು ಅಕ್ರಮವಾಗಿದ್ದಲ್ಲಿ ಅದರ ಆಧಾರದ ಮೇಲೆ ನಡೆದ ಮದುವೆ ಸ್ವಯಂಚಾಲಿತವಾಗಿ ಅಮಾನ್ಯವಾಗುತ್ತದೆ ಮತ್ತು ಕಾನೂನಿನ ದೃಷ್ಟಿಯಲ್ಲಿ ಗಂಡುಹೆಣ್ಣನ್ನು ದಂಪತಿಗಳೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ್ ಅವರು ಮೊಹಮ್ಮದ್ ಬಿನ್ ಖಾಸಿಂ ಅಲಿಯಾಸ್ ಅಕ್ಬರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಆದೇಶ ನೀಡಿದ್ದಾರೆ. ಅರ್ಜಿಯಲ್ಲಿ, ತಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು. ಆದಾಗ್ಯೂ, ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಇಬ್ಬರೂ ವಿವಾಹವಾಗಲು ಅರ್ಹರು ಎಂದು ನ್ಯಾಯಾಲಯ ಹೇಳಿದೆ.

ಅರ್ಜಿದಾರರ ಪರ ವಕೀಲರು, ಖಾಸಿಂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಜೈನಬ್ ಪರ್ವೀನ್ ಅಲಿಯಾಸ್ ಚಂದ್ರಕಾಂತ ಹಿಂದೂ ಎಂದು ತಿಳಿಸಿದರು. 2025 ಫೆಬ್ರವರಿ 22ರಂದು ಚಂದ್ರಕಾಂತ ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದರು ಮತ್ತು ಬಗ್ಗೆ ಖಾನ್ಕಾಹೆ ಆಲಿಯಾ ಆರಿಫಿಯಾ ಒಂದು ಪ್ರಮಾಣಪತ್ರವನ್ನು ನೀಡಿತ್ತು. 2025 ಮೇ 26ರಂದು ಇಬ್ಬರೂ ಮುಸ್ಲಿಂ ಕಾನೂನಿನ ಪ್ರಕಾರ ವಿಧಿವಿಧಾನಗಳಂತೆ ವಿವಾಹವಾಗಿದ್ದು, ಸಂಬಂಧಪಟ್ಟ ಖಾಜಿಯೊಬ್ಬರು ವಿವಾಹ ಪ್ರಮಾಣಪತ್ರವನ್ನು ನೀಡಿದ್ದಾರೆ ಎಂದು ವಕೀಲರು ತಿಳಿಸಿದರು.

ಆದರೆ, ಹೆಚ್ಚುವರಿ ಮುಖ್ಯ ಸ್ಥಾಯಿ ಕೌನ್ಸಿಲ್ ಇದನ್ನು ತೀವ್ರವಾಗಿ ವಿರೋಧಿಸಿದರು. ಖಾನ್ಕಾಹೆ ಆಲಿಯಾ ಆರಿಫಿಯಾ ನೀಡಿರುವ ಮತಾಂತರ ಪ್ರಮಾಣಪತ್ರ ನಕಲಿ ಮತ್ತು ಕಪೋಲಕಲ್ಪಿತ ಎಂದು ಅವರು ವಾದಿಸಿದರು. ಏಕೆಂದರೆ, ಜಾಮಿಯಾ ಆರಿಫಿಯಾ, ಸೈಯದ್ ಸರವಾನ್, ಕೌಶಂಬಿ ಅವರ ಕಾರ್ಯದರ್ಶಿ ಮತ್ತು ವ್ಯವಸ್ಥಾಪಕರು ಸಂಸ್ಥೆಯು ಫೆಬ್ರವರಿ 22ರಂದು ಯಾವುದೇ ಪ್ರಮಾಣಪತ್ರ ನೀಡಿಲ್ಲ ಎಂದು ಪ್ರತಿಕ್ರಿಯೆಯಲ್ಲಿ ಹೇಳಿದ್ದಾರೆ ಎಂದು ಅವರು ವಾದಿಸಿದರು.

ಇದರ ಮೇಲೆ ನ್ಯಾಯಾಲಯವು, “ಕಕ್ಷಿದಾರರ ಪರ ವಕೀಲರು ಮಂಡಿಸಿದ ವಾದಗಳು ಮತ್ತು ಸಂಪೂರ್ಣ ದಾಖಲೆಗಳ ಪರಿಶೀಲನೆಯ ನಂತರ ಒಂದು ವಿಷಯ ಸ್ಪಷ್ಟವಾಗುತ್ತದೆ, ಅದು ಏನೆಂದರೆ, ನಕಲಿ ದಾಖಲೆಯ ಆಧಾರದ ಮೇಲೆ ಮತಾಂತರವು ಉತ್ತರ ಪ್ರದೇಶ ಅಕ್ರಮ ಮತಾಂತರ ಕಾಯ್ದೆಯಲ್ಲಿ ತಿಳಿಸಲಾದ ಯಾವುದೇ ಅಗತ್ಯ ಅಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲಎಂದು ಹೇಳಿತು.

ಇದೇ ರೀತಿ, ಅರ್ಜಿದಾರರ ನಡುವೆ ನಡೆದಿರುವ ಮದುವೆಯು ಕಾನೂನಿನ ದೃಷ್ಟಿಯಲ್ಲಿ ಮಾನ್ಯವಾಗಿಲ್ಲ. ಏಕೆಂದರೆ, ಮುಸ್ಲಿಂ ಕಾನೂನಿನ ಪ್ರಕಾರ, ಮದುವೆ ಎಂಬುದು ಒಂದೇ ಧರ್ಮದ ಅನುಯಾಯಿಗಳು ಮತ್ತು ಭಕ್ತರ ನಡುವಿನ ಒಪ್ಪಂದ. ಒಮ್ಮೆ ಎರಡನೇ ಅರ್ಜಿದಾರರ (ಚಂದ್ರಕಾಂತ) ಮತಾಂತರವು ಅಕ್ರಮವಾದರೆ, ಇಬ್ಬರೂ ಕಾನೂನಿನ ದೃಷ್ಟಿಯಲ್ಲಿ ದಂಪತಿಗಳೆಂದು ಮಾನ್ಯತೆ ಪಡೆಯಲು ಸಾಧ್ಯವಿಲ್ಲಎಂದು ನ್ಯಾಯಾಲಯ ಹೇಳಿತು.

ಆದಾಗ್ಯೂ, ಮತಾಂತರಕ್ಕೆ ಯಾವುದೇ ವಿಧಿವಿಧಾನ ಅಗತ್ಯವಿಲ್ಲದ ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳುವಂತೆ ನ್ಯಾಯಾಲಯ ಇಬ್ಬರಿಗೂ ನಿರ್ದೇಶನ ನೀಡಿದೆ.

ಅಲ್ಲದೆ, ಚಂದ್ರಕಾಂತ ಅವರು ತಮ್ಮ ಪೋಷಕರೊಂದಿಗೆ ವಾಸಿಸಲು ಇಷ್ಟವಿಲ್ಲ ಮತ್ತು ರಕ್ಷಣಾ ಗೃಹದಲ್ಲಿ ಉಳಿಯಲು ಒಪ್ಪಿಗೆ ನೀಡಿರುವುದರಿಂದ, ವಿಶೇಷ ವಿವಾಹ ಕಾಯ್ದೆಯಡಿ ಪ್ರಮಾಣಪತ್ರ ಸಿಗುವವರೆಗೂ ಎರಡನೇ ಅರ್ಜಿದಾರರನ್ನು ಪ್ರಯಾಗ್ರಾಜ್ನಲ್ಲಿರುವ ಮಹಿಳಾ ರಕ್ಷಣಾ ಗೃಹದಲ್ಲಿ ಇಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

ಸಮಾಜವಾದಿ ಪಕ್ಷದ ಮಾಜಿ ಸಚಿವ ಅಜಮ್ ಖಾನ್ 23 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...