Homeಮುಖಪುಟಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

"ನಮ್ಮ ರಾಜ್ಯದಲ್ಲಿ ಈ ಕಾನೂನು ಜಾರಿಯಾದ ಬಳಿಕ ತೊಂದರೆಗಳು ಹೆಚ್ಚುವುದು ಬೇಡ ಎಂದು ನಾವು ರಾಜ್ಯವನ್ನೇ ಬಿಟ್ಟಿದ್ದೇವೆ. ಅವಶ್ಯಕತೆ ಬಂದರೆ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲೂ ಸಿದ್ಧನಿದ್ದೇನೆ. ನಮಗೆ ಧರ್ಮ ಒಂದು ಪ್ರಶ್ನೆಯೇ ಅಲ್ಲ"

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಈ ಕಾಯ್ದೆಯ ಮೇಲಿನ ಭಯದಿಂದ ಹಲವಾರು ಅಂತರ್‌ಧರ್ಮೀಯ ಜೋಡಿಗಳು ಉತ್ತರಪ್ರದೇಶದಿಂದ ಬೇರೆ ರಾಜ್ಯಗಳಿಗೆ ತೆರಳುತ್ತಿದ್ದಾರೆ ಎಂದು ವರದಿಯಾಗಿದೆ.

ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದ ಬಳಿಕ ಒಂದು ತಿಂಗಳಿನಲ್ಲಿ 35ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಲವು ಜೋಡಿಗಳನ್ನು ಬಲವಂತವಾಗಿ ಬೇರ್ಪಡಿಸಿ ಬಂಧನಕ್ಕೊಳಪಡಿಸಲಾಗಿದೆ. ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

“ನಾನು ಇಕ್ಬಾಲ್‌ನನ್ನು ಪ್ರೀತಿಸುತ್ತಿದ್ದೇನೆ ಎಂದು ನನ್ನ ಮನೆಯಲ್ಲಿ ತಿಳಿದ ಕೂಡಲೇ ನನ್ನನ್ನು ಮನೆಯೊಳಗೆ ಕೂಡಿಹಾಕಿದರು. ಅಲ್ಲಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದರು. ನನಗೆ ಆತ ಹಿಪ್ನಾಟಿಸಂ ಮಾಡಿದ್ದಾನೆಯೇ ಎಂದು ತಿಳಿಯಲು ಮನೋವೈದ್ಯರ ಬಳಿಯೂ ಕರೆದೊಯ್ದರು. ಹಲವಾರು ರೀತಿಯಲ್ಲಿ ಕಿರುಕುಳ ನೀಡಿದರು. ಕೊನೆಗೆ ನಾವಿಬ್ಬರೂ ಅಲ್ಲಿಂದ ದೆಹಲಿಗೆ ಬಂದು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದೇವೆ. ಮುಂದೇನಾಗಬಹುದು ಎಂದು ನಮಗೆ ತಿಳಿದಿಲ್ಲ” ಎಂದು ಸ್ಮೃತಿ ಎಂಬುವವರು ಹೇಳಿದ್ದಾರೆ.

ಮೊಹಮ್ಮದ್ ಶದಾಬ್ ಮತ್ತು ಅನಮಿಕ ಎಂಬುವವರು ಕಾಲೇಜಿನಲ್ಲಿ ಭೇಟಿಯಾದ ಬಳಿಕ ಪ್ರೀತಿಸಲು ಪ್ರಾರಂಭಿಸಿದ್ದರು. ಈ ವಿಚಾರವನ್ನು ತಿಳಿದ ಕೆಲ ಬಲಪಂಥೀಯ ಸಂಘಟನೆಗಳು ನಮ್ಮನ್ನು ಕೊಲ್ಲಲು ಬಂದಿದ್ದವು ಎಂದು ಯುವಕ ಹೇಳುತ್ತಾನೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಅವರು ನನ್ನ ಹೆತ್ತವರಿಗೆ ತೊಂದರೆ ಕೊಡಬಹುದೆಂಬ ಭಯ ನನಗಿತ್ತು. ನಾನು ಎಲ್ಲವನ್ನೂ ನಿಲ್ಲಿಸುತ್ತೇನೆ ಎಂದು ಆ ಸಂಘಟನೆಗಳಿಗೆ ಮಾತು ನೀಡಿದ್ದೆ. ಆದರೆ ನಾವಿಬ್ಬರು ಸಂಪರ್ಕದಲ್ಲೇ ಇದ್ದೆವು. ನಮ್ಮ ರಾಜ್ಯದಲ್ಲಿ ಈ ಕಾನೂನು ಜಾರಿಯಾದ ಬಳಿಕ ತೊಂದರೆಗಳು ಹೆಚ್ಚುವುದು ಬೇಡ ಎಂದು ನಾವು ರಾಜ್ಯವನ್ನೇ ಬಿಟ್ಟಿದ್ದೇವೆ. ಅವಶ್ಯಕತೆ ಬಂದರೆ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲೂ ಸಿದ್ಧನಿದ್ದೇನೆ ನಮಗೆ ಧರ್ಮ ಒಂದು ಪ್ರಶ್ನೆಯೇ ಅಲ್ಲ” ಎಂದು ಶದಾಬ್ ಹೇಳಿದ್ದಾರೆ.

ಇತ್ತೀಚೆಗೆ ಹಿಂದೂ ಸಂಘಟನೆಗಳು ಈ ಕಾಯ್ದೆಯನ್ನು ಸ್ವೇಚ್ಚೆಯಾಗಿ ಬಳಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿತ್ತು. ಅನ್ಯಧರ್ಮೀಯರು ಗೆಳೆಯರಾಗಿದ್ದರೂ ಸಹ ಅವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...