Homeಮುಖಪುಟಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

"ನಮ್ಮ ರಾಜ್ಯದಲ್ಲಿ ಈ ಕಾನೂನು ಜಾರಿಯಾದ ಬಳಿಕ ತೊಂದರೆಗಳು ಹೆಚ್ಚುವುದು ಬೇಡ ಎಂದು ನಾವು ರಾಜ್ಯವನ್ನೇ ಬಿಟ್ಟಿದ್ದೇವೆ. ಅವಶ್ಯಕತೆ ಬಂದರೆ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲೂ ಸಿದ್ಧನಿದ್ದೇನೆ. ನಮಗೆ ಧರ್ಮ ಒಂದು ಪ್ರಶ್ನೆಯೇ ಅಲ್ಲ"

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಈ ಕಾಯ್ದೆಯ ಮೇಲಿನ ಭಯದಿಂದ ಹಲವಾರು ಅಂತರ್‌ಧರ್ಮೀಯ ಜೋಡಿಗಳು ಉತ್ತರಪ್ರದೇಶದಿಂದ ಬೇರೆ ರಾಜ್ಯಗಳಿಗೆ ತೆರಳುತ್ತಿದ್ದಾರೆ ಎಂದು ವರದಿಯಾಗಿದೆ.

ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದ ಬಳಿಕ ಒಂದು ತಿಂಗಳಿನಲ್ಲಿ 35ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಲವು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹಲವು ಜೋಡಿಗಳನ್ನು ಬಲವಂತವಾಗಿ ಬೇರ್ಪಡಿಸಿ ಬಂಧನಕ್ಕೊಳಪಡಿಸಲಾಗಿದೆ. ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

“ನಾನು ಇಕ್ಬಾಲ್‌ನನ್ನು ಪ್ರೀತಿಸುತ್ತಿದ್ದೇನೆ ಎಂದು ನನ್ನ ಮನೆಯಲ್ಲಿ ತಿಳಿದ ಕೂಡಲೇ ನನ್ನನ್ನು ಮನೆಯೊಳಗೆ ಕೂಡಿಹಾಕಿದರು. ಅಲ್ಲಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದರು. ನನಗೆ ಆತ ಹಿಪ್ನಾಟಿಸಂ ಮಾಡಿದ್ದಾನೆಯೇ ಎಂದು ತಿಳಿಯಲು ಮನೋವೈದ್ಯರ ಬಳಿಯೂ ಕರೆದೊಯ್ದರು. ಹಲವಾರು ರೀತಿಯಲ್ಲಿ ಕಿರುಕುಳ ನೀಡಿದರು. ಕೊನೆಗೆ ನಾವಿಬ್ಬರೂ ಅಲ್ಲಿಂದ ದೆಹಲಿಗೆ ಬಂದು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದೇವೆ. ಮುಂದೇನಾಗಬಹುದು ಎಂದು ನಮಗೆ ತಿಳಿದಿಲ್ಲ” ಎಂದು ಸ್ಮೃತಿ ಎಂಬುವವರು ಹೇಳಿದ್ದಾರೆ.

ಮೊಹಮ್ಮದ್ ಶದಾಬ್ ಮತ್ತು ಅನಮಿಕ ಎಂಬುವವರು ಕಾಲೇಜಿನಲ್ಲಿ ಭೇಟಿಯಾದ ಬಳಿಕ ಪ್ರೀತಿಸಲು ಪ್ರಾರಂಭಿಸಿದ್ದರು. ಈ ವಿಚಾರವನ್ನು ತಿಳಿದ ಕೆಲ ಬಲಪಂಥೀಯ ಸಂಘಟನೆಗಳು ನಮ್ಮನ್ನು ಕೊಲ್ಲಲು ಬಂದಿದ್ದವು ಎಂದು ಯುವಕ ಹೇಳುತ್ತಾನೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತಾಂತರ ನಿಷೇಧ ಕಾಯ್ದೆಯಡಿ ಮತ್ತೊಬ್ಬರ ಬಂಧನ

“ಅವರು ನನ್ನ ಹೆತ್ತವರಿಗೆ ತೊಂದರೆ ಕೊಡಬಹುದೆಂಬ ಭಯ ನನಗಿತ್ತು. ನಾನು ಎಲ್ಲವನ್ನೂ ನಿಲ್ಲಿಸುತ್ತೇನೆ ಎಂದು ಆ ಸಂಘಟನೆಗಳಿಗೆ ಮಾತು ನೀಡಿದ್ದೆ. ಆದರೆ ನಾವಿಬ್ಬರು ಸಂಪರ್ಕದಲ್ಲೇ ಇದ್ದೆವು. ನಮ್ಮ ರಾಜ್ಯದಲ್ಲಿ ಈ ಕಾನೂನು ಜಾರಿಯಾದ ಬಳಿಕ ತೊಂದರೆಗಳು ಹೆಚ್ಚುವುದು ಬೇಡ ಎಂದು ನಾವು ರಾಜ್ಯವನ್ನೇ ಬಿಟ್ಟಿದ್ದೇವೆ. ಅವಶ್ಯಕತೆ ಬಂದರೆ ನಾನು ಹಿಂದೂ ಧರ್ಮಕ್ಕೆ ಮತಾಂತರಗೊಳ್ಳಲೂ ಸಿದ್ಧನಿದ್ದೇನೆ ನಮಗೆ ಧರ್ಮ ಒಂದು ಪ್ರಶ್ನೆಯೇ ಅಲ್ಲ” ಎಂದು ಶದಾಬ್ ಹೇಳಿದ್ದಾರೆ.

ಇತ್ತೀಚೆಗೆ ಹಿಂದೂ ಸಂಘಟನೆಗಳು ಈ ಕಾಯ್ದೆಯನ್ನು ಸ್ವೇಚ್ಚೆಯಾಗಿ ಬಳಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿತ್ತು. ಅನ್ಯಧರ್ಮೀಯರು ಗೆಳೆಯರಾಗಿದ್ದರೂ ಸಹ ಅವರ ಮೇಲೆ ಹಲ್ಲೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...