Homeಮುಖಪುಟ‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

‘ಮತಾಂತರದ ತಂತ್ರ’ ಎಂದು ಆರೋಪಿಸಿ ಸಾಂತಕ್ಲಾಸ್‌ ಪ್ರತಿಕೃತಿ ದಹಿಸಿದ ಬಲಪಂಥೀಯರು!

- Advertisement -
- Advertisement -

ಬಲಪಂಥೀಯ ಸಂಘಟನೆಗಳಾದ ಐಎಚ್‌ಪಿ ಮತ್ತು ರಾಷ್ಟ್ರೀಯ ಜಬರಂಗದಳದ ಕಾರ್ಯಕರ್ತರು ಸಾಂತ ಕ್ಲಾಸ್‌ನ ಪ್ರತಿಕೃತಿಗಳನ್ನು ಸುಟ್ಟ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ನಡೆದಿದೆ. ಕ್ರಿಶ್ಚಿಯನ್ ಮಿಷನರಿಗಳು ಜನರನ್ನು ಮತಾಂತರಿಸುವ ತಂತ್ರದ ಭಾಗವಾಗಿ ಸಾಂತಾ ಕ್ಲಾಸ್‌‌‌ ಅನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕ್ರಿಸ್‌ಮಸ್ ಮುನ್ನಾದಿನದಂದು ಮಹಾತ್ಮ ಗಾಂಧಿ ಮಾರ್ಗದಲ್ಲಿರುವ ಸೇಂಟ್ ಜಾನ್ಸ್ ಕಾಲೇಜಿನ ಕ್ಯಾರಿಡಾರ್‌‌ ಬಳಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಗುರ್ಗಾಂವ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆಗೆ ಅಡ್ಡಿ: ವೇದಿಕೆಗೆ ನುಗ್ಗಿ ದಾಂಧಲೆ

ಐಎಚ್‌ಪಿ ಮತ್ತು ರಾಷ್ಟ್ರೀಯ ಬಜರಂಗದಳದ ಸದಸ್ಯರು ಸಾಂತಕ್ಲಾಸ್ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಂತ ನಿಕೋಲಸ್ ಅವರ ಪ್ರತಿಕೃತಿಗಳನ್ನು ಹೊತ್ತು ಮೆರವಣಿಗೆ ನಡೆಸಿದ್ದಾರೆ. ಇದರ ನಂತರ ಅವರು “ಸಾಂತಕ್ಲಾಸ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿ ಪ್ರತಿಕೃತಿಗಳನ್ನು ದಹಿಸಿದ್ದಾರೆ.

ಕ್ರಿಸ್‌ಮಸ್ ಸಮಯದಲ್ಲಿ ಸಾಂತ ಕ್ಲಾಸ್‌ ಅನ್ನು ಬಳಸಿಕೊಂಡು ತಂತ್ರಪೂರ್ವಕವಾಗಿ ಹಿಂದೂಗಳನ್ನು ಮತಾಂತರಿಸುವ ಕ್ರಿಶ್ಚಿಯನ್ ಸಮಾಜದ ಆಪಾದಿತ ಪ್ರಯತ್ನಗಳನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಬಲಪಂಥೀಯ ಕಾರ್ಯಕರ್ತರು ಹೇಳಿಕೆ ನೀಡಿದ್ದಾರೆ.

ಮಿಷನರಿ ಶಾಲೆಗಳು ವಿದ್ಯಾರ್ಥಿಗಳನ್ನು ಸಾಂತ ಕ್ಲಾಸ್‌ನಂತೆ ವೇಷಧರಿಸಿ ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನಿಸುತ್ತಿವೆ ಎಂದು ಅಹಿಂಪ ಮತ್ತು ರಾಷ್ಟ್ರೀಯ ಬಜರಂಗದಳದ ಪ್ರಧಾನ ಕಾರ್ಯದರ್ಶಿ ಅಜ್ಜು ಚೌಹಾಣ್ ಆರೋಪಿಸಿದ್ದಾರೆ.

ಇದನ್ನೂ ಓದಿ:ಶಾಲೆಗೆ ನುಗ್ಗಿ ಕ್ರಿಸ್‌ಮಸ್ ಆಚರಿಸದಂತೆ ಬೆದರಿಸಿದ ಬಲಪಂಥೀಯರು

“ಸಾಂತ ಯಾವುದೇ ಉಡುಗೊರೆಗಳನ್ನು ಹೊತ್ತುಕೊಂಡು ಬರುವುದಿಲ್ಲ. ಹಿಂದೂಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವುದು ಅವನ ಏಕೈಕ ಗುರಿಯಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಯಾವುದೇ ಮತಾಂತರದ ಪ್ರಯತ್ನವನ್ನು ಯಶಸ್ವಿಯಾಗಲು ಬಿಡುವುದಿಲ್ಲ, ಇದನ್ನು ನಿಲ್ಲಿಸದಿದ್ದರೆ, ಮಿಷನರಿ ಶಾಲೆಗಳ ವಿರುದ್ದ ಆಂದೋಲನಗಳು ನಡೆಯುತ್ತವೆ” ಎಂದು ಅಜ್ಜು ಚೌಹಾಣ್ ಹೇಳಿದ್ದಾರೆ.

ರಾಷ್ಟ್ರೀಯ ಬಜರಂಗದಳದ ಅಧ್ಯಕ್ಷ ಅವತಾರ್ ಸಿಂಗ್ ಗಿಲ್ ಮಾತನಾಡಿ, “ಒಂದೆಡೆ ಕ್ರಿಶ್ಚಿಯನ್ ಮಿಷನರಿಗಳು ದೊಡ್ಡ ಶಾಲೆಗಳನ್ನು ನಡೆಸುತ್ತಾ, ಮತ್ತೊಂದೆಡೆ ಹಿಂದೂಗಳನ್ನು ಅವರು ಮತಾಂತರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ತಡೆಯಲು ರಾಷ್ಟ್ರೀಯ ಬಜರಂಗ ದಳದಿಂದ ತಂಡಗಳನ್ನು ರಚಿಸಲಾಗುವುದು. ಈ ತಂಡಗಳು ಪ್ರದೇಶಗಳು ಮತ್ತು ಮೊಹಲ್ಲಾಗಳ ಮೇಲೆ ನಿಗಾ ಇಡುತ್ತವೆ. ಇದರಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ದುರುದ್ದೇಶಪೂರಿತ ಪ್ರಯತ್ನಗಳನ್ನು ವಿಫಲಗೊಳಿಸಲಾಗುತ್ತದೆ. ಯಾವುದೇ ಮಿಷನರಿ ಈ ರೀತಿ ಮಾಡುವುದು ಕಂಡುಬಂದರೆ, ಅಹಿಂಪ ಮತ್ತು ರಾಷ್ಟ್ರೀಯ ಬಜರಂಗದಳ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ’’ ಎಂದು ಅವತಾರ್ ಸಿಂಗ್ ಗಿಲ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಯೇಸುವಿನ ಜೀವನ ಬೋಧನೆ ಸ್ಮರಿಸುತ್ತೇವೆ: ಪ್ರಧಾನಿ ಮೋದಿ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...