Homeಮುಖಪುಟಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

- Advertisement -
- Advertisement -

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 24) ಎತ್ತಿಹಿಡಿದಿದೆ.

ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ತಕ್ಷಣ ಮತ್ತು ಸಂಪೂರ್ಣವಾಗಿ ನಷ್ಟವಾಗುತ್ತದೆ ಎಂದು ತಿಳಿಸಿದೆ.

ಸಂವಿಧಾನದ (ಪರಿಶಿಷ್ಟ ಜಾತಿ) ಆದೇಶ, 1950 ಈ ವಿಷಯವನ್ನು ಸ್ಪಷ್ಟಪಡಿಸಿದೆ ಮತ್ತು ಈ ಆದೇಶದ ಅಡಿಯಲ್ಲಿರುವ ನಿರ್ಬಂಧವು ಸಂಪೂರ್ಣವಾಗಿದೆ ಎಂದು ನ್ಯಾಯಾಲಯವು ಹೇಳಿದೆ. 1950ರ ಆದೇಶದ 3ನೇ ಕಲಂನಲ್ಲಿ ಉಲ್ಲೇಖಿಸದ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ, ವ್ಯಕ್ತಿಯು ಹುಟ್ಟಿನಿಂದ ಆ ಜಾತಿಗೆ ಸೇರಿದವರಾಗಿದ್ದರೂ ಸಹ, ತಕ್ಷಣವೇ ತಮ್ಮ ಪರಿಶಿಷ್ಟ ಜಾತಿಯ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

“3ನೇ ಕಲಂನ ಅನ್ವಯ ಯಾರು ಪರಿಶಿಷ್ಟ ಜಾತಿಯ ಸದಸ್ಯರೆಂದು ಪರಿಗಣಿಸಲ್ಪಡುವುದಿಲ್ಲವೋ, ಅಂತಹ ಯಾವುದೇ ವ್ಯಕ್ತಿಯು ಸಂವಿಧಾನದ ಅಡಿಯಲ್ಲಿ ಅಥವಾ ಸಂಸತ್ತು ಅಥವಾ ರಾಜ್ಯ ಶಾಸನಸಭೆಯ ಶಾಸನಗಳ ಅಡಿಯಲ್ಲಿ ಯಾವುದೇ ಶಾಸನಬದ್ಧ ಸೌಲಭ್ಯ, ರಕ್ಷಣೆ, ಮೀಸಲಾತಿ ಅಥವಾ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ ಅಥವಾ ಅವರಿಗೆ ಅದನ್ನು ವಿಸ್ತರಿಸಲು ಬರುವುದಿಲ್ಲ. ಈ ನಿರ್ಬಂಧವು ಸಂಪೂರ್ಣವಾಗಿದ್ದು, ಇದಕ್ಕೆ ಯಾವುದೇ ವಿನಾಯಿತಿಗಳಿಲ್ಲ. ಒಬ್ಬ ವ್ಯಕ್ತಿಯು 3ನೇ ಕಲಂನಲ್ಲಿ ನಿರ್ದಿಷ್ಟಪಡಿಸಿದ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮವನ್ನು ಅನುಸರಿಸುತ್ತಾ ಮತ್ತು ಆಚರಿಸುತ್ತಾ, ಅದೇ ಸಮಯದಲ್ಲಿ ಪರಿಶಿಷ್ಟ ಜಾತಿಯ ಸದಸ್ಯತ್ವವನ್ನು ಪಡೆಯಲು ಸಾಧ್ಯವಿಲ್ಲ” ಎಂದು ನ್ಯಾಯಾಲಯವು ತೀರ್ಪು ನೀಡಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು, ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ಯಡಿ ಪ್ರಕರಣ ದಾಖಲಿಸಿರುವುದು ಸುಪ್ರೀಂ ಕೋರ್ಟ್‌ ಆದೇಶದ ಮೂಲ ಪ್ರಕರಣವಾಗಿದೆ. ಸದರಿ ಪಾದ್ರಿಯು ಮತಾಂತರಗೊಂಡು ಸಕ್ರಿಯವಾಗಿ ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಿರುವುದರಿಂದ, ಅವರು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಕಾನೂನುಬದ್ಧವಾಗಿ ಅರ್ಹರಲ್ಲ ಎಂದು ಆರೋಪಿಗಳು ವಾದಿಸಿದ್ದರು.

ಆಂಧ್ರ ಪ್ರದೇಶ ಹೈಕೋರ್ಟ್ ಏಪ್ರಿಲ್ 30, 2025ರಂದು ನೀಡಿದ ಆದೇಶದಲ್ಲಿ, ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ಪದ್ಧತಿ ಅಸ್ತಿತ್ವದಲ್ಲಿಲ್ಲದ ಕಾರಣ, ಆ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ದೂರು ದಾಖಲಿಸಲು ಅರ್ಹರಲ್ಲ ಎಂದು ಹೇಳಿತ್ತು. ಹೈಕೋರ್ಟ್‌ ನ್ಯಾಯಮೂರ್ತಿ ಹರಿನಾಥ್ ಎನ್. ಅವರು, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಬಳಸಿಕೊಂಡಿದ್ದ ಪಾದ್ರಿಯ ಆರೋಪಗಳನ್ನು ರದ್ದುಗೊಳಿಸಿದ್ದರು. ಈ ಆದೇಶದ ವಿರುದ್ಧ ಪಾದ್ರಿಯು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, “ಪ್ರಸ್ತುತ ಪ್ರಕರಣದಲ್ಲಿ, ಅರ್ಜಿದಾರರು (ಪಾದ್ರಿ) ಕ್ರಿಶ್ಚಿಯನ್ ಧರ್ಮದಿಂದ ತಮ್ಮ ಮೂಲ ಧರ್ಮಕ್ಕೆ ಮರು-ಮತಾಂತರಗೊಂಡಿದ್ದಾರೆ ಅಥವಾ ಮಾದಿಗ ಸಮುದಾಯವು ಅವರನ್ನು ಮತ್ತೆ ಸ್ವೀಕರಿಸಿದೆ ಎಂಬ ವಾದ ಇಲ್ಲ. ಬದಲಾಗಿ, ಅವರು ಕ್ರಿಶ್ಚಿಯನ್ ಧರ್ಮವನ್ನು ಅನುಸರಿಸುತ್ತಾ ಬಂದಿದ್ದಾರೆ ಮತ್ತು ಕಳೆದ ಹತ್ತು ವರ್ಷಗಳಿಗೂ ಹೆಚ್ಚು ಕಾಲ ಪಾದ್ರಿಯಾಗಿ ಕಾರ್ಯನಿರ್ವಹಿಸುತ್ತಾ, ಹಳ್ಳಿಗಳಲ್ಲಿನ ಮನೆಗಳಲ್ಲಿ ನಿಯಮಿತವಾಗಿ ಭಾನುವಾರದ ಪ್ರಾರ್ಥನೆಗಳನ್ನು ನಡೆಸುತ್ತಿದ್ದರು ಎಂಬುದಕ್ಕೆ ಸಾಕ್ಷ್ಯಗಳಿವೆ. ಘಟನೆ ನಡೆದ ಸಮಯದಲ್ಲಿಯೂ ಅವರು ಮನೆಯೊಂದರಲ್ಲಿ ಪ್ರಾರ್ಥನಾ ಸಭೆಯನ್ನು ನಡೆಸುತ್ತಿದ್ದರು ಎಂಬುದನ್ನು ಒಪ್ಪಿಕೊಳ್ಳಲಾಗಿದೆ. ಈ ಎಲ್ಲಾ ಪೂರಕ ಸಂಗತಿಗಳನ್ನು ಗಮನಿಸಿದರೆ, ಘಟನೆ ನಡೆದ ದಿನದಂದು ಅವರು ಕ್ರಿಶ್ಚಿಯನ್ ಆಗಿಯೇ ಮುಂದುವರಿದಿದ್ದರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಹೇಳಿದೆ.

ಪಾದ್ರಿಯ ಪ್ರಕರಣದಲ್ಲಿ ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್ 3(1)(r), 3(1)(s), 3(2)(va) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 341, 506, 323 ರೊಂದಿಗೆ ಓದಿಕೊಂಡ ಸೆಕ್ಷನ್ 34 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಆರೋಪ ಹೊರಿಸಲಾಗಿತ್ತು.

ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯ ಪೀಟಲವಾನಿಪಾಲೆಂ ಗ್ರಾಮದಲ್ಲಿ ಭಾನುವಾರದ ಪ್ರಾರ್ಥನೆಗಳನ್ನು ನಡೆಸುತ್ತಿದ್ದ ವೇಳೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ. ತನಗೂ ತನ್ನ ಕುಟುಂಬಕ್ಕೂ ಪದೇ ಪದೇ ಜೀವ ಬೆದರಿಕೆ ಹಾಕಲಾಗುತ್ತಿದೆ. ಅಲ್ಲದೆ, ತನ್ನನ್ನು ಜಾತಿಯ ಹೆಸರಿನಲ್ಲಿ ನಿಂದಿಸಲಾಗಿದೆ ಎಂದು ಆರೋಪಿಸಿ ಪಾದ್ರಿ ದೂರು ದಾಖಲಿಸಿದ್ದರು.

ಪೊಲೀಸರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದರ ವಿರುದ್ದ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ರದ್ದತಿಗೆ ಕೋರಿದ್ದರು.

ದೂರುದಾರರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿ ಕೆಲಸ ಮಾಡುತ್ತಿದ್ದರಿಂದ ಅವರು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ನಮ್ಮ ಮೇಲೆ ಎಸ್‌ಸಿ ಮತ್ತು ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸುವುದು ಕಾನೂನುಬಾಹಿರವಾಗಿದೆ. 1950ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಹಿಂದೂ ಧರ್ಮಕ್ಕಿಂತ ಭಿನ್ನವಾದ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಅರ್ಜಿದಾರರು ವಾದಿಸಿದ್ದರು.

ಪಾದ್ರಿ ಪರ ವಕೀಲರು ತನಿಖೆ ಪೂರ್ಣಗೊಂಡಿದೆ ಮತ್ತು ಪೊಲೀಸರು ಸುಮಾರು 10 ಸಾಕ್ಷಿಗಳ ಹೇಳಿಕೆಗಳೊಂದಿಗೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು ವಾದಿಸಿದ್ದರು. ಎಸ್‌ಸಿ/ಎಸ್‌ಟಿ ಕಾಯ್ದೆಯ ಅನ್ವಯಕ್ಕೆ ಸಂಬಂಧಿಸಿದಂತೆ, ಪೀಟಲವಾನಿಪಾಲೆಂ ಮಂಡಲದ ತಹಶೀಲ್ದಾರ್ ದೂರುದಾರ ಹಿಂದೂ-ಮಾದಿಗ ಜಾತಿಗೆ ಸೇರಿದ ಪರಿಶಿಷ್ಟ ಜಾತಿಯ ಸದಸ್ಯರೆಂದು ದೃಢಪಡಿಸಿರುವುದರಿಂದ, ಅವರಿಗೆ ಈ ಕಾಯ್ದೆಯಡಿ ರಕ್ಷಣೆ ನಿರಾಕರಿಸಲಾಗದು ಎಂದು ಹೇಳಿದ್ದರು. ದೂರುದಾರ ಪೀಟಲವಾನಿಪಾಲೆಂ ಮಂಡಲದ ತಹಶೀಲ್ದಾರ್ ನೀಡಿದ ಜಾತಿ ಪ್ರಮಾಣಪತ್ರವನ್ನು ಹೊಂದಿದ್ದಾರೆ ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್, “ದೂರುದಾರ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಹೊಂದಿದ್ದಾರೆ ಎಂಬ ವಿಷಯವನ್ನು ಆಂಧ್ರ ಪ್ರದೇಶ (ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಹಿಂದುಳಿದ ವರ್ಗಗಳು) ಸಮುದಾಯ ಪ್ರಮಾಣಪತ್ರಗಳ ವಿತರಣೆ ನಿಯಂತ್ರಣ ಕಾಯ್ದೆ, 1993ರ ಸೆಕ್ಷನ್ 5 ರ ಅಡಿಯಲ್ಲಿ ಸಂಬಂಧಿತ ಅಧಿಕಾರಿಯೇ ನಿರ್ಧರಿಸಬೇಕಾಗುತ್ತದೆ. ಆದರೆ, ಕೇವಲ ಜಾತಿ ಪ್ರಮಾಣಪತ್ರವು ರದ್ದಾಗಿಲ್ಲ ಎಂಬ ಕಾರಣಕ್ಕೆ, ಮತಾಂತರದ ನಂತರವೂ ದೂರುದಾರ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಅರ್ಹರಾಗುವುದಿಲ್ಲ” ಎಂದು ಸ್ಪಷ್ಟಪಡಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...