Homeಮುಖಪುಟಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ.

ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

23 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗೋವಿಂದಚಾಮಿ, ಶುಕ್ರವಾರ ಮುಂಜಾನೆ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ. ಪೊಲೀಸರ ಅಂದಾಜಿನ ಪ್ರಕಾರ, ಮುಂಜಾನೆ ಸುಮಾರು 4.15 ರಿಂದ 6.30ರ ನಡುವೆ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಣ್ಣೂರು ನಗರ ಪೊಲೀಸ್ ಆಯುಕ್ತ ನಿಧಿನ್ ರಾಜ್, ಬೆಳಿಗ್ಗೆ 6.30ರ ಸುಮಾರಿಗೆ ಗೋವಿಂದಚಾಮಿ ಜೈಲಿನಿಂದ ತಪ್ಪಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಂತರ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕಣ್ಣೂರಿನ ಮೇಲೆ ವಿಶೇಷ ಗಮನ ಹರಿಸಲಾಯಿತು. ನೆರೆಯ ರಾಜ್ಯಗಳಿಗೂ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ.

ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸುಮಾರು ಐದು ಗಂಟೆಗಳ ನಂತರ, ಬೆಳಿಗ್ಗೆ 10.15ರ ಸುಮಾರಿಗೆ ಜೈಲಿನಿಂದ ಮೂರು ಕಿಲೋಮೀಟರ್ ದೂರದ ತಲಾಪ್‌ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅವಿತುಕೊಂಡಿರುವುದು ಗೊತ್ತಾಯಿತು. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಸೆರೆ ಹಿಡಿದರು ಎಂದು ತಿಳಿಸಿದ್ದಾರೆ.

ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಜೈಲು ಅಧಿಕಾರಿಗಳ ಲೋಪ ಕಂಡುಬಂದಿವೆ ಎಂದು ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕ ಬಲರಾಮ್ ಕುಮಾರ್ ಉಪಾಧ್ಯಾಯ ಹೇಳಿದ್ದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಡಿಐಜಿ ವಿವರವಾದ ತನಿಖೆ ನಡೆಸಲಿದ್ದಾರೆ. ಅವರ ಪ್ರಾಥಮಿಕ ತನಿಖೆಯಲ್ಲಿ ಹಲವಾರು ಲೋಪಗಳು ಬೆಳಕಿಗೆ ಬಂದಿವೆ. ಗೋವಿಂದಚಾಮಿ ನಿಖರವಾದ ಯೋಜನೆ ರೂಪಿಸಿ ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂಬುವುದು ಆಂತರಿಕ ತನಿಖೆ ಸೂಚಿಸುತ್ತದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಪ್ರತಿದಿನ ಬೆಳಿಗ್ಗೆ 5:30ಕ್ಕೆ ಜೈಲು ಅಧಿಕಾರಿಗಳು ಖೈದಿಗಳನ್ನು ಎಣಿಕೆ ಮಾಡುತ್ತಾರೆ. ಶುಕ್ರವಾರ ಬೆಳಿಗ್ಗೆ ಎಣಿಕೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದ ಅಧಿಕಾರಿಗಳು ಎಲ್ಲವೂ ಸರಿಯಾಗಿದೆ ಎಂದಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ಜೈಲಿನ ಗೋಡೆಯ ಮೇಲೆ ಬಟ್ಟೆ ನೇತಾಡುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಖೈದಿಗಳ ಮರು ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಗೋವಿಂದಚಾಮಿ ತಪ್ಪಿಸಿಕೊಂಡಿರುವುದು ಅವರಿಗೆ ಗೊತ್ತಾಗಿದೆ.

ಗೋವಿಂದಚಾಮಿ ಜೈಲಿನ ಕೋಣೆಯ ಸರಳುಗಳನ್ನು ಕತ್ತರಿಸಿ, ಬೆಡ್‌ಶೀಟ್‌ ಅನ್ನು ಹಗ್ಗದಂತೆ ಬಳಸಿ ಜೈಲಿನ ಗೋಡೆಗಳನ್ನು ಹತ್ತಿ ತಪ್ಪಿಸಿಕೊಂಡಿದ್ದ. ಜೈಲಿನ ಗೋಡೆಗೆ ವಿದ್ಯುತ್ ಬೇಲಿ ಹಾಕಲಾಗಿದ್ದರೂ, ಗೋವಿಂದಚಾಮಿ ತಪ್ಪಿಸಿಕೊಳ್ಳುವ ಸಮಯದಲ್ಲಿ ಅದು ಕಾರ್ಯನಿರ್ವಹಿಸುತ್ತಿರಲಿಲ್ಲ. ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆತ ತಪ್ಪಿಸಿಕೊಂಡಿರುವುದು ಖಚಿತವಾಗಿದೆ.

ಗೋವಿಂದಚಾಮಿ ತಪ್ಪಿಸಿಕೊಳ್ಳಲು ಬಹಳ ಎಚ್ಚರಿಕೆಯಿಂದ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಆತ ತೂಕ ಇಳಿಸಿಕೊಳ್ಳಲು ಅನ್ನ ತಿನ್ನುವುದನ್ನು ಕಡಿಮೆ ಮಾಡಿ ರೊಟ್ಟಿ ಮಾತ್ರ ತಿನ್ನುತ್ತಿದ್ದ. ಇದರಿಂದಾಗಿ ಆತ ಕಂಬಿಗಳನ್ನು ಕತ್ತರಿಸಿ ಅವುಗಳ ಮಧ್ಯೆ ತಪ್ಪಿಸಿಕೊಳ್ಳಲು ಸುಲಭವಾಗಿದೆ ಎಂದಿದ್ದಾರೆ.

ಫೆಬ್ರವರಿ 2011ರಲ್ಲಿ, 23 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದಲ್ಲಿ ಗೋವಿಂದಚಾಮಿ ಶಿಕ್ಷೆಗೊಳಗಾಗಿದ್ದ. ಕೊಲೆಯಾದ ಮಹಿಳೆ ಫೆಬ್ರವರಿ 1, 2011ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಗೋವಿಂದಚಾಮಿ ಅತ್ಯಾಚಾರವೆಸಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಫೆಬ್ರವರಿ 6 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದರು.

ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...