Homeಮುಖಪುಟಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ.

ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

23 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗೋವಿಂದಚಾಮಿ, ಶುಕ್ರವಾರ ಮುಂಜಾನೆ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ. ಪೊಲೀಸರ ಅಂದಾಜಿನ ಪ್ರಕಾರ, ಮುಂಜಾನೆ ಸುಮಾರು 4.15 ರಿಂದ 6.30ರ ನಡುವೆ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಣ್ಣೂರು ನಗರ ಪೊಲೀಸ್ ಆಯುಕ್ತ ನಿಧಿನ್ ರಾಜ್, ಬೆಳಿಗ್ಗೆ 6.30ರ ಸುಮಾರಿಗೆ ಗೋವಿಂದಚಾಮಿ ಜೈಲಿನಿಂದ ತಪ್ಪಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಂತರ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕಣ್ಣೂರಿನ ಮೇಲೆ ವಿಶೇಷ ಗಮನ ಹರಿಸಲಾಯಿತು. ನೆರೆಯ ರಾಜ್ಯಗಳಿಗೂ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ.

ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸುಮಾರು ಐದು ಗಂಟೆಗಳ ನಂತರ, ಬೆಳಿಗ್ಗೆ 10.15ರ ಸುಮಾರಿಗೆ ಜೈಲಿನಿಂದ ಮೂರು ಕಿಲೋಮೀಟರ್ ದೂರದ ತಲಾಪ್‌ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅವಿತುಕೊಂಡಿರುವುದು ಗೊತ್ತಾಯಿತು. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಸೆರೆ ಹಿಡಿದರು ಎಂದು ತಿಳಿಸಿದ್ದಾರೆ.

ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಜೈಲು ಅಧಿಕಾರಿಗಳ ಲೋಪ ಕಂಡುಬಂದಿವೆ ಎಂದು ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕ ಬಲರಾಮ್ ಕುಮಾರ್ ಉಪಾಧ್ಯಾಯ ಹೇಳಿದ್ದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಡಿಐಜಿ ವಿವರವಾದ ತನಿಖೆ ನಡೆಸಲಿದ್ದಾರೆ. ಅವರ ಪ್ರಾಥಮಿಕ ತನಿಖೆಯಲ್ಲಿ ಹಲವಾರು ಲೋಪಗಳು ಬೆಳಕಿಗೆ ಬಂದಿವೆ. ಗೋವಿಂದಚಾಮಿ ನಿಖರವಾದ ಯೋಜನೆ ರೂಪಿಸಿ ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂಬುವುದು ಆಂತರಿಕ ತನಿಖೆ ಸೂಚಿಸುತ್ತದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಪ್ರತಿದಿನ ಬೆಳಿಗ್ಗೆ 5:30ಕ್ಕೆ ಜೈಲು ಅಧಿಕಾರಿಗಳು ಖೈದಿಗಳನ್ನು ಎಣಿಕೆ ಮಾಡುತ್ತಾರೆ. ಶುಕ್ರವಾರ ಬೆಳಿಗ್ಗೆ ಎಣಿಕೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದ ಅಧಿಕಾರಿಗಳು ಎಲ್ಲವೂ ಸರಿಯಾಗಿದೆ ಎಂದಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ಜೈಲಿನ ಗೋಡೆಯ ಮೇಲೆ ಬಟ್ಟೆ ನೇತಾಡುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಖೈದಿಗಳ ಮರು ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಗೋವಿಂದಚಾಮಿ ತಪ್ಪಿಸಿಕೊಂಡಿರುವುದು ಅವರಿಗೆ ಗೊತ್ತಾಗಿದೆ.

ಗೋವಿಂದಚಾಮಿ ಜೈಲಿನ ಕೋಣೆಯ ಸರಳುಗಳನ್ನು ಕತ್ತರಿಸಿ, ಬೆಡ್‌ಶೀಟ್‌ ಅನ್ನು ಹಗ್ಗದಂತೆ ಬಳಸಿ ಜೈಲಿನ ಗೋಡೆಗಳನ್ನು ಹತ್ತಿ ತಪ್ಪಿಸಿಕೊಂಡಿದ್ದ. ಜೈಲಿನ ಗೋಡೆಗೆ ವಿದ್ಯುತ್ ಬೇಲಿ ಹಾಕಲಾಗಿದ್ದರೂ, ಗೋವಿಂದಚಾಮಿ ತಪ್ಪಿಸಿಕೊಳ್ಳುವ ಸಮಯದಲ್ಲಿ ಅದು ಕಾರ್ಯನಿರ್ವಹಿಸುತ್ತಿರಲಿಲ್ಲ. ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆತ ತಪ್ಪಿಸಿಕೊಂಡಿರುವುದು ಖಚಿತವಾಗಿದೆ.

ಗೋವಿಂದಚಾಮಿ ತಪ್ಪಿಸಿಕೊಳ್ಳಲು ಬಹಳ ಎಚ್ಚರಿಕೆಯಿಂದ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಆತ ತೂಕ ಇಳಿಸಿಕೊಳ್ಳಲು ಅನ್ನ ತಿನ್ನುವುದನ್ನು ಕಡಿಮೆ ಮಾಡಿ ರೊಟ್ಟಿ ಮಾತ್ರ ತಿನ್ನುತ್ತಿದ್ದ. ಇದರಿಂದಾಗಿ ಆತ ಕಂಬಿಗಳನ್ನು ಕತ್ತರಿಸಿ ಅವುಗಳ ಮಧ್ಯೆ ತಪ್ಪಿಸಿಕೊಳ್ಳಲು ಸುಲಭವಾಗಿದೆ ಎಂದಿದ್ದಾರೆ.

ಫೆಬ್ರವರಿ 2011ರಲ್ಲಿ, 23 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದಲ್ಲಿ ಗೋವಿಂದಚಾಮಿ ಶಿಕ್ಷೆಗೊಳಗಾಗಿದ್ದ. ಕೊಲೆಯಾದ ಮಹಿಳೆ ಫೆಬ್ರವರಿ 1, 2011ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಗೋವಿಂದಚಾಮಿ ಅತ್ಯಾಚಾರವೆಸಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಫೆಬ್ರವರಿ 6 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದರು.

ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...