Homeಮುಖಪುಟಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ.

ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

23 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗೋವಿಂದಚಾಮಿ, ಶುಕ್ರವಾರ ಮುಂಜಾನೆ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ. ಪೊಲೀಸರ ಅಂದಾಜಿನ ಪ್ರಕಾರ, ಮುಂಜಾನೆ ಸುಮಾರು 4.15 ರಿಂದ 6.30ರ ನಡುವೆ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಣ್ಣೂರು ನಗರ ಪೊಲೀಸ್ ಆಯುಕ್ತ ನಿಧಿನ್ ರಾಜ್, ಬೆಳಿಗ್ಗೆ 6.30ರ ಸುಮಾರಿಗೆ ಗೋವಿಂದಚಾಮಿ ಜೈಲಿನಿಂದ ತಪ್ಪಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಂತರ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕಣ್ಣೂರಿನ ಮೇಲೆ ವಿಶೇಷ ಗಮನ ಹರಿಸಲಾಯಿತು. ನೆರೆಯ ರಾಜ್ಯಗಳಿಗೂ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ.

ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸುಮಾರು ಐದು ಗಂಟೆಗಳ ನಂತರ, ಬೆಳಿಗ್ಗೆ 10.15ರ ಸುಮಾರಿಗೆ ಜೈಲಿನಿಂದ ಮೂರು ಕಿಲೋಮೀಟರ್ ದೂರದ ತಲಾಪ್‌ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅವಿತುಕೊಂಡಿರುವುದು ಗೊತ್ತಾಯಿತು. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಸೆರೆ ಹಿಡಿದರು ಎಂದು ತಿಳಿಸಿದ್ದಾರೆ.

ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಜೈಲು ಅಧಿಕಾರಿಗಳ ಲೋಪ ಕಂಡುಬಂದಿವೆ ಎಂದು ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕ ಬಲರಾಮ್ ಕುಮಾರ್ ಉಪಾಧ್ಯಾಯ ಹೇಳಿದ್ದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಡಿಐಜಿ ವಿವರವಾದ ತನಿಖೆ ನಡೆಸಲಿದ್ದಾರೆ. ಅವರ ಪ್ರಾಥಮಿಕ ತನಿಖೆಯಲ್ಲಿ ಹಲವಾರು ಲೋಪಗಳು ಬೆಳಕಿಗೆ ಬಂದಿವೆ. ಗೋವಿಂದಚಾಮಿ ನಿಖರವಾದ ಯೋಜನೆ ರೂಪಿಸಿ ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂಬುವುದು ಆಂತರಿಕ ತನಿಖೆ ಸೂಚಿಸುತ್ತದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಪ್ರತಿದಿನ ಬೆಳಿಗ್ಗೆ 5:30ಕ್ಕೆ ಜೈಲು ಅಧಿಕಾರಿಗಳು ಖೈದಿಗಳನ್ನು ಎಣಿಕೆ ಮಾಡುತ್ತಾರೆ. ಶುಕ್ರವಾರ ಬೆಳಿಗ್ಗೆ ಎಣಿಕೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದ ಅಧಿಕಾರಿಗಳು ಎಲ್ಲವೂ ಸರಿಯಾಗಿದೆ ಎಂದಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ಜೈಲಿನ ಗೋಡೆಯ ಮೇಲೆ ಬಟ್ಟೆ ನೇತಾಡುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಖೈದಿಗಳ ಮರು ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಗೋವಿಂದಚಾಮಿ ತಪ್ಪಿಸಿಕೊಂಡಿರುವುದು ಅವರಿಗೆ ಗೊತ್ತಾಗಿದೆ.

ಗೋವಿಂದಚಾಮಿ ಜೈಲಿನ ಕೋಣೆಯ ಸರಳುಗಳನ್ನು ಕತ್ತರಿಸಿ, ಬೆಡ್‌ಶೀಟ್‌ ಅನ್ನು ಹಗ್ಗದಂತೆ ಬಳಸಿ ಜೈಲಿನ ಗೋಡೆಗಳನ್ನು ಹತ್ತಿ ತಪ್ಪಿಸಿಕೊಂಡಿದ್ದ. ಜೈಲಿನ ಗೋಡೆಗೆ ವಿದ್ಯುತ್ ಬೇಲಿ ಹಾಕಲಾಗಿದ್ದರೂ, ಗೋವಿಂದಚಾಮಿ ತಪ್ಪಿಸಿಕೊಳ್ಳುವ ಸಮಯದಲ್ಲಿ ಅದು ಕಾರ್ಯನಿರ್ವಹಿಸುತ್ತಿರಲಿಲ್ಲ. ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆತ ತಪ್ಪಿಸಿಕೊಂಡಿರುವುದು ಖಚಿತವಾಗಿದೆ.

ಗೋವಿಂದಚಾಮಿ ತಪ್ಪಿಸಿಕೊಳ್ಳಲು ಬಹಳ ಎಚ್ಚರಿಕೆಯಿಂದ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಆತ ತೂಕ ಇಳಿಸಿಕೊಳ್ಳಲು ಅನ್ನ ತಿನ್ನುವುದನ್ನು ಕಡಿಮೆ ಮಾಡಿ ರೊಟ್ಟಿ ಮಾತ್ರ ತಿನ್ನುತ್ತಿದ್ದ. ಇದರಿಂದಾಗಿ ಆತ ಕಂಬಿಗಳನ್ನು ಕತ್ತರಿಸಿ ಅವುಗಳ ಮಧ್ಯೆ ತಪ್ಪಿಸಿಕೊಳ್ಳಲು ಸುಲಭವಾಗಿದೆ ಎಂದಿದ್ದಾರೆ.

ಫೆಬ್ರವರಿ 2011ರಲ್ಲಿ, 23 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದಲ್ಲಿ ಗೋವಿಂದಚಾಮಿ ಶಿಕ್ಷೆಗೊಳಗಾಗಿದ್ದ. ಕೊಲೆಯಾದ ಮಹಿಳೆ ಫೆಬ್ರವರಿ 1, 2011ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಗೋವಿಂದಚಾಮಿ ಅತ್ಯಾಚಾರವೆಸಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಫೆಬ್ರವರಿ 6 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದರು.

ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...