Homeಮುಖಪುಟಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ.

ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

23 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗೋವಿಂದಚಾಮಿ, ಶುಕ್ರವಾರ ಮುಂಜಾನೆ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ. ಪೊಲೀಸರ ಅಂದಾಜಿನ ಪ್ರಕಾರ, ಮುಂಜಾನೆ ಸುಮಾರು 4.15 ರಿಂದ 6.30ರ ನಡುವೆ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಣ್ಣೂರು ನಗರ ಪೊಲೀಸ್ ಆಯುಕ್ತ ನಿಧಿನ್ ರಾಜ್, ಬೆಳಿಗ್ಗೆ 6.30ರ ಸುಮಾರಿಗೆ ಗೋವಿಂದಚಾಮಿ ಜೈಲಿನಿಂದ ತಪ್ಪಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಂತರ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕಣ್ಣೂರಿನ ಮೇಲೆ ವಿಶೇಷ ಗಮನ ಹರಿಸಲಾಯಿತು. ನೆರೆಯ ರಾಜ್ಯಗಳಿಗೂ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ.

ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸುಮಾರು ಐದು ಗಂಟೆಗಳ ನಂತರ, ಬೆಳಿಗ್ಗೆ 10.15ರ ಸುಮಾರಿಗೆ ಜೈಲಿನಿಂದ ಮೂರು ಕಿಲೋಮೀಟರ್ ದೂರದ ತಲಾಪ್‌ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅವಿತುಕೊಂಡಿರುವುದು ಗೊತ್ತಾಯಿತು. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಸೆರೆ ಹಿಡಿದರು ಎಂದು ತಿಳಿಸಿದ್ದಾರೆ.

ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಜೈಲು ಅಧಿಕಾರಿಗಳ ಲೋಪ ಕಂಡುಬಂದಿವೆ ಎಂದು ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕ ಬಲರಾಮ್ ಕುಮಾರ್ ಉಪಾಧ್ಯಾಯ ಹೇಳಿದ್ದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಡಿಐಜಿ ವಿವರವಾದ ತನಿಖೆ ನಡೆಸಲಿದ್ದಾರೆ. ಅವರ ಪ್ರಾಥಮಿಕ ತನಿಖೆಯಲ್ಲಿ ಹಲವಾರು ಲೋಪಗಳು ಬೆಳಕಿಗೆ ಬಂದಿವೆ. ಗೋವಿಂದಚಾಮಿ ನಿಖರವಾದ ಯೋಜನೆ ರೂಪಿಸಿ ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂಬುವುದು ಆಂತರಿಕ ತನಿಖೆ ಸೂಚಿಸುತ್ತದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಪ್ರತಿದಿನ ಬೆಳಿಗ್ಗೆ 5:30ಕ್ಕೆ ಜೈಲು ಅಧಿಕಾರಿಗಳು ಖೈದಿಗಳನ್ನು ಎಣಿಕೆ ಮಾಡುತ್ತಾರೆ. ಶುಕ್ರವಾರ ಬೆಳಿಗ್ಗೆ ಎಣಿಕೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದ ಅಧಿಕಾರಿಗಳು ಎಲ್ಲವೂ ಸರಿಯಾಗಿದೆ ಎಂದಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ಜೈಲಿನ ಗೋಡೆಯ ಮೇಲೆ ಬಟ್ಟೆ ನೇತಾಡುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಖೈದಿಗಳ ಮರು ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಗೋವಿಂದಚಾಮಿ ತಪ್ಪಿಸಿಕೊಂಡಿರುವುದು ಅವರಿಗೆ ಗೊತ್ತಾಗಿದೆ.

ಗೋವಿಂದಚಾಮಿ ಜೈಲಿನ ಕೋಣೆಯ ಸರಳುಗಳನ್ನು ಕತ್ತರಿಸಿ, ಬೆಡ್‌ಶೀಟ್‌ ಅನ್ನು ಹಗ್ಗದಂತೆ ಬಳಸಿ ಜೈಲಿನ ಗೋಡೆಗಳನ್ನು ಹತ್ತಿ ತಪ್ಪಿಸಿಕೊಂಡಿದ್ದ. ಜೈಲಿನ ಗೋಡೆಗೆ ವಿದ್ಯುತ್ ಬೇಲಿ ಹಾಕಲಾಗಿದ್ದರೂ, ಗೋವಿಂದಚಾಮಿ ತಪ್ಪಿಸಿಕೊಳ್ಳುವ ಸಮಯದಲ್ಲಿ ಅದು ಕಾರ್ಯನಿರ್ವಹಿಸುತ್ತಿರಲಿಲ್ಲ. ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆತ ತಪ್ಪಿಸಿಕೊಂಡಿರುವುದು ಖಚಿತವಾಗಿದೆ.

ಗೋವಿಂದಚಾಮಿ ತಪ್ಪಿಸಿಕೊಳ್ಳಲು ಬಹಳ ಎಚ್ಚರಿಕೆಯಿಂದ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಆತ ತೂಕ ಇಳಿಸಿಕೊಳ್ಳಲು ಅನ್ನ ತಿನ್ನುವುದನ್ನು ಕಡಿಮೆ ಮಾಡಿ ರೊಟ್ಟಿ ಮಾತ್ರ ತಿನ್ನುತ್ತಿದ್ದ. ಇದರಿಂದಾಗಿ ಆತ ಕಂಬಿಗಳನ್ನು ಕತ್ತರಿಸಿ ಅವುಗಳ ಮಧ್ಯೆ ತಪ್ಪಿಸಿಕೊಳ್ಳಲು ಸುಲಭವಾಗಿದೆ ಎಂದಿದ್ದಾರೆ.

ಫೆಬ್ರವರಿ 2011ರಲ್ಲಿ, 23 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದಲ್ಲಿ ಗೋವಿಂದಚಾಮಿ ಶಿಕ್ಷೆಗೊಳಗಾಗಿದ್ದ. ಕೊಲೆಯಾದ ಮಹಿಳೆ ಫೆಬ್ರವರಿ 1, 2011ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಗೋವಿಂದಚಾಮಿ ಅತ್ಯಾಚಾರವೆಸಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಫೆಬ್ರವರಿ 6 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದರು.

ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...