Homeಮುಖಪುಟಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ.

ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

23 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗೋವಿಂದಚಾಮಿ, ಶುಕ್ರವಾರ ಮುಂಜಾನೆ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ. ಪೊಲೀಸರ ಅಂದಾಜಿನ ಪ್ರಕಾರ, ಮುಂಜಾನೆ ಸುಮಾರು 4.15 ರಿಂದ 6.30ರ ನಡುವೆ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಣ್ಣೂರು ನಗರ ಪೊಲೀಸ್ ಆಯುಕ್ತ ನಿಧಿನ್ ರಾಜ್, ಬೆಳಿಗ್ಗೆ 6.30ರ ಸುಮಾರಿಗೆ ಗೋವಿಂದಚಾಮಿ ಜೈಲಿನಿಂದ ತಪ್ಪಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಂತರ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕಣ್ಣೂರಿನ ಮೇಲೆ ವಿಶೇಷ ಗಮನ ಹರಿಸಲಾಯಿತು. ನೆರೆಯ ರಾಜ್ಯಗಳಿಗೂ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ.

ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸುಮಾರು ಐದು ಗಂಟೆಗಳ ನಂತರ, ಬೆಳಿಗ್ಗೆ 10.15ರ ಸುಮಾರಿಗೆ ಜೈಲಿನಿಂದ ಮೂರು ಕಿಲೋಮೀಟರ್ ದೂರದ ತಲಾಪ್‌ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅವಿತುಕೊಂಡಿರುವುದು ಗೊತ್ತಾಯಿತು. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಸೆರೆ ಹಿಡಿದರು ಎಂದು ತಿಳಿಸಿದ್ದಾರೆ.

ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಜೈಲು ಅಧಿಕಾರಿಗಳ ಲೋಪ ಕಂಡುಬಂದಿವೆ ಎಂದು ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕ ಬಲರಾಮ್ ಕುಮಾರ್ ಉಪಾಧ್ಯಾಯ ಹೇಳಿದ್ದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಡಿಐಜಿ ವಿವರವಾದ ತನಿಖೆ ನಡೆಸಲಿದ್ದಾರೆ. ಅವರ ಪ್ರಾಥಮಿಕ ತನಿಖೆಯಲ್ಲಿ ಹಲವಾರು ಲೋಪಗಳು ಬೆಳಕಿಗೆ ಬಂದಿವೆ. ಗೋವಿಂದಚಾಮಿ ನಿಖರವಾದ ಯೋಜನೆ ರೂಪಿಸಿ ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂಬುವುದು ಆಂತರಿಕ ತನಿಖೆ ಸೂಚಿಸುತ್ತದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಪ್ರತಿದಿನ ಬೆಳಿಗ್ಗೆ 5:30ಕ್ಕೆ ಜೈಲು ಅಧಿಕಾರಿಗಳು ಖೈದಿಗಳನ್ನು ಎಣಿಕೆ ಮಾಡುತ್ತಾರೆ. ಶುಕ್ರವಾರ ಬೆಳಿಗ್ಗೆ ಎಣಿಕೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದ ಅಧಿಕಾರಿಗಳು ಎಲ್ಲವೂ ಸರಿಯಾಗಿದೆ ಎಂದಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ಜೈಲಿನ ಗೋಡೆಯ ಮೇಲೆ ಬಟ್ಟೆ ನೇತಾಡುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಖೈದಿಗಳ ಮರು ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಗೋವಿಂದಚಾಮಿ ತಪ್ಪಿಸಿಕೊಂಡಿರುವುದು ಅವರಿಗೆ ಗೊತ್ತಾಗಿದೆ.

ಗೋವಿಂದಚಾಮಿ ಜೈಲಿನ ಕೋಣೆಯ ಸರಳುಗಳನ್ನು ಕತ್ತರಿಸಿ, ಬೆಡ್‌ಶೀಟ್‌ ಅನ್ನು ಹಗ್ಗದಂತೆ ಬಳಸಿ ಜೈಲಿನ ಗೋಡೆಗಳನ್ನು ಹತ್ತಿ ತಪ್ಪಿಸಿಕೊಂಡಿದ್ದ. ಜೈಲಿನ ಗೋಡೆಗೆ ವಿದ್ಯುತ್ ಬೇಲಿ ಹಾಕಲಾಗಿದ್ದರೂ, ಗೋವಿಂದಚಾಮಿ ತಪ್ಪಿಸಿಕೊಳ್ಳುವ ಸಮಯದಲ್ಲಿ ಅದು ಕಾರ್ಯನಿರ್ವಹಿಸುತ್ತಿರಲಿಲ್ಲ. ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆತ ತಪ್ಪಿಸಿಕೊಂಡಿರುವುದು ಖಚಿತವಾಗಿದೆ.

ಗೋವಿಂದಚಾಮಿ ತಪ್ಪಿಸಿಕೊಳ್ಳಲು ಬಹಳ ಎಚ್ಚರಿಕೆಯಿಂದ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಆತ ತೂಕ ಇಳಿಸಿಕೊಳ್ಳಲು ಅನ್ನ ತಿನ್ನುವುದನ್ನು ಕಡಿಮೆ ಮಾಡಿ ರೊಟ್ಟಿ ಮಾತ್ರ ತಿನ್ನುತ್ತಿದ್ದ. ಇದರಿಂದಾಗಿ ಆತ ಕಂಬಿಗಳನ್ನು ಕತ್ತರಿಸಿ ಅವುಗಳ ಮಧ್ಯೆ ತಪ್ಪಿಸಿಕೊಳ್ಳಲು ಸುಲಭವಾಗಿದೆ ಎಂದಿದ್ದಾರೆ.

ಫೆಬ್ರವರಿ 2011ರಲ್ಲಿ, 23 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದಲ್ಲಿ ಗೋವಿಂದಚಾಮಿ ಶಿಕ್ಷೆಗೊಳಗಾಗಿದ್ದ. ಕೊಲೆಯಾದ ಮಹಿಳೆ ಫೆಬ್ರವರಿ 1, 2011ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಗೋವಿಂದಚಾಮಿ ಅತ್ಯಾಚಾರವೆಸಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಫೆಬ್ರವರಿ 6 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದರು.

ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...