Homeಮುಖಪುಟಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

- Advertisement -
- Advertisement -

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ.

ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.

23 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಗೋವಿಂದಚಾಮಿ, ಶುಕ್ರವಾರ ಮುಂಜಾನೆ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ. ಪೊಲೀಸರ ಅಂದಾಜಿನ ಪ್ರಕಾರ, ಮುಂಜಾನೆ ಸುಮಾರು 4.15 ರಿಂದ 6.30ರ ನಡುವೆ ಆತ ಜೈಲಿನಿಂದ ತಪ್ಪಿಸಿಕೊಂಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಕಣ್ಣೂರು ನಗರ ಪೊಲೀಸ್ ಆಯುಕ್ತ ನಿಧಿನ್ ರಾಜ್, ಬೆಳಿಗ್ಗೆ 6.30ರ ಸುಮಾರಿಗೆ ಗೋವಿಂದಚಾಮಿ ಜೈಲಿನಿಂದ ತಪ್ಪಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಂತರ ರಾಜ್ಯಾದ್ಯಂತ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು. ಕಣ್ಣೂರಿನ ಮೇಲೆ ವಿಶೇಷ ಗಮನ ಹರಿಸಲಾಯಿತು. ನೆರೆಯ ರಾಜ್ಯಗಳಿಗೂ ಮಾಹಿತಿ ನೀಡಲಾಗಿತ್ತು ಎಂದಿದ್ದಾರೆ.

ರೈಲ್ವೆ ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸುಮಾರು ಐದು ಗಂಟೆಗಳ ನಂತರ, ಬೆಳಿಗ್ಗೆ 10.15ರ ಸುಮಾರಿಗೆ ಜೈಲಿನಿಂದ ಮೂರು ಕಿಲೋಮೀಟರ್ ದೂರದ ತಲಾಪ್‌ನಲ್ಲಿರುವ ಪಾಳುಬಿದ್ದ ಮನೆಯ ಬಾವಿಯಲ್ಲಿ ಗೋವಿಂದಚಾಮಿ ಅವಿತುಕೊಂಡಿರುವುದು ಗೊತ್ತಾಯಿತು. ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ತೆರಳಿದ ಪೊಲೀಸರು ಆತನನ್ನು ಸೆರೆ ಹಿಡಿದರು ಎಂದು ತಿಳಿಸಿದ್ದಾರೆ.

ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಜೈಲು ಅಧಿಕಾರಿಗಳ ಲೋಪ ಕಂಡುಬಂದಿವೆ ಎಂದು ಕಾರಾಗೃಹ ಮತ್ತು ತಿದ್ದುಪಡಿ ಸೇವೆಗಳ ಮಹಾನಿರ್ದೇಶಕ ಬಲರಾಮ್ ಕುಮಾರ್ ಉಪಾಧ್ಯಾಯ ಹೇಳಿದ್ದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಡಿಐಜಿ ವಿವರವಾದ ತನಿಖೆ ನಡೆಸಲಿದ್ದಾರೆ. ಅವರ ಪ್ರಾಥಮಿಕ ತನಿಖೆಯಲ್ಲಿ ಹಲವಾರು ಲೋಪಗಳು ಬೆಳಕಿಗೆ ಬಂದಿವೆ. ಗೋವಿಂದಚಾಮಿ ನಿಖರವಾದ ಯೋಜನೆ ರೂಪಿಸಿ ಜೈಲಿನಿಂದ ತಪ್ಪಿಸಿಕೊಂಡಿದ್ದಾನೆ ಎಂಬುವುದು ಆಂತರಿಕ ತನಿಖೆ ಸೂಚಿಸುತ್ತದೆ ಎಂದಿದ್ದಾರೆ.

ವರದಿಗಳ ಪ್ರಕಾರ, ಪ್ರತಿದಿನ ಬೆಳಿಗ್ಗೆ 5:30ಕ್ಕೆ ಜೈಲು ಅಧಿಕಾರಿಗಳು ಖೈದಿಗಳನ್ನು ಎಣಿಕೆ ಮಾಡುತ್ತಾರೆ. ಶುಕ್ರವಾರ ಬೆಳಿಗ್ಗೆ ಎಣಿಕೆ ಮಾಡಿ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದ ಅಧಿಕಾರಿಗಳು ಎಲ್ಲವೂ ಸರಿಯಾಗಿದೆ ಎಂದಿದ್ದರು. ಆದರೆ, ಸ್ವಲ್ಪ ಹೊತ್ತಿನ ಬಳಿಕ ಜೈಲಿನ ಗೋಡೆಯ ಮೇಲೆ ಬಟ್ಟೆ ನೇತಾಡುತ್ತಿರುವುದನ್ನು ಗಮನಿಸಿದ ಅಧಿಕಾರಿಗಳು, ಖೈದಿಗಳ ಮರು ಪರಿಶೀಲನೆ ನಡೆಸಿದ್ದಾರೆ. ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಗೋವಿಂದಚಾಮಿ ತಪ್ಪಿಸಿಕೊಂಡಿರುವುದು ಅವರಿಗೆ ಗೊತ್ತಾಗಿದೆ.

ಗೋವಿಂದಚಾಮಿ ಜೈಲಿನ ಕೋಣೆಯ ಸರಳುಗಳನ್ನು ಕತ್ತರಿಸಿ, ಬೆಡ್‌ಶೀಟ್‌ ಅನ್ನು ಹಗ್ಗದಂತೆ ಬಳಸಿ ಜೈಲಿನ ಗೋಡೆಗಳನ್ನು ಹತ್ತಿ ತಪ್ಪಿಸಿಕೊಂಡಿದ್ದ. ಜೈಲಿನ ಗೋಡೆಗೆ ವಿದ್ಯುತ್ ಬೇಲಿ ಹಾಕಲಾಗಿದ್ದರೂ, ಗೋವಿಂದಚಾಮಿ ತಪ್ಪಿಸಿಕೊಳ್ಳುವ ಸಮಯದಲ್ಲಿ ಅದು ಕಾರ್ಯನಿರ್ವಹಿಸುತ್ತಿರಲಿಲ್ಲ. ಸಿಸಿಟಿವಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿದಾಗ, ಆತ ತಪ್ಪಿಸಿಕೊಂಡಿರುವುದು ಖಚಿತವಾಗಿದೆ.

ಗೋವಿಂದಚಾಮಿ ತಪ್ಪಿಸಿಕೊಳ್ಳಲು ಬಹಳ ಎಚ್ಚರಿಕೆಯಿಂದ ಯೋಜನೆ ರೂಪಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಆತ ತೂಕ ಇಳಿಸಿಕೊಳ್ಳಲು ಅನ್ನ ತಿನ್ನುವುದನ್ನು ಕಡಿಮೆ ಮಾಡಿ ರೊಟ್ಟಿ ಮಾತ್ರ ತಿನ್ನುತ್ತಿದ್ದ. ಇದರಿಂದಾಗಿ ಆತ ಕಂಬಿಗಳನ್ನು ಕತ್ತರಿಸಿ ಅವುಗಳ ಮಧ್ಯೆ ತಪ್ಪಿಸಿಕೊಳ್ಳಲು ಸುಲಭವಾಗಿದೆ ಎಂದಿದ್ದಾರೆ.

ಫೆಬ್ರವರಿ 2011ರಲ್ಲಿ, 23 ವರ್ಷದ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪ್ರಕರಣದಲ್ಲಿ ಗೋವಿಂದಚಾಮಿ ಶಿಕ್ಷೆಗೊಳಗಾಗಿದ್ದ. ಕೊಲೆಯಾದ ಮಹಿಳೆ ಫೆಬ್ರವರಿ 1, 2011ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಗೋವಿಂದಚಾಮಿ ಅತ್ಯಾಚಾರವೆಸಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಯುವತಿ ಫೆಬ್ರವರಿ 6 ರಂದು ತ್ರಿಶೂರ್ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದರು.

ಬಾಲಕಿ ಮೇಲೆ ಮೂವರಿಂದ ಅತ್ಯಾಚಾರ; ಗರ್ಭಿಣಿ ಎಂದು ತಿಳಿದ ಬಳಿಕ ಜೀವಂತ ಹೂಳಲು ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...