HomeUncategorizedಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

- Advertisement -
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು ಒರೆಸಿಕೊಳ್ಳುತ್ತಲೇ ಅವರು ನ್ಯಾಯಾಲಯದಿಂದ ಹೊರನಡೆದರು. ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಿರುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ನಾಳೆ ಪ್ರಕಟಿಸಲಿದೆ. ಕಾನೂನು ತಜ್ಞರ ಪ್ರಕಾರ, ಈ ಪ್ರಕರಣದಲ್ಲಿ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಕೆ.ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವಿಷಯ ಬಹಿರಂಗವಾಗಬಹುದೆಂದು ಭಯಗೊಂಡು, ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಮತ್ತು ಇತರ ಒಂಬತ್ತು ಜನರು ಸೇರಿ ಆ ಮಹಿಳೆಯನ್ನು ಅಪಹರಿಸಿದ್ದರು. ಆಕೆಯನ್ನು ಹುಣಸೂರು ಬಳಿ ಇರುವ ತೋಟದ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಈ ಅಪಹರಣ ಪ್ರಕರಣದಿಂದಲೇ ಎಚ್.ಡಿ ರೇವಣ್ಣ ಸೇರಿದಂತೆ ಎಂಟು ಜನರು ಜೈಲು ಸೇರಿದ್ದರು. ಭವಾನಿ ರೇವಣ್ಣ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಂತರ ನಿರೀಕ್ಷಣಾ ಜಾಮೀನು ಪಡೆದರು.

ವಿಶೇಷ ತನಿಖಾ ದಳ (SIT) ಸಂತ್ರಸ್ತೆಯನ್ನು ರಕ್ಷಿಸಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಿತು. ತನಿಖೆ ಮುಗಿದ ನಂತರ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಪ್ರಜ್ವಲ್ ರೇವಣ್ಣನವರ ಮೊಬೈಲ್‌ನಲ್ಲಿ ಆ ಮಹಿಳೆಯನ್ನು ಬಲವಂತವಾಗಿ ಬೆತ್ತಲುಗೊಳಿಸಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಪತ್ತೆಯಾಯಿತು. ಈ ವಿಡಿಯೋ ಪ್ರಮುಖ ಸಾಕ್ಷಿಯಾಯಿತು. ವಿಧಿವಿಜ್ಞಾನ ಪರೀಕ್ಷೆಯಿಂದ ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಅವರೇ ಎಂದು ದೃಢಪಟ್ಟಿತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೇ ಎಂದು ಹೇಳಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಾಸನ ಕ್ಷೇತ್ರಾದ್ಯಂತ ಹಂಚಲಾಗಿತ್ತು. ಈ ಘಟನೆಯ ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೇ 31, 2024ರಂದು ಪ್ರಜ್ವಲ್ ರೇವಣ್ಣನವರನ್ನು ಪೊಲೀಸರು ಬಂಧಿಸಿದರು.

ಅಂದಿನಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ತೀರ್ಪು ಪ್ರಕಟಿಸಲು ವಿಳಂಬವೇಕೆ?

ವಾಸ್ತವವಾಗಿ, ಈ ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಲಯಕ್ಕೆ ಕೆಲವು ಸ್ಪಷ್ಟೀಕರಣಗಳು ಅಗತ್ಯವಿದ್ದ ಕಾರಣ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಾಲಯವು ಪ್ರಮುಖವಾಗಿ ಎರಡು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು.

  1. ಗೂಗಲ್ ಮ್ಯಾಪ್ ಸಾಕ್ಷ್ಯ: ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಸಾಕ್ಷ್ಯವಾಗಿ ಮಂಡಿಸಿದ್ದರು. ಗೂಗಲ್ ಕಂಪನಿಯ ದೃಢೀಕರಣವಿಲ್ಲದೆ ಸಲ್ಲಿಸಲಾದ ಈ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ವಿಶೇಷ ತನಿಖಾ ತಂಡ (SIT)ವು, ಅತ್ಯಾಚಾರ ನಡೆದ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು ಮಹಜರ್ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ವಿವರಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್‌ನಲ್ಲಿ ಸ್ಥಳ ಮತ್ತು ಹಳೆಯ ಫೋಟೋಗಳು ಲಭ್ಯವಾಗುತ್ತವೆ. ಆದ್ದರಿಂದ ಇದನ್ನು ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿತು.
  2. ಮೊಬೈಲ್ ಫೋನ್ ಸಾಕ್ಷ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಸ್ಯಾಮ್‌ಸಂಗ್ ಜೆ 4 ಮೊಬೈಲ್ ಫೋನ್ ಬಗ್ಗೆಯೂ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು. ಇದಕ್ಕೆ ಪ್ರಜ್ವಲ್ ಪರ ವಕೀಲರು, ಆ ಮೊಬೈಲ್ ಅನ್ನು ತನಿಖಾಧಿಕಾರಿಗಳು ಬೇರೊಂದು ಪ್ರಕರಣದಿಂದ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರು ಅದನ್ನು ವಶಪಡಿಸಿಕೊಂಡಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ವಾದಿಸಿದ್ದರು.

ಈ ಎಲ್ಲಾ ಸ್ಪಷ್ಟೀಕರಣಗಳ ನಂತರ, ನ್ಯಾಯಾಲಯವು ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ:  ಖರ್ಗೆ, ಪ್ರಿಯಾಂಕಾ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ 9ನೇ ದಿನವೂ ಪ್ರತಿಭಟನೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...