HomeUncategorizedಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

- Advertisement -
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು ಒರೆಸಿಕೊಳ್ಳುತ್ತಲೇ ಅವರು ನ್ಯಾಯಾಲಯದಿಂದ ಹೊರನಡೆದರು. ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಿರುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ನಾಳೆ ಪ್ರಕಟಿಸಲಿದೆ. ಕಾನೂನು ತಜ್ಞರ ಪ್ರಕಾರ, ಈ ಪ್ರಕರಣದಲ್ಲಿ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಕೆ.ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವಿಷಯ ಬಹಿರಂಗವಾಗಬಹುದೆಂದು ಭಯಗೊಂಡು, ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಮತ್ತು ಇತರ ಒಂಬತ್ತು ಜನರು ಸೇರಿ ಆ ಮಹಿಳೆಯನ್ನು ಅಪಹರಿಸಿದ್ದರು. ಆಕೆಯನ್ನು ಹುಣಸೂರು ಬಳಿ ಇರುವ ತೋಟದ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಈ ಅಪಹರಣ ಪ್ರಕರಣದಿಂದಲೇ ಎಚ್.ಡಿ ರೇವಣ್ಣ ಸೇರಿದಂತೆ ಎಂಟು ಜನರು ಜೈಲು ಸೇರಿದ್ದರು. ಭವಾನಿ ರೇವಣ್ಣ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಂತರ ನಿರೀಕ್ಷಣಾ ಜಾಮೀನು ಪಡೆದರು.

ವಿಶೇಷ ತನಿಖಾ ದಳ (SIT) ಸಂತ್ರಸ್ತೆಯನ್ನು ರಕ್ಷಿಸಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಿತು. ತನಿಖೆ ಮುಗಿದ ನಂತರ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಪ್ರಜ್ವಲ್ ರೇವಣ್ಣನವರ ಮೊಬೈಲ್‌ನಲ್ಲಿ ಆ ಮಹಿಳೆಯನ್ನು ಬಲವಂತವಾಗಿ ಬೆತ್ತಲುಗೊಳಿಸಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಪತ್ತೆಯಾಯಿತು. ಈ ವಿಡಿಯೋ ಪ್ರಮುಖ ಸಾಕ್ಷಿಯಾಯಿತು. ವಿಧಿವಿಜ್ಞಾನ ಪರೀಕ್ಷೆಯಿಂದ ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಅವರೇ ಎಂದು ದೃಢಪಟ್ಟಿತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೇ ಎಂದು ಹೇಳಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಾಸನ ಕ್ಷೇತ್ರಾದ್ಯಂತ ಹಂಚಲಾಗಿತ್ತು. ಈ ಘಟನೆಯ ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೇ 31, 2024ರಂದು ಪ್ರಜ್ವಲ್ ರೇವಣ್ಣನವರನ್ನು ಪೊಲೀಸರು ಬಂಧಿಸಿದರು.

ಅಂದಿನಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ತೀರ್ಪು ಪ್ರಕಟಿಸಲು ವಿಳಂಬವೇಕೆ?

ವಾಸ್ತವವಾಗಿ, ಈ ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಲಯಕ್ಕೆ ಕೆಲವು ಸ್ಪಷ್ಟೀಕರಣಗಳು ಅಗತ್ಯವಿದ್ದ ಕಾರಣ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಾಲಯವು ಪ್ರಮುಖವಾಗಿ ಎರಡು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು.

  1. ಗೂಗಲ್ ಮ್ಯಾಪ್ ಸಾಕ್ಷ್ಯ: ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಸಾಕ್ಷ್ಯವಾಗಿ ಮಂಡಿಸಿದ್ದರು. ಗೂಗಲ್ ಕಂಪನಿಯ ದೃಢೀಕರಣವಿಲ್ಲದೆ ಸಲ್ಲಿಸಲಾದ ಈ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ವಿಶೇಷ ತನಿಖಾ ತಂಡ (SIT)ವು, ಅತ್ಯಾಚಾರ ನಡೆದ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು ಮಹಜರ್ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ವಿವರಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್‌ನಲ್ಲಿ ಸ್ಥಳ ಮತ್ತು ಹಳೆಯ ಫೋಟೋಗಳು ಲಭ್ಯವಾಗುತ್ತವೆ. ಆದ್ದರಿಂದ ಇದನ್ನು ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿತು.
  2. ಮೊಬೈಲ್ ಫೋನ್ ಸಾಕ್ಷ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಸ್ಯಾಮ್‌ಸಂಗ್ ಜೆ 4 ಮೊಬೈಲ್ ಫೋನ್ ಬಗ್ಗೆಯೂ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು. ಇದಕ್ಕೆ ಪ್ರಜ್ವಲ್ ಪರ ವಕೀಲರು, ಆ ಮೊಬೈಲ್ ಅನ್ನು ತನಿಖಾಧಿಕಾರಿಗಳು ಬೇರೊಂದು ಪ್ರಕರಣದಿಂದ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರು ಅದನ್ನು ವಶಪಡಿಸಿಕೊಂಡಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ವಾದಿಸಿದ್ದರು.

ಈ ಎಲ್ಲಾ ಸ್ಪಷ್ಟೀಕರಣಗಳ ನಂತರ, ನ್ಯಾಯಾಲಯವು ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ:  ಖರ್ಗೆ, ಪ್ರಿಯಾಂಕಾ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ 9ನೇ ದಿನವೂ ಪ್ರತಿಭಟನೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...