HomeUncategorizedಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

- Advertisement -
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು ಒರೆಸಿಕೊಳ್ಳುತ್ತಲೇ ಅವರು ನ್ಯಾಯಾಲಯದಿಂದ ಹೊರನಡೆದರು. ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಿರುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ನಾಳೆ ಪ್ರಕಟಿಸಲಿದೆ. ಕಾನೂನು ತಜ್ಞರ ಪ್ರಕಾರ, ಈ ಪ್ರಕರಣದಲ್ಲಿ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಕೆ.ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವಿಷಯ ಬಹಿರಂಗವಾಗಬಹುದೆಂದು ಭಯಗೊಂಡು, ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಮತ್ತು ಇತರ ಒಂಬತ್ತು ಜನರು ಸೇರಿ ಆ ಮಹಿಳೆಯನ್ನು ಅಪಹರಿಸಿದ್ದರು. ಆಕೆಯನ್ನು ಹುಣಸೂರು ಬಳಿ ಇರುವ ತೋಟದ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಈ ಅಪಹರಣ ಪ್ರಕರಣದಿಂದಲೇ ಎಚ್.ಡಿ ರೇವಣ್ಣ ಸೇರಿದಂತೆ ಎಂಟು ಜನರು ಜೈಲು ಸೇರಿದ್ದರು. ಭವಾನಿ ರೇವಣ್ಣ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಂತರ ನಿರೀಕ್ಷಣಾ ಜಾಮೀನು ಪಡೆದರು.

ವಿಶೇಷ ತನಿಖಾ ದಳ (SIT) ಸಂತ್ರಸ್ತೆಯನ್ನು ರಕ್ಷಿಸಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಿತು. ತನಿಖೆ ಮುಗಿದ ನಂತರ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಪ್ರಜ್ವಲ್ ರೇವಣ್ಣನವರ ಮೊಬೈಲ್‌ನಲ್ಲಿ ಆ ಮಹಿಳೆಯನ್ನು ಬಲವಂತವಾಗಿ ಬೆತ್ತಲುಗೊಳಿಸಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಪತ್ತೆಯಾಯಿತು. ಈ ವಿಡಿಯೋ ಪ್ರಮುಖ ಸಾಕ್ಷಿಯಾಯಿತು. ವಿಧಿವಿಜ್ಞಾನ ಪರೀಕ್ಷೆಯಿಂದ ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಅವರೇ ಎಂದು ದೃಢಪಟ್ಟಿತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೇ ಎಂದು ಹೇಳಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಾಸನ ಕ್ಷೇತ್ರಾದ್ಯಂತ ಹಂಚಲಾಗಿತ್ತು. ಈ ಘಟನೆಯ ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೇ 31, 2024ರಂದು ಪ್ರಜ್ವಲ್ ರೇವಣ್ಣನವರನ್ನು ಪೊಲೀಸರು ಬಂಧಿಸಿದರು.

ಅಂದಿನಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ತೀರ್ಪು ಪ್ರಕಟಿಸಲು ವಿಳಂಬವೇಕೆ?

ವಾಸ್ತವವಾಗಿ, ಈ ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಲಯಕ್ಕೆ ಕೆಲವು ಸ್ಪಷ್ಟೀಕರಣಗಳು ಅಗತ್ಯವಿದ್ದ ಕಾರಣ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಾಲಯವು ಪ್ರಮುಖವಾಗಿ ಎರಡು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು.

  1. ಗೂಗಲ್ ಮ್ಯಾಪ್ ಸಾಕ್ಷ್ಯ: ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಸಾಕ್ಷ್ಯವಾಗಿ ಮಂಡಿಸಿದ್ದರು. ಗೂಗಲ್ ಕಂಪನಿಯ ದೃಢೀಕರಣವಿಲ್ಲದೆ ಸಲ್ಲಿಸಲಾದ ಈ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ವಿಶೇಷ ತನಿಖಾ ತಂಡ (SIT)ವು, ಅತ್ಯಾಚಾರ ನಡೆದ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು ಮಹಜರ್ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ವಿವರಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್‌ನಲ್ಲಿ ಸ್ಥಳ ಮತ್ತು ಹಳೆಯ ಫೋಟೋಗಳು ಲಭ್ಯವಾಗುತ್ತವೆ. ಆದ್ದರಿಂದ ಇದನ್ನು ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿತು.
  2. ಮೊಬೈಲ್ ಫೋನ್ ಸಾಕ್ಷ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಸ್ಯಾಮ್‌ಸಂಗ್ ಜೆ 4 ಮೊಬೈಲ್ ಫೋನ್ ಬಗ್ಗೆಯೂ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು. ಇದಕ್ಕೆ ಪ್ರಜ್ವಲ್ ಪರ ವಕೀಲರು, ಆ ಮೊಬೈಲ್ ಅನ್ನು ತನಿಖಾಧಿಕಾರಿಗಳು ಬೇರೊಂದು ಪ್ರಕರಣದಿಂದ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರು ಅದನ್ನು ವಶಪಡಿಸಿಕೊಂಡಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ವಾದಿಸಿದ್ದರು.

ಈ ಎಲ್ಲಾ ಸ್ಪಷ್ಟೀಕರಣಗಳ ನಂತರ, ನ್ಯಾಯಾಲಯವು ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ:  ಖರ್ಗೆ, ಪ್ರಿಯಾಂಕಾ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ 9ನೇ ದಿನವೂ ಪ್ರತಿಭಟನೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...