HomeUncategorizedಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

- Advertisement -
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು ಒರೆಸಿಕೊಳ್ಳುತ್ತಲೇ ಅವರು ನ್ಯಾಯಾಲಯದಿಂದ ಹೊರನಡೆದರು. ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಿರುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ನಾಳೆ ಪ್ರಕಟಿಸಲಿದೆ. ಕಾನೂನು ತಜ್ಞರ ಪ್ರಕಾರ, ಈ ಪ್ರಕರಣದಲ್ಲಿ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಕೆ.ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವಿಷಯ ಬಹಿರಂಗವಾಗಬಹುದೆಂದು ಭಯಗೊಂಡು, ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಮತ್ತು ಇತರ ಒಂಬತ್ತು ಜನರು ಸೇರಿ ಆ ಮಹಿಳೆಯನ್ನು ಅಪಹರಿಸಿದ್ದರು. ಆಕೆಯನ್ನು ಹುಣಸೂರು ಬಳಿ ಇರುವ ತೋಟದ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಈ ಅಪಹರಣ ಪ್ರಕರಣದಿಂದಲೇ ಎಚ್.ಡಿ ರೇವಣ್ಣ ಸೇರಿದಂತೆ ಎಂಟು ಜನರು ಜೈಲು ಸೇರಿದ್ದರು. ಭವಾನಿ ರೇವಣ್ಣ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಂತರ ನಿರೀಕ್ಷಣಾ ಜಾಮೀನು ಪಡೆದರು.

ವಿಶೇಷ ತನಿಖಾ ದಳ (SIT) ಸಂತ್ರಸ್ತೆಯನ್ನು ರಕ್ಷಿಸಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಿತು. ತನಿಖೆ ಮುಗಿದ ನಂತರ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಪ್ರಜ್ವಲ್ ರೇವಣ್ಣನವರ ಮೊಬೈಲ್‌ನಲ್ಲಿ ಆ ಮಹಿಳೆಯನ್ನು ಬಲವಂತವಾಗಿ ಬೆತ್ತಲುಗೊಳಿಸಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಪತ್ತೆಯಾಯಿತು. ಈ ವಿಡಿಯೋ ಪ್ರಮುಖ ಸಾಕ್ಷಿಯಾಯಿತು. ವಿಧಿವಿಜ್ಞಾನ ಪರೀಕ್ಷೆಯಿಂದ ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಅವರೇ ಎಂದು ದೃಢಪಟ್ಟಿತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೇ ಎಂದು ಹೇಳಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಾಸನ ಕ್ಷೇತ್ರಾದ್ಯಂತ ಹಂಚಲಾಗಿತ್ತು. ಈ ಘಟನೆಯ ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೇ 31, 2024ರಂದು ಪ್ರಜ್ವಲ್ ರೇವಣ್ಣನವರನ್ನು ಪೊಲೀಸರು ಬಂಧಿಸಿದರು.

ಅಂದಿನಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ತೀರ್ಪು ಪ್ರಕಟಿಸಲು ವಿಳಂಬವೇಕೆ?

ವಾಸ್ತವವಾಗಿ, ಈ ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಲಯಕ್ಕೆ ಕೆಲವು ಸ್ಪಷ್ಟೀಕರಣಗಳು ಅಗತ್ಯವಿದ್ದ ಕಾರಣ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಾಲಯವು ಪ್ರಮುಖವಾಗಿ ಎರಡು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು.

  1. ಗೂಗಲ್ ಮ್ಯಾಪ್ ಸಾಕ್ಷ್ಯ: ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಸಾಕ್ಷ್ಯವಾಗಿ ಮಂಡಿಸಿದ್ದರು. ಗೂಗಲ್ ಕಂಪನಿಯ ದೃಢೀಕರಣವಿಲ್ಲದೆ ಸಲ್ಲಿಸಲಾದ ಈ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ವಿಶೇಷ ತನಿಖಾ ತಂಡ (SIT)ವು, ಅತ್ಯಾಚಾರ ನಡೆದ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು ಮಹಜರ್ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ವಿವರಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್‌ನಲ್ಲಿ ಸ್ಥಳ ಮತ್ತು ಹಳೆಯ ಫೋಟೋಗಳು ಲಭ್ಯವಾಗುತ್ತವೆ. ಆದ್ದರಿಂದ ಇದನ್ನು ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿತು.
  2. ಮೊಬೈಲ್ ಫೋನ್ ಸಾಕ್ಷ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಸ್ಯಾಮ್‌ಸಂಗ್ ಜೆ 4 ಮೊಬೈಲ್ ಫೋನ್ ಬಗ್ಗೆಯೂ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು. ಇದಕ್ಕೆ ಪ್ರಜ್ವಲ್ ಪರ ವಕೀಲರು, ಆ ಮೊಬೈಲ್ ಅನ್ನು ತನಿಖಾಧಿಕಾರಿಗಳು ಬೇರೊಂದು ಪ್ರಕರಣದಿಂದ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರು ಅದನ್ನು ವಶಪಡಿಸಿಕೊಂಡಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ವಾದಿಸಿದ್ದರು.

ಈ ಎಲ್ಲಾ ಸ್ಪಷ್ಟೀಕರಣಗಳ ನಂತರ, ನ್ಯಾಯಾಲಯವು ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ:  ಖರ್ಗೆ, ಪ್ರಿಯಾಂಕಾ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ 9ನೇ ದಿನವೂ ಪ್ರತಿಭಟನೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...