HomeUncategorizedಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

- Advertisement -
- Advertisement -

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ.

ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು ಒರೆಸಿಕೊಳ್ಳುತ್ತಲೇ ಅವರು ನ್ಯಾಯಾಲಯದಿಂದ ಹೊರನಡೆದರು. ಪ್ರಜ್ವಲ್ ರೇವಣ್ಣ ಅವರಿಗೆ ವಿಧಿಸಲಿರುವ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ನಾಳೆ ಪ್ರಕಟಿಸಲಿದೆ. ಕಾನೂನು ತಜ್ಞರ ಪ್ರಕಾರ, ಈ ಪ್ರಕರಣದಲ್ಲಿ ಕನಿಷ್ಠ 10 ವರ್ಷದಿಂದ ಗರಿಷ್ಠ ಜೀವಾವಧಿ ಶಿಕ್ಷೆಯಾಗುವ ಸಾಧ್ಯತೆಯಿದೆ.

ಪ್ರಕರಣದ ಹಿನ್ನೆಲೆ

ಕೆ.ಆರ್ ನಗರದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಈ ವಿಷಯ ಬಹಿರಂಗವಾಗಬಹುದೆಂದು ಭಯಗೊಂಡು, ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ, ತಾಯಿ ಭವಾನಿ ರೇವಣ್ಣ ಮತ್ತು ಇತರ ಒಂಬತ್ತು ಜನರು ಸೇರಿ ಆ ಮಹಿಳೆಯನ್ನು ಅಪಹರಿಸಿದ್ದರು. ಆಕೆಯನ್ನು ಹುಣಸೂರು ಬಳಿ ಇರುವ ತೋಟದ ಮನೆಯೊಂದರಲ್ಲಿ ಕೂಡಿಹಾಕಲಾಗಿತ್ತು. ಈ ಅಪಹರಣ ಪ್ರಕರಣದಿಂದಲೇ ಎಚ್.ಡಿ ರೇವಣ್ಣ ಸೇರಿದಂತೆ ಎಂಟು ಜನರು ಜೈಲು ಸೇರಿದ್ದರು. ಭವಾನಿ ರೇವಣ್ಣ ಅವರು ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಂತರ ನಿರೀಕ್ಷಣಾ ಜಾಮೀನು ಪಡೆದರು.

ವಿಶೇಷ ತನಿಖಾ ದಳ (SIT) ಸಂತ್ರಸ್ತೆಯನ್ನು ರಕ್ಷಿಸಿ, ಆಕೆಯ ಹೇಳಿಕೆ ದಾಖಲಿಸಿಕೊಂಡು ತನಿಖೆ ನಡೆಸಿತು. ತನಿಖೆ ಮುಗಿದ ನಂತರ ದೋಷಾರೋಪ ಪಟ್ಟಿ ಸಲ್ಲಿಸಲಾಯಿತು. ಪ್ರಜ್ವಲ್ ರೇವಣ್ಣನವರ ಮೊಬೈಲ್‌ನಲ್ಲಿ ಆ ಮಹಿಳೆಯನ್ನು ಬಲವಂತವಾಗಿ ಬೆತ್ತಲುಗೊಳಿಸಿ ಲೈಂಗಿಕ ಕಿರುಕುಳ ನೀಡಿದ ವಿಡಿಯೋ ಪತ್ತೆಯಾಯಿತು. ಈ ವಿಡಿಯೋ ಪ್ರಮುಖ ಸಾಕ್ಷಿಯಾಯಿತು. ವಿಧಿವಿಜ್ಞಾನ ಪರೀಕ್ಷೆಯಿಂದ ವಿಡಿಯೋದಲ್ಲಿರುವುದು ಪ್ರಜ್ವಲ್ ರೇವಣ್ಣ ಅವರೇ ಎಂದು ದೃಢಪಟ್ಟಿತು. ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದೇ ಎಂದು ಹೇಳಲಾದ ಅಶ್ಲೀಲ ವಿಡಿಯೋಗಳಿರುವ ಪೆನ್‌ಡ್ರೈವ್‌ಗಳನ್ನು ಹಾಸನ ಕ್ಷೇತ್ರಾದ್ಯಂತ ಹಂಚಲಾಗಿತ್ತು. ಈ ಘಟನೆಯ ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮೇ 31, 2024ರಂದು ಪ್ರಜ್ವಲ್ ರೇವಣ್ಣನವರನ್ನು ಪೊಲೀಸರು ಬಂಧಿಸಿದರು.

ಅಂದಿನಿಂದ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆ ಎಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ.

ತೀರ್ಪು ಪ್ರಕಟಿಸಲು ವಿಳಂಬವೇಕೆ?

ವಾಸ್ತವವಾಗಿ, ಈ ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು. ಆದರೆ, ನ್ಯಾಯಾಲಯಕ್ಕೆ ಕೆಲವು ಸ್ಪಷ್ಟೀಕರಣಗಳು ಅಗತ್ಯವಿದ್ದ ಕಾರಣ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಾಲಯವು ಪ್ರಮುಖವಾಗಿ ಎರಡು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು.

  1. ಗೂಗಲ್ ಮ್ಯಾಪ್ ಸಾಕ್ಷ್ಯ: ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರು ಗೂಗಲ್ ಮ್ಯಾಪ್ ಅನ್ನು ಸಾಕ್ಷ್ಯವಾಗಿ ಮಂಡಿಸಿದ್ದರು. ಗೂಗಲ್ ಕಂಪನಿಯ ದೃಢೀಕರಣವಿಲ್ಲದೆ ಸಲ್ಲಿಸಲಾದ ಈ ಮ್ಯಾಪ್ ಅನ್ನು ಸಾಕ್ಷಿಯಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ವಿಶೇಷ ತನಿಖಾ ತಂಡ (SIT)ವು, ಅತ್ಯಾಚಾರ ನಡೆದ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವನ್ನು ಮಹಜರ್ ದಾಖಲೆಯಲ್ಲಿ ನಮೂದಿಸಲಾಗಿದೆ. ಈ ವಿವರಗಳನ್ನು ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್‌ನಲ್ಲಿ ಸ್ಥಳ ಮತ್ತು ಹಳೆಯ ಫೋಟೋಗಳು ಲಭ್ಯವಾಗುತ್ತವೆ. ಆದ್ದರಿಂದ ಇದನ್ನು ದಾಖಲೆಯ ಭಾಗವೆಂದು ಪರಿಗಣಿಸಬೇಕು ಎಂದು ಮನವಿ ಮಾಡಿತು.
  2. ಮೊಬೈಲ್ ಫೋನ್ ಸಾಕ್ಷ್ಯ: ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಸ್ಯಾಮ್‌ಸಂಗ್ ಜೆ 4 ಮೊಬೈಲ್ ಫೋನ್ ಬಗ್ಗೆಯೂ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು. ಇದಕ್ಕೆ ಪ್ರಜ್ವಲ್ ಪರ ವಕೀಲರು, ಆ ಮೊಬೈಲ್ ಅನ್ನು ತನಿಖಾಧಿಕಾರಿಗಳು ಬೇರೊಂದು ಪ್ರಕರಣದಿಂದ ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಅವರು ಅದನ್ನು ವಶಪಡಿಸಿಕೊಂಡಿದ್ದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ವಾದಿಸಿದ್ದರು.

ಈ ಎಲ್ಲಾ ಸ್ಪಷ್ಟೀಕರಣಗಳ ನಂತರ, ನ್ಯಾಯಾಲಯವು ಅಂತಿಮವಾಗಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿರೋಧ:  ಖರ್ಗೆ, ಪ್ರಿಯಾಂಕಾ ಸೇರಿದಂತೆ ವಿರೋಧ ಪಕ್ಷದ ನಾಯಕರಿಂದ 9ನೇ ದಿನವೂ ಪ್ರತಿಭಟನೆ-video

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...