Homeಕರ್ನಾಟಕಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸುವಾಗ ಶಿಕ್ಷೆಗೊಳಗಾದ ಓಲೆಕಾರ್ ಅನರ್ಹವೇಕಿಲ್ಲ? ಹೈಕೋರ್ಟ್ ಪ್ರಶ್ನೆ

ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸುವಾಗ ಶಿಕ್ಷೆಗೊಳಗಾದ ಓಲೆಕಾರ್ ಅನರ್ಹವೇಕಿಲ್ಲ? ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸುವಾಗ ಶಿಕ್ಷೆಗೊಳಗಾದ ಬಿಜೆಪಿ ಶಾಸಕ ನೆಹರೂ ಓಲೆಕಾರ್‌ರವರನ್ನು ಏಕೆ ಅನರ್ಹಗೊಳಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪ್ರಶ್ನಿಸಿದೆ.

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆ ಆದೇಶಕ್ಕೆ ತಡೆ ನೀಡುವಂತೆ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ನ ಕೆ.ನಟರಾಜನ್‌ರವರ ಏಕಸದಸ್ಯ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಧೀನ ನ್ಯಾಯಾಲಯದ ಆದೇಶವು ದೋಷಪೂರಿತವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗಾಗಿ ಶಿಕ್ಷೆಗೆ ತಡೆ ನೀಡಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪುಗಳ ಅನ್ವಯ ಶಾಸಕ ಒಲೆಕಾರ್‌ರವರು ದೋಷಿ ಎಂಬ ಅಧೀನ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆ ಶಾಸಕರ ಪರ ವಕೀಲರು ವಾದ ಮಂಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರಾದ ಕೆ.ನಟರಾಜನ್‌ರವರು. ‘ಅರ್ಜಿದಾರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆಯೇ’ ಎಂದು ಪ್ರಶ್ನಿಸಿತು. ಓಲೆಕಾರ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದಾಗ, “ಏಕೆ ಇನ್ನೂ ಅನರ್ಹಗೊಳಿಸಿಲ್ಲ? ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ?” ಎಂದು ಮರು ಪ್ರಶ್ನಿಸಿತು.

ಅದಕ್ಕೆ ಉತ್ತರಿಸಿದ ಓಲೆಕಾರ್ ಪರ ವಕೀಲರು, “ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ಸ್ಪೀಕರ್‌ರವರಿಗಿದೆ. ಆ ಕುರಿತು ಅವರು ತೀರ್ಮಾನ ಕೈಗೊಳ್ಳುತ್ತಾರೆ. ಆದರೆ, ದೋಷಿಯೆಂಬ ಅಧೀನ ನ್ಯಾಯಾಲಯದ ಆದೇಶ ದೋಷಪೂರಿತವಾಗಿರುವುದರಿಂದ ಅದನ್ನು ರದ್ದಗೊಳಿಸಬೇಕೆಂದು ಮನವಿ ಮಾಡಿದರು.

ಲೋಕಾಯುಕ್ತ ವಕೀಲರ್ ಆಕ್ಷೇಪ ವ್ಯಕ್ತಪಡಿಸಿದರು. ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣದಲ್ಲಿ 2 ವರ್ಷಗಳ ಕಾಲ ಶಿಕ್ಷೆಗೆ ಒಳಗಾದರೆ ಅವರು ತನ್ನಿಂದ ತಾನೇ ಅನರ್ಹಗೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶಾಸಕ ನೆಹರು ಓಲೆಕಾರ್ ಕ್ರಿಮಿನಲ್ ಪಿತೂರಿ ನಡೆಸಿರುವ ಸಾಕ್ಷ್ಯಾಧಾರಗಳಿವೆ. ಅದರ ಆಧಾರದಲ್ಲಿ ತೀರ್ಪು ನೀಡಲಾಗಿದೆ. ಆದ ಕಾರಣ ಅವರ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ವಾದಿಸಿದರು. ಪೀಠ ವಾದ-ವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ದಿನದಿಂದ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ ಎಂದು ಲೋಕಸಭಾ ಸೆಕ್ರೆಟರಿಯೇಟ್‌ ಪ್ರಕಟಣೆ ಹೊರಡಿಸಿದ್ದಾರೆ.  ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೂ ಈವರೆಗೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿಲ್ಲ. ಇದು ನೆಹರುಗೆ ಒಂದು ನ್ಯಾಯ, ಗಾಂಧಿಗೊಂದು ನ್ಯಾಯವೇ ಎನ್ನುವ ಪ್ರಶ್ನೆ ಎದ್ದಿತ್ತು. ಕರ್ನಾಟಕ ಹೈಕೋರ್ಟ್ ಸಹ ಅದೇ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...