Homeಚಳವಳಿಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೊಳಗಾಗಿದ್ದ ಪ್ರೊ.ಜಿ.ಎನ್ ಸಾಯಿಬಾಬಾ ಸೇರಿ ಆರು ಜನರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ದೋಷಮುಕ್ತಗೊಳಿಸಿದೆ. ಭಯೋತ್ಪಾದನಾ ವಿರೋಧಿ ಯುಎಪಿಎ ಕಾಯ್ದೆಯಡಿ ಶಿಕ್ಷೆಗೊಳಗಾಗಿದ್ದ ಅವರನ್ನು ನಿರಪರಾಧಿಗಳು ಎಂದು ಘೋಷಿಸಿ ಕೂಡಲೇ ಬಿಡುಗಡೆಗೆ ಆಗ್ರಹಿಸಿದೆ.

2017ರ ಗಡ್‌ಚಿರೋಲಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೋ ಮತ್ತು ಅನಿಲ್ ಪನ್ಸಾರೆ ಅವರಿದ್ದ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರೊ.ಜಿ.ಎನ್ ಸಾಯಿಬಾಬಾ ಅವರೊಂದಿತೆ ಇತರ ಆರೋಪಿಗಳಾದ ಮಹೇಶ್ ಟಿರ್ಕಿ, ಹೇಮ್ ಕೇಶ್ವದತ್ತ ಮಿಶ್ರಾ, ಪ್ರಶಾಂತ್ ರಾಹಿ ಮತ್ತು ವಿಜಯ್ ನಾನ್ ಟಿರ್ಕಿರವರ ಮೇಲೆ ಇತರ ಪ್ರಕರಣಗಳಿಲ್ಲದಿದ್ದರೆ ಕೂಡಲೇ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ತಿಳಿಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವಾಗಲೇ ಪಾಂಡು ಪೊರ ನರತೆ ಎಂಬುವವರು ಕಳೆದ ಆಗಸ್ಟ್‌ನಲ್ಲಿ ಕೊನೆಯುಸಿರೆಳೆದಿದ್ದರು.

ರೆವಲ್ಯೂಷನರಿ ಡೆಮೊಕ್ರಟಿಕ್ ಫ್ರಂಟ್ ಎಂಬ ಮಾವೋವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ ಆರೋಪದ ಮೇಲೆ ಅವರನ್ನು 2014ರಲ್ಲಿ ಬಂಧಿಸಲಾಗಿತ್ತು. ಯುಎಪಿಎಯ ಸೆಕ್ಷನ್ 13, 18, 20, 38 ಮತ್ತು 39 ರ ಅಡಿ ಮತ್ತು ಐಪಿಸಿಯ 120ಬಿ ಸೆಕ್ಷನ್ ಅಡಿಯಲ್ಲಿ ಮಾರ್ಚ್ 2017 ರಲ್ಲಿ ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಆರೋಪಿಗಳ ಪರವಾಗಿ ನಾಗ್ಪುರ ಕೋರ್ಟ್‌ನಲ್ಲಿ ವಕೀಲರಾದ ನಿಹಾಲ್ ಸಿಂಗ್ ರಾಥೋಡ್ ಮತ್ತು ಬರುನ್ ಕುಮಾರ್ ವಕಾಲತ್ತು ವಹಿಸಿದ್ದರು. ಪ್ರಾಸಿಕ್ಯೂಷನ್ ಅನ್ನು ಎಸ್‌ಪಿಪಿ ಸಿದ್ಧಾರ್ಥ್ ದವೆ ಪ್ರತಿನಿಧಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ಜಿ.ಎನ್ ಸಾಯಿಬಾಬರವರು ಪೊಲೀಯೊ ಪೀಡಿತರಾದ ಕಾರಣ ವೀಲ್‌ಚೇರ್‌ ಅನ್ನು ಆಶ್ರಯಿಸಿದ್ದಾರೆ. ಅಲ್ಲದೆ ಕಿಡ್ನಿ ಸಮಸ್ಯೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೆಡಿಕಲ್ ಸ್ಥಿತಿಗತಿಯ ಆಧಾರದಲ್ಲಿ ತಮ್ಮ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಆದರೆ ಅದಕ್ಕೆ ಹೈಕೋರ್ಟ್ ಸಮ್ಮತಿ ಸೂಚಿಸಿರಲಿಲ್ಲ.

ಇದನ್ನೂ ಓದಿ; ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಎಂಬ ಸಂಘಟನೆ ಅವರ ಬಿಡುಗಡೆಗಾಗಿ ನಿರಂತರ ಹೋರಾಟ ನಡೆಸಿತ್ತು. ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ದೂರಿತ್ತು.

ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ. ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಾಯಿಬಾಬಾ ಅವರ ಪತ್ನಿ ಆರೋಪಿಸಿದ್ದರು.

ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದ್ದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಕಳೆದ ವರ್ಷ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ನಂತರ ಜೈಲಿನ ಅಧಿಕಾರಿಗಳನ್ನು ಅವರ ಹಕ್ಕೊತ್ತಾಯಗಳನ್ನು ಈಡೇರಿಸಿದ್ದರು.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...