Homeಚಳವಳಿಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೊಳಗಾಗಿದ್ದ ಪ್ರೊ.ಜಿ.ಎನ್ ಸಾಯಿಬಾಬಾ ಸೇರಿ ಆರು ಜನರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ದೋಷಮುಕ್ತಗೊಳಿಸಿದೆ. ಭಯೋತ್ಪಾದನಾ ವಿರೋಧಿ ಯುಎಪಿಎ ಕಾಯ್ದೆಯಡಿ ಶಿಕ್ಷೆಗೊಳಗಾಗಿದ್ದ ಅವರನ್ನು ನಿರಪರಾಧಿಗಳು ಎಂದು ಘೋಷಿಸಿ ಕೂಡಲೇ ಬಿಡುಗಡೆಗೆ ಆಗ್ರಹಿಸಿದೆ.

2017ರ ಗಡ್‌ಚಿರೋಲಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೋ ಮತ್ತು ಅನಿಲ್ ಪನ್ಸಾರೆ ಅವರಿದ್ದ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರೊ.ಜಿ.ಎನ್ ಸಾಯಿಬಾಬಾ ಅವರೊಂದಿತೆ ಇತರ ಆರೋಪಿಗಳಾದ ಮಹೇಶ್ ಟಿರ್ಕಿ, ಹೇಮ್ ಕೇಶ್ವದತ್ತ ಮಿಶ್ರಾ, ಪ್ರಶಾಂತ್ ರಾಹಿ ಮತ್ತು ವಿಜಯ್ ನಾನ್ ಟಿರ್ಕಿರವರ ಮೇಲೆ ಇತರ ಪ್ರಕರಣಗಳಿಲ್ಲದಿದ್ದರೆ ಕೂಡಲೇ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ತಿಳಿಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವಾಗಲೇ ಪಾಂಡು ಪೊರ ನರತೆ ಎಂಬುವವರು ಕಳೆದ ಆಗಸ್ಟ್‌ನಲ್ಲಿ ಕೊನೆಯುಸಿರೆಳೆದಿದ್ದರು.

ರೆವಲ್ಯೂಷನರಿ ಡೆಮೊಕ್ರಟಿಕ್ ಫ್ರಂಟ್ ಎಂಬ ಮಾವೋವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ ಆರೋಪದ ಮೇಲೆ ಅವರನ್ನು 2014ರಲ್ಲಿ ಬಂಧಿಸಲಾಗಿತ್ತು. ಯುಎಪಿಎಯ ಸೆಕ್ಷನ್ 13, 18, 20, 38 ಮತ್ತು 39 ರ ಅಡಿ ಮತ್ತು ಐಪಿಸಿಯ 120ಬಿ ಸೆಕ್ಷನ್ ಅಡಿಯಲ್ಲಿ ಮಾರ್ಚ್ 2017 ರಲ್ಲಿ ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಆರೋಪಿಗಳ ಪರವಾಗಿ ನಾಗ್ಪುರ ಕೋರ್ಟ್‌ನಲ್ಲಿ ವಕೀಲರಾದ ನಿಹಾಲ್ ಸಿಂಗ್ ರಾಥೋಡ್ ಮತ್ತು ಬರುನ್ ಕುಮಾರ್ ವಕಾಲತ್ತು ವಹಿಸಿದ್ದರು. ಪ್ರಾಸಿಕ್ಯೂಷನ್ ಅನ್ನು ಎಸ್‌ಪಿಪಿ ಸಿದ್ಧಾರ್ಥ್ ದವೆ ಪ್ರತಿನಿಧಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ಜಿ.ಎನ್ ಸಾಯಿಬಾಬರವರು ಪೊಲೀಯೊ ಪೀಡಿತರಾದ ಕಾರಣ ವೀಲ್‌ಚೇರ್‌ ಅನ್ನು ಆಶ್ರಯಿಸಿದ್ದಾರೆ. ಅಲ್ಲದೆ ಕಿಡ್ನಿ ಸಮಸ್ಯೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೆಡಿಕಲ್ ಸ್ಥಿತಿಗತಿಯ ಆಧಾರದಲ್ಲಿ ತಮ್ಮ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಆದರೆ ಅದಕ್ಕೆ ಹೈಕೋರ್ಟ್ ಸಮ್ಮತಿ ಸೂಚಿಸಿರಲಿಲ್ಲ.

ಇದನ್ನೂ ಓದಿ; ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಎಂಬ ಸಂಘಟನೆ ಅವರ ಬಿಡುಗಡೆಗಾಗಿ ನಿರಂತರ ಹೋರಾಟ ನಡೆಸಿತ್ತು. ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ದೂರಿತ್ತು.

ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ. ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಾಯಿಬಾಬಾ ಅವರ ಪತ್ನಿ ಆರೋಪಿಸಿದ್ದರು.

ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದ್ದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಕಳೆದ ವರ್ಷ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ನಂತರ ಜೈಲಿನ ಅಧಿಕಾರಿಗಳನ್ನು ಅವರ ಹಕ್ಕೊತ್ತಾಯಗಳನ್ನು ಈಡೇರಿಸಿದ್ದರು.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....