Homeಚಳವಳಿಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

ಸಾಯಿಬಾಬಾ ಸೇರಿ ಆರು ಜನರ ವಿರುದ್ಧದ ಶಿಕ್ಷೆ ರದ್ದು: ಪ್ರಕರಣದ ಪೂರ್ಣ ವಿವರ ಇಲ್ಲಿದೆ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಜೀವಾವಧಿ ಶಿಕ್ಷೆಗೊಳಗಾಗಿದ್ದ ಪ್ರೊ.ಜಿ.ಎನ್ ಸಾಯಿಬಾಬಾ ಸೇರಿ ಆರು ಜನರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ದೋಷಮುಕ್ತಗೊಳಿಸಿದೆ. ಭಯೋತ್ಪಾದನಾ ವಿರೋಧಿ ಯುಎಪಿಎ ಕಾಯ್ದೆಯಡಿ ಶಿಕ್ಷೆಗೊಳಗಾಗಿದ್ದ ಅವರನ್ನು ನಿರಪರಾಧಿಗಳು ಎಂದು ಘೋಷಿಸಿ ಕೂಡಲೇ ಬಿಡುಗಡೆಗೆ ಆಗ್ರಹಿಸಿದೆ.

2017ರ ಗಡ್‌ಚಿರೋಲಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೋ ಮತ್ತು ಅನಿಲ್ ಪನ್ಸಾರೆ ಅವರಿದ್ದ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರೊ.ಜಿ.ಎನ್ ಸಾಯಿಬಾಬಾ ಅವರೊಂದಿತೆ ಇತರ ಆರೋಪಿಗಳಾದ ಮಹೇಶ್ ಟಿರ್ಕಿ, ಹೇಮ್ ಕೇಶ್ವದತ್ತ ಮಿಶ್ರಾ, ಪ್ರಶಾಂತ್ ರಾಹಿ ಮತ್ತು ವಿಜಯ್ ನಾನ್ ಟಿರ್ಕಿರವರ ಮೇಲೆ ಇತರ ಪ್ರಕರಣಗಳಿಲ್ಲದಿದ್ದರೆ ಕೂಡಲೇ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ತಿಳಿಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವಾಗಲೇ ಪಾಂಡು ಪೊರ ನರತೆ ಎಂಬುವವರು ಕಳೆದ ಆಗಸ್ಟ್‌ನಲ್ಲಿ ಕೊನೆಯುಸಿರೆಳೆದಿದ್ದರು.

ರೆವಲ್ಯೂಷನರಿ ಡೆಮೊಕ್ರಟಿಕ್ ಫ್ರಂಟ್ ಎಂಬ ಮಾವೋವಾದಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ ಆರೋಪದ ಮೇಲೆ ಅವರನ್ನು 2014ರಲ್ಲಿ ಬಂಧಿಸಲಾಗಿತ್ತು. ಯುಎಪಿಎಯ ಸೆಕ್ಷನ್ 13, 18, 20, 38 ಮತ್ತು 39 ರ ಅಡಿ ಮತ್ತು ಐಪಿಸಿಯ 120ಬಿ ಸೆಕ್ಷನ್ ಅಡಿಯಲ್ಲಿ ಮಾರ್ಚ್ 2017 ರಲ್ಲಿ ಮಹಾರಾಷ್ಟ್ರದ ಗಡ್‌ಚಿರೋಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಆರೋಪಿಗಳ ಪರವಾಗಿ ನಾಗ್ಪುರ ಕೋರ್ಟ್‌ನಲ್ಲಿ ವಕೀಲರಾದ ನಿಹಾಲ್ ಸಿಂಗ್ ರಾಥೋಡ್ ಮತ್ತು ಬರುನ್ ಕುಮಾರ್ ವಕಾಲತ್ತು ವಹಿಸಿದ್ದರು. ಪ್ರಾಸಿಕ್ಯೂಷನ್ ಅನ್ನು ಎಸ್‌ಪಿಪಿ ಸಿದ್ಧಾರ್ಥ್ ದವೆ ಪ್ರತಿನಿಧಿಸಿದ್ದರು.

ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ಜಿ.ಎನ್ ಸಾಯಿಬಾಬರವರು ಪೊಲೀಯೊ ಪೀಡಿತರಾದ ಕಾರಣ ವೀಲ್‌ಚೇರ್‌ ಅನ್ನು ಆಶ್ರಯಿಸಿದ್ದಾರೆ. ಅಲ್ಲದೆ ಕಿಡ್ನಿ ಸಮಸ್ಯೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೆಡಿಕಲ್ ಸ್ಥಿತಿಗತಿಯ ಆಧಾರದಲ್ಲಿ ತಮ್ಮ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಆದರೆ ಅದಕ್ಕೆ ಹೈಕೋರ್ಟ್ ಸಮ್ಮತಿ ಸೂಚಿಸಿರಲಿಲ್ಲ.

ಇದನ್ನೂ ಓದಿ; ಜೈಲಿನ ಬಾಗಿಲು ತೆರೆಯುತ್ತದೆ, ನೀವು ನಮ್ಮ ಬಳಿಗೆ ಹಿಂತಿರುಗುತ್ತೀರಿ: ಜೈಲಲ್ಲಿರುವ ಸ್ನೇಹಿತ ಸಾಯಿಬಾಬಾಗೆ ಅರುಂಧತಿ ರಾಯ್ ಬರೆದ ಭಾವನಾತ್ಮಕ ಪತ್ರ

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಎಂಬ ಸಂಘಟನೆ ಅವರ ಬಿಡುಗಡೆಗಾಗಿ ನಿರಂತರ ಹೋರಾಟ ನಡೆಸಿತ್ತು. ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ದೂರಿತ್ತು.

ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ. ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಾಯಿಬಾಬಾ ಅವರ ಪತ್ನಿ ಆರೋಪಿಸಿದ್ದರು.

ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದ್ದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಕಳೆದ ವರ್ಷ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ನಂತರ ಜೈಲಿನ ಅಧಿಕಾರಿಗಳನ್ನು ಅವರ ಹಕ್ಕೊತ್ತಾಯಗಳನ್ನು ಈಡೇರಿಸಿದ್ದರು.

ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...