Homeಮುಖಪುಟಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

- Advertisement -
- Advertisement -

COVID-19 ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಸಂಪೂರ್ಣ ಹೃದಯದಿಂದ ಸಹಕಾರ ನೀಡುತ್ತಿದ್ದೇವೆ. ಆದರೆ ನಿಸ್ಸಂಶಯವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಒಡ್ಡುತ್ತಿದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಕೇಂದ್ರ ಸರ್ಕಾರದೊಂದಿಗಿನ ಮುಖಾಮುಖಿ ನಮ್ಮ ಹಾದಿಯಾಗಿಲ್ಲ. ಅದೇ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ”ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ದಿ ಫೆಡರಲ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದಿರುವ ವಿಜಯನ್‌ರವರ ಸಂದರ್ಶನದ ಕೆಲವು ಆಯ್ದ ಭಾಗಗಳು ಇಲ್ಲಿವೆ.

ಕಳೆದ ಮೂರು ವರ್ಷಗಳಲ್ಲಿ, ನಿಮ್ಮ ಸರ್ಕಾರವು ಓಖಿ ಚಂಡಮಾರುತದಿಂದ COVID-19 ವರೆಗಿನ ಹಲವು ವಿಪತ್ತುಗಳನ್ನು ಎದುರಿಸಬೇಕಾಯಿತು. ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಸಮರ್ಥ ನಾಯಕನಾಗಿ ನಿಮ್ಮನ್ನು ನೋಡಲಾಗುತ್ತಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ?

ಇರುವ ಬಿಕ್ಕಟ್ಟಿನ ವಿರುದ್ಧ ಹೋರಾಡುವುದು ಮತ್ತು ಧೈರ್ಯದಿಂದ ಎದುರಿಸಿದರೆ ಮಾತ್ರ ನೀವು ಅದನ್ನು ಅವಕಾಶವಾಗಿ ಪರಿವರ್ತಿಸಬಹುದು. ಕೇರಳವು ಹಿಂದಿನಿಂದಲೂ ಆ ಕೆಲಸ ಮಾಡುತ್ತಿದ್ದು ನಾವು ಅದನ್ನು ಪುನಾರಾವರ್ತನೆ ಮಾಡಿದ್ದೇವೆ ಅಷ್ಟೇ. ಅಲ್ಲದೇ ನಾನೊಬ್ಬನೇ ಇದನ್ನು ಮಾಡಲಾಗುವುದಿಲ್ಲ. ಒಟ್ಟಾರೆ ಇಡೀ ಕೇರಳ ಸಮಾಜವಾಗಿ ನಾವು ಇದನ್ನು ಎದುರಿಸುತ್ತಿದ್ದೇವೆ.

ನಾವು 2017ರ ಓಖಿ ಚಂಡಮಾರುತ, ನಿಫಾ ವೈರಸ್‌, 2018-19ರ ನೆರೆ ಹಾವಳಿ ಮತ್ತು ಕೋವಿಡ್‌ ಎಲ್ಲವನ್ನು ಇಡೀ ಸಮಾಜವಾಗಿ ಎದುರಿಸಿದ್ದೇವೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ.

ಮುಖ್ಯಮಂತ್ರಿಯಾಗಿ ನಿಮಗೆ ಸಿಗುವ ಪುರಸ್ಕಾರಗಳ ನಡುವೆಯೂ ಗೃಹ ಇಲಾಖೆ ಮತ್ತು ಪೊಲೀಸರು ಈಗ ಸ್ವಲ್ಪ ಸಮಯದವರೆಗೆ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿ/ಆರ್‌ಎಸ್‌ಎಸ್ ಜನರು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ಮೃದುವಾಗಿ ವರ್ತಿಸುತ್ತಾರೆ ಎಂಬ ಆರೋಪವಿದೆ. ನಿಮ್ಮ ಪಕ್ಷಬಿ ಯುಎಪಿಎಗೆ ವಿರುದ್ಧವಾಗಿದ್ದರೂ, ಈ ಕಾಯ್ದೆಯನ್ನು ಕೇರಳ ಪೊಲೀಸರು ಬಳಸಿದ ಉದಾಹರಣೆಗಳಿವೆ. ಕೇರಳ ಪೊಲೀಸರು ಬಲಪಂಥೀಯ ಪಡೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಏನು ಹೇಳುತ್ತೀರಿ?

ಯುಎಪಿಎ ಕುರಿತು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ತುಂಬಾ ಸ್ಪಷ್ಟವಾಗಿದೆ. ಯುಎಪಿಎ ಪ್ರಕರಣಗಳನ್ನು ಪರಿಶೀಲಿಸಲು ಒಂದು ಸಮಿತಿ ಇದೆ. ಆದಾಗ್ಯೂ, ಅಂತಹ ಸಂದರ್ಭಗಳಲ್ಲಿ ಕೇಂದ್ರ ಏಜೆನ್ಸಿಗಳು ನೇರವಾಗಿ ಮಧ್ಯಪ್ರವೇಶಿಸುವಂತಹ ಪರಿಸ್ಥಿತಿ ಇದೆ. ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟಿನಡಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ. ಆದ್ದರಿಂದ, ಈ ವಿಷಯಗಳಲ್ಲಿ ತೊಡಗಿಸಿಕೊಳ್ಳುವವರ ರಾಜಕೀಯ ಸಂಬಂಧಕ್ಕಿಂತ ಕಾನೂನುಬದ್ಧತೆಯನ್ನು ನಾವು ಮಾನ್ಯ ಮಾಡುತ್ತೇವೆ. ಪೊಲೀಸರು ಮಾಡಿದ ಉತ್ತಮ ಕಾರ್ಯಗಳನ್ನು ಅಂಗೀಕರಿಸಲು ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸಲು ಸರ್ಕಾರ ಹಿಂಜರಿಯುವುದಿಲ್ಲ. ಇನ್ನು ಪೊಲೀಸರ ಕುರಿತಂತೆ ಉಳಿದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂಬುದು ನನ್ನ ಅಭಿಪ್ರಾಯ.

ನಿಮ್ಮ ರಾಜಕೀಯ ವಿರೋಧಿಗಳು ದೇಶವನ್ನು ಆಳುತ್ತಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಬಿಜೆಪಿ ಸರ್ಕಾರ ಚುಕ್ಕಾಣಿ ಹಿಡಿದಿದ್ದು, ಇದು ಯಾವ ರೀತಿಯಲ್ಲಿ ಕಮ್ಯುನಿಸ್ಟ್ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ?

ಕೇಂದ್ರ-ರಾಜ್ಯ ಸಂಬಂಧದಲ್ಲಿ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಉಂಟುಮಾಡುತ್ತದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. COVID-19 ವಿರುದ್ಧ ಹೋರಾಡುವಾಗ, ನಾವು ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಬದ್ಧರಾಗಿದ್ದೇವೆ.

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

ರಾಜ್ಯದ ವಿರೋಧ ಪಕ್ಷ ಮತ್ತು ಅದರ ನಾಯಕರ ಸಹಕಾರದ ಕುರಿತು ನಿಮ್ಮ ಅಭಿಪ್ರಾಯವೇನು?

ರಾಜ್ಯದ ಉಳಿವು ಮತ್ತು ಭವಿಷ್ಯದ ವಿಷಯಗಳಿಗೆ ಸಂಬಂಧಿಸಿದಂತೆ, ಸರ್ಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ನಂಬುತ್ತೇನೆ.

COVID-19 ಅನ್ನು ಕೇರಳ ನಿರ್ವಹಿಸುವುದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಮತ್ತು ಹೆಚ್ಚು ಹೆಚ್ಚು ವ್ಯಾಖ್ಯಾನಕಾರರು ಇದನ್ನು ಜಗತ್ತಿಗೆ ಒಂದು ಮಾದರಿ ಎಂದು ಉಲ್ಲೇಖಿಸುತ್ತಿದ್ದಾರೆ. ನಿಫಾ ಬಿಕ್ಕಟ್ಟಿನ ಸಮಯದಲ್ಲಿಯೂ ಇದೇ ಸಂಭವಿಸಿದೆ. ನಿಮ್ಮ ‘ಯಶಸ್ಸಿನ ಮಂತ್ರ’ ಏನು?

ಯಶಸ್ಸಿಗೆ ಅಂತಹ ಯಾವುದೇ ಮಂತ್ರವಿಲ್ಲ. ನಾವು ಏನನ್ನಾದರೂ ಸಾಧಿಸಿದರೆ, ಅದರ ಸಂಪೂರ್ಣ ಮನ್ನಣೆ ಬಿಕ್ಕಟ್ಟನ್ನು ನಿವಾರಿಸಲು ಒಟ್ಟಾಗಿ ನಿಂತಿರುವ ಕೇರಳದ ಜನರಿಗೆ ಸಲ್ಲುತ್ತದೆ. ಅಂತಹ ಸೌಹಾರ್ದವು ನಮ್ಮ ಸಮಾಜದಲ್ಲಿ ಯಾವಾಗಲೂ ಇತ್ತು. ಕಠಿಣ ಕಾಲದಲ್ಲಿ ಇಂತಹ ಪ್ರಚಂಡ ಏಕತೆಯ ಪ್ರಜ್ಞೆಯನ್ನು ನಾವು ಪ್ರದರ್ಶಿಸಿದ್ದೇವೆ.

ಕೃಪೆ: ದಿ ಫೆಡರಲ್‌


ಇದನ್ನೂ ಓದಿ: ಕೊರೋನ ವಾರಿಯರ್ಸ್‌ಗಳೇ ರಿಯಲ್‌ ಹೀರೋಗಳು: ಅವರಿಗೆ ಹುಸಿ ಸಮ್ಮಾನಗಳು ಸಾಲವು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...