Homeಮುಖಪುಟಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

- Advertisement -
- Advertisement -

COVID-19 ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಸಂಪೂರ್ಣ ಹೃದಯದಿಂದ ಸಹಕಾರ ನೀಡುತ್ತಿದ್ದೇವೆ. ಆದರೆ ನಿಸ್ಸಂಶಯವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಒಡ್ಡುತ್ತಿದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಕೇಂದ್ರ ಸರ್ಕಾರದೊಂದಿಗಿನ ಮುಖಾಮುಖಿ ನಮ್ಮ ಹಾದಿಯಾಗಿಲ್ಲ. ಅದೇ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ”ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ದಿ ಫೆಡರಲ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದಿರುವ ವಿಜಯನ್‌ರವರ ಸಂದರ್ಶನದ ಕೆಲವು ಆಯ್ದ ಭಾಗಗಳು ಇಲ್ಲಿವೆ.

ಕಳೆದ ಮೂರು ವರ್ಷಗಳಲ್ಲಿ, ನಿಮ್ಮ ಸರ್ಕಾರವು ಓಖಿ ಚಂಡಮಾರುತದಿಂದ COVID-19 ವರೆಗಿನ ಹಲವು ವಿಪತ್ತುಗಳನ್ನು ಎದುರಿಸಬೇಕಾಯಿತು. ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಸಮರ್ಥ ನಾಯಕನಾಗಿ ನಿಮ್ಮನ್ನು ನೋಡಲಾಗುತ್ತಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ?

ಇರುವ ಬಿಕ್ಕಟ್ಟಿನ ವಿರುದ್ಧ ಹೋರಾಡುವುದು ಮತ್ತು ಧೈರ್ಯದಿಂದ ಎದುರಿಸಿದರೆ ಮಾತ್ರ ನೀವು ಅದನ್ನು ಅವಕಾಶವಾಗಿ ಪರಿವರ್ತಿಸಬಹುದು. ಕೇರಳವು ಹಿಂದಿನಿಂದಲೂ ಆ ಕೆಲಸ ಮಾಡುತ್ತಿದ್ದು ನಾವು ಅದನ್ನು ಪುನಾರಾವರ್ತನೆ ಮಾಡಿದ್ದೇವೆ ಅಷ್ಟೇ. ಅಲ್ಲದೇ ನಾನೊಬ್ಬನೇ ಇದನ್ನು ಮಾಡಲಾಗುವುದಿಲ್ಲ. ಒಟ್ಟಾರೆ ಇಡೀ ಕೇರಳ ಸಮಾಜವಾಗಿ ನಾವು ಇದನ್ನು ಎದುರಿಸುತ್ತಿದ್ದೇವೆ.

ನಾವು 2017ರ ಓಖಿ ಚಂಡಮಾರುತ, ನಿಫಾ ವೈರಸ್‌, 2018-19ರ ನೆರೆ ಹಾವಳಿ ಮತ್ತು ಕೋವಿಡ್‌ ಎಲ್ಲವನ್ನು ಇಡೀ ಸಮಾಜವಾಗಿ ಎದುರಿಸಿದ್ದೇವೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ.

ಮುಖ್ಯಮಂತ್ರಿಯಾಗಿ ನಿಮಗೆ ಸಿಗುವ ಪುರಸ್ಕಾರಗಳ ನಡುವೆಯೂ ಗೃಹ ಇಲಾಖೆ ಮತ್ತು ಪೊಲೀಸರು ಈಗ ಸ್ವಲ್ಪ ಸಮಯದವರೆಗೆ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿ/ಆರ್‌ಎಸ್‌ಎಸ್ ಜನರು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ಮೃದುವಾಗಿ ವರ್ತಿಸುತ್ತಾರೆ ಎಂಬ ಆರೋಪವಿದೆ. ನಿಮ್ಮ ಪಕ್ಷಬಿ ಯುಎಪಿಎಗೆ ವಿರುದ್ಧವಾಗಿದ್ದರೂ, ಈ ಕಾಯ್ದೆಯನ್ನು ಕೇರಳ ಪೊಲೀಸರು ಬಳಸಿದ ಉದಾಹರಣೆಗಳಿವೆ. ಕೇರಳ ಪೊಲೀಸರು ಬಲಪಂಥೀಯ ಪಡೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಏನು ಹೇಳುತ್ತೀರಿ?

ಯುಎಪಿಎ ಕುರಿತು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ತುಂಬಾ ಸ್ಪಷ್ಟವಾಗಿದೆ. ಯುಎಪಿಎ ಪ್ರಕರಣಗಳನ್ನು ಪರಿಶೀಲಿಸಲು ಒಂದು ಸಮಿತಿ ಇದೆ. ಆದಾಗ್ಯೂ, ಅಂತಹ ಸಂದರ್ಭಗಳಲ್ಲಿ ಕೇಂದ್ರ ಏಜೆನ್ಸಿಗಳು ನೇರವಾಗಿ ಮಧ್ಯಪ್ರವೇಶಿಸುವಂತಹ ಪರಿಸ್ಥಿತಿ ಇದೆ. ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟಿನಡಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ. ಆದ್ದರಿಂದ, ಈ ವಿಷಯಗಳಲ್ಲಿ ತೊಡಗಿಸಿಕೊಳ್ಳುವವರ ರಾಜಕೀಯ ಸಂಬಂಧಕ್ಕಿಂತ ಕಾನೂನುಬದ್ಧತೆಯನ್ನು ನಾವು ಮಾನ್ಯ ಮಾಡುತ್ತೇವೆ. ಪೊಲೀಸರು ಮಾಡಿದ ಉತ್ತಮ ಕಾರ್ಯಗಳನ್ನು ಅಂಗೀಕರಿಸಲು ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸಲು ಸರ್ಕಾರ ಹಿಂಜರಿಯುವುದಿಲ್ಲ. ಇನ್ನು ಪೊಲೀಸರ ಕುರಿತಂತೆ ಉಳಿದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂಬುದು ನನ್ನ ಅಭಿಪ್ರಾಯ.

ನಿಮ್ಮ ರಾಜಕೀಯ ವಿರೋಧಿಗಳು ದೇಶವನ್ನು ಆಳುತ್ತಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಬಿಜೆಪಿ ಸರ್ಕಾರ ಚುಕ್ಕಾಣಿ ಹಿಡಿದಿದ್ದು, ಇದು ಯಾವ ರೀತಿಯಲ್ಲಿ ಕಮ್ಯುನಿಸ್ಟ್ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ?

ಕೇಂದ್ರ-ರಾಜ್ಯ ಸಂಬಂಧದಲ್ಲಿ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಉಂಟುಮಾಡುತ್ತದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. COVID-19 ವಿರುದ್ಧ ಹೋರಾಡುವಾಗ, ನಾವು ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಬದ್ಧರಾಗಿದ್ದೇವೆ.

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

ರಾಜ್ಯದ ವಿರೋಧ ಪಕ್ಷ ಮತ್ತು ಅದರ ನಾಯಕರ ಸಹಕಾರದ ಕುರಿತು ನಿಮ್ಮ ಅಭಿಪ್ರಾಯವೇನು?

ರಾಜ್ಯದ ಉಳಿವು ಮತ್ತು ಭವಿಷ್ಯದ ವಿಷಯಗಳಿಗೆ ಸಂಬಂಧಿಸಿದಂತೆ, ಸರ್ಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ನಂಬುತ್ತೇನೆ.

COVID-19 ಅನ್ನು ಕೇರಳ ನಿರ್ವಹಿಸುವುದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಮತ್ತು ಹೆಚ್ಚು ಹೆಚ್ಚು ವ್ಯಾಖ್ಯಾನಕಾರರು ಇದನ್ನು ಜಗತ್ತಿಗೆ ಒಂದು ಮಾದರಿ ಎಂದು ಉಲ್ಲೇಖಿಸುತ್ತಿದ್ದಾರೆ. ನಿಫಾ ಬಿಕ್ಕಟ್ಟಿನ ಸಮಯದಲ್ಲಿಯೂ ಇದೇ ಸಂಭವಿಸಿದೆ. ನಿಮ್ಮ ‘ಯಶಸ್ಸಿನ ಮಂತ್ರ’ ಏನು?

ಯಶಸ್ಸಿಗೆ ಅಂತಹ ಯಾವುದೇ ಮಂತ್ರವಿಲ್ಲ. ನಾವು ಏನನ್ನಾದರೂ ಸಾಧಿಸಿದರೆ, ಅದರ ಸಂಪೂರ್ಣ ಮನ್ನಣೆ ಬಿಕ್ಕಟ್ಟನ್ನು ನಿವಾರಿಸಲು ಒಟ್ಟಾಗಿ ನಿಂತಿರುವ ಕೇರಳದ ಜನರಿಗೆ ಸಲ್ಲುತ್ತದೆ. ಅಂತಹ ಸೌಹಾರ್ದವು ನಮ್ಮ ಸಮಾಜದಲ್ಲಿ ಯಾವಾಗಲೂ ಇತ್ತು. ಕಠಿಣ ಕಾಲದಲ್ಲಿ ಇಂತಹ ಪ್ರಚಂಡ ಏಕತೆಯ ಪ್ರಜ್ಞೆಯನ್ನು ನಾವು ಪ್ರದರ್ಶಿಸಿದ್ದೇವೆ.

ಕೃಪೆ: ದಿ ಫೆಡರಲ್‌


ಇದನ್ನೂ ಓದಿ: ಕೊರೋನ ವಾರಿಯರ್ಸ್‌ಗಳೇ ರಿಯಲ್‌ ಹೀರೋಗಳು: ಅವರಿಗೆ ಹುಸಿ ಸಮ್ಮಾನಗಳು ಸಾಲವು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...