Homeಮುಖಪುಟಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

- Advertisement -
- Advertisement -

COVID-19 ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಸಂಪೂರ್ಣ ಹೃದಯದಿಂದ ಸಹಕಾರ ನೀಡುತ್ತಿದ್ದೇವೆ. ಆದರೆ ನಿಸ್ಸಂಶಯವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಒಡ್ಡುತ್ತಿದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಕೇಂದ್ರ ಸರ್ಕಾರದೊಂದಿಗಿನ ಮುಖಾಮುಖಿ ನಮ್ಮ ಹಾದಿಯಾಗಿಲ್ಲ. ಅದೇ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ”ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ದಿ ಫೆಡರಲ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದಿರುವ ವಿಜಯನ್‌ರವರ ಸಂದರ್ಶನದ ಕೆಲವು ಆಯ್ದ ಭಾಗಗಳು ಇಲ್ಲಿವೆ.

ಕಳೆದ ಮೂರು ವರ್ಷಗಳಲ್ಲಿ, ನಿಮ್ಮ ಸರ್ಕಾರವು ಓಖಿ ಚಂಡಮಾರುತದಿಂದ COVID-19 ವರೆಗಿನ ಹಲವು ವಿಪತ್ತುಗಳನ್ನು ಎದುರಿಸಬೇಕಾಯಿತು. ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಸಮರ್ಥ ನಾಯಕನಾಗಿ ನಿಮ್ಮನ್ನು ನೋಡಲಾಗುತ್ತಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ?

ಇರುವ ಬಿಕ್ಕಟ್ಟಿನ ವಿರುದ್ಧ ಹೋರಾಡುವುದು ಮತ್ತು ಧೈರ್ಯದಿಂದ ಎದುರಿಸಿದರೆ ಮಾತ್ರ ನೀವು ಅದನ್ನು ಅವಕಾಶವಾಗಿ ಪರಿವರ್ತಿಸಬಹುದು. ಕೇರಳವು ಹಿಂದಿನಿಂದಲೂ ಆ ಕೆಲಸ ಮಾಡುತ್ತಿದ್ದು ನಾವು ಅದನ್ನು ಪುನಾರಾವರ್ತನೆ ಮಾಡಿದ್ದೇವೆ ಅಷ್ಟೇ. ಅಲ್ಲದೇ ನಾನೊಬ್ಬನೇ ಇದನ್ನು ಮಾಡಲಾಗುವುದಿಲ್ಲ. ಒಟ್ಟಾರೆ ಇಡೀ ಕೇರಳ ಸಮಾಜವಾಗಿ ನಾವು ಇದನ್ನು ಎದುರಿಸುತ್ತಿದ್ದೇವೆ.

ನಾವು 2017ರ ಓಖಿ ಚಂಡಮಾರುತ, ನಿಫಾ ವೈರಸ್‌, 2018-19ರ ನೆರೆ ಹಾವಳಿ ಮತ್ತು ಕೋವಿಡ್‌ ಎಲ್ಲವನ್ನು ಇಡೀ ಸಮಾಜವಾಗಿ ಎದುರಿಸಿದ್ದೇವೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ.

ಮುಖ್ಯಮಂತ್ರಿಯಾಗಿ ನಿಮಗೆ ಸಿಗುವ ಪುರಸ್ಕಾರಗಳ ನಡುವೆಯೂ ಗೃಹ ಇಲಾಖೆ ಮತ್ತು ಪೊಲೀಸರು ಈಗ ಸ್ವಲ್ಪ ಸಮಯದವರೆಗೆ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿ/ಆರ್‌ಎಸ್‌ಎಸ್ ಜನರು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ಮೃದುವಾಗಿ ವರ್ತಿಸುತ್ತಾರೆ ಎಂಬ ಆರೋಪವಿದೆ. ನಿಮ್ಮ ಪಕ್ಷಬಿ ಯುಎಪಿಎಗೆ ವಿರುದ್ಧವಾಗಿದ್ದರೂ, ಈ ಕಾಯ್ದೆಯನ್ನು ಕೇರಳ ಪೊಲೀಸರು ಬಳಸಿದ ಉದಾಹರಣೆಗಳಿವೆ. ಕೇರಳ ಪೊಲೀಸರು ಬಲಪಂಥೀಯ ಪಡೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಏನು ಹೇಳುತ್ತೀರಿ?

ಯುಎಪಿಎ ಕುರಿತು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ತುಂಬಾ ಸ್ಪಷ್ಟವಾಗಿದೆ. ಯುಎಪಿಎ ಪ್ರಕರಣಗಳನ್ನು ಪರಿಶೀಲಿಸಲು ಒಂದು ಸಮಿತಿ ಇದೆ. ಆದಾಗ್ಯೂ, ಅಂತಹ ಸಂದರ್ಭಗಳಲ್ಲಿ ಕೇಂದ್ರ ಏಜೆನ್ಸಿಗಳು ನೇರವಾಗಿ ಮಧ್ಯಪ್ರವೇಶಿಸುವಂತಹ ಪರಿಸ್ಥಿತಿ ಇದೆ. ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟಿನಡಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ. ಆದ್ದರಿಂದ, ಈ ವಿಷಯಗಳಲ್ಲಿ ತೊಡಗಿಸಿಕೊಳ್ಳುವವರ ರಾಜಕೀಯ ಸಂಬಂಧಕ್ಕಿಂತ ಕಾನೂನುಬದ್ಧತೆಯನ್ನು ನಾವು ಮಾನ್ಯ ಮಾಡುತ್ತೇವೆ. ಪೊಲೀಸರು ಮಾಡಿದ ಉತ್ತಮ ಕಾರ್ಯಗಳನ್ನು ಅಂಗೀಕರಿಸಲು ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸಲು ಸರ್ಕಾರ ಹಿಂಜರಿಯುವುದಿಲ್ಲ. ಇನ್ನು ಪೊಲೀಸರ ಕುರಿತಂತೆ ಉಳಿದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂಬುದು ನನ್ನ ಅಭಿಪ್ರಾಯ.

ನಿಮ್ಮ ರಾಜಕೀಯ ವಿರೋಧಿಗಳು ದೇಶವನ್ನು ಆಳುತ್ತಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಬಿಜೆಪಿ ಸರ್ಕಾರ ಚುಕ್ಕಾಣಿ ಹಿಡಿದಿದ್ದು, ಇದು ಯಾವ ರೀತಿಯಲ್ಲಿ ಕಮ್ಯುನಿಸ್ಟ್ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ?

ಕೇಂದ್ರ-ರಾಜ್ಯ ಸಂಬಂಧದಲ್ಲಿ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಉಂಟುಮಾಡುತ್ತದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. COVID-19 ವಿರುದ್ಧ ಹೋರಾಡುವಾಗ, ನಾವು ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಬದ್ಧರಾಗಿದ್ದೇವೆ.

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

ರಾಜ್ಯದ ವಿರೋಧ ಪಕ್ಷ ಮತ್ತು ಅದರ ನಾಯಕರ ಸಹಕಾರದ ಕುರಿತು ನಿಮ್ಮ ಅಭಿಪ್ರಾಯವೇನು?

ರಾಜ್ಯದ ಉಳಿವು ಮತ್ತು ಭವಿಷ್ಯದ ವಿಷಯಗಳಿಗೆ ಸಂಬಂಧಿಸಿದಂತೆ, ಸರ್ಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ನಂಬುತ್ತೇನೆ.

COVID-19 ಅನ್ನು ಕೇರಳ ನಿರ್ವಹಿಸುವುದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಮತ್ತು ಹೆಚ್ಚು ಹೆಚ್ಚು ವ್ಯಾಖ್ಯಾನಕಾರರು ಇದನ್ನು ಜಗತ್ತಿಗೆ ಒಂದು ಮಾದರಿ ಎಂದು ಉಲ್ಲೇಖಿಸುತ್ತಿದ್ದಾರೆ. ನಿಫಾ ಬಿಕ್ಕಟ್ಟಿನ ಸಮಯದಲ್ಲಿಯೂ ಇದೇ ಸಂಭವಿಸಿದೆ. ನಿಮ್ಮ ‘ಯಶಸ್ಸಿನ ಮಂತ್ರ’ ಏನು?

ಯಶಸ್ಸಿಗೆ ಅಂತಹ ಯಾವುದೇ ಮಂತ್ರವಿಲ್ಲ. ನಾವು ಏನನ್ನಾದರೂ ಸಾಧಿಸಿದರೆ, ಅದರ ಸಂಪೂರ್ಣ ಮನ್ನಣೆ ಬಿಕ್ಕಟ್ಟನ್ನು ನಿವಾರಿಸಲು ಒಟ್ಟಾಗಿ ನಿಂತಿರುವ ಕೇರಳದ ಜನರಿಗೆ ಸಲ್ಲುತ್ತದೆ. ಅಂತಹ ಸೌಹಾರ್ದವು ನಮ್ಮ ಸಮಾಜದಲ್ಲಿ ಯಾವಾಗಲೂ ಇತ್ತು. ಕಠಿಣ ಕಾಲದಲ್ಲಿ ಇಂತಹ ಪ್ರಚಂಡ ಏಕತೆಯ ಪ್ರಜ್ಞೆಯನ್ನು ನಾವು ಪ್ರದರ್ಶಿಸಿದ್ದೇವೆ.

ಕೃಪೆ: ದಿ ಫೆಡರಲ್‌


ಇದನ್ನೂ ಓದಿ: ಕೊರೋನ ವಾರಿಯರ್ಸ್‌ಗಳೇ ರಿಯಲ್‌ ಹೀರೋಗಳು: ಅವರಿಗೆ ಹುಸಿ ಸಮ್ಮಾನಗಳು ಸಾಲವು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...