Homeಮುಖಪುಟಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರಕ್ಕೆ ಸಹಕಾರ ನೀಡುತ್ತೇವೆ; ಆದರೆ ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಿಯಾಗುವುದಿಲ್ಲ: ಪಿಣರಾಯಿ ವಿಜಯನ್‌

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

- Advertisement -
- Advertisement -

COVID-19 ವಿರುದ್ಧದ ಹೋರಾಟದಲ್ಲಿ ನಾವು ಕೇಂದ್ರದೊಂದಿಗೆ ಸಂಪೂರ್ಣ ಹೃದಯದಿಂದ ಸಹಕಾರ ನೀಡುತ್ತಿದ್ದೇವೆ. ಆದರೆ ನಿಸ್ಸಂಶಯವಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವಿನ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಒಡ್ಡುತ್ತಿದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಕೇಂದ್ರ ಸರ್ಕಾರದೊಂದಿಗಿನ ಮುಖಾಮುಖಿ ನಮ್ಮ ಹಾದಿಯಾಗಿಲ್ಲ. ಅದೇ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ ”ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ದಿ ಫೆಡರಲ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ “ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದಿರುವ ವಿಜಯನ್‌ರವರ ಸಂದರ್ಶನದ ಕೆಲವು ಆಯ್ದ ಭಾಗಗಳು ಇಲ್ಲಿವೆ.

ಕಳೆದ ಮೂರು ವರ್ಷಗಳಲ್ಲಿ, ನಿಮ್ಮ ಸರ್ಕಾರವು ಓಖಿ ಚಂಡಮಾರುತದಿಂದ COVID-19 ವರೆಗಿನ ಹಲವು ವಿಪತ್ತುಗಳನ್ನು ಎದುರಿಸಬೇಕಾಯಿತು. ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಸಮರ್ಥ ನಾಯಕನಾಗಿ ನಿಮ್ಮನ್ನು ನೋಡಲಾಗುತ್ತಿದೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ?

ಇರುವ ಬಿಕ್ಕಟ್ಟಿನ ವಿರುದ್ಧ ಹೋರಾಡುವುದು ಮತ್ತು ಧೈರ್ಯದಿಂದ ಎದುರಿಸಿದರೆ ಮಾತ್ರ ನೀವು ಅದನ್ನು ಅವಕಾಶವಾಗಿ ಪರಿವರ್ತಿಸಬಹುದು. ಕೇರಳವು ಹಿಂದಿನಿಂದಲೂ ಆ ಕೆಲಸ ಮಾಡುತ್ತಿದ್ದು ನಾವು ಅದನ್ನು ಪುನಾರಾವರ್ತನೆ ಮಾಡಿದ್ದೇವೆ ಅಷ್ಟೇ. ಅಲ್ಲದೇ ನಾನೊಬ್ಬನೇ ಇದನ್ನು ಮಾಡಲಾಗುವುದಿಲ್ಲ. ಒಟ್ಟಾರೆ ಇಡೀ ಕೇರಳ ಸಮಾಜವಾಗಿ ನಾವು ಇದನ್ನು ಎದುರಿಸುತ್ತಿದ್ದೇವೆ.

ನಾವು 2017ರ ಓಖಿ ಚಂಡಮಾರುತ, ನಿಫಾ ವೈರಸ್‌, 2018-19ರ ನೆರೆ ಹಾವಳಿ ಮತ್ತು ಕೋವಿಡ್‌ ಎಲ್ಲವನ್ನು ಇಡೀ ಸಮಾಜವಾಗಿ ಎದುರಿಸಿದ್ದೇವೆ. ಇದಕ್ಕಾಗಿ ನನಗೆ ಹೆಮ್ಮೆ ಇದೆ.

ಮುಖ್ಯಮಂತ್ರಿಯಾಗಿ ನಿಮಗೆ ಸಿಗುವ ಪುರಸ್ಕಾರಗಳ ನಡುವೆಯೂ ಗೃಹ ಇಲಾಖೆ ಮತ್ತು ಪೊಲೀಸರು ಈಗ ಸ್ವಲ್ಪ ಸಮಯದವರೆಗೆ ಟೀಕೆಗೆ ಗುರಿಯಾಗಿದ್ದಾರೆ. ಬಿಜೆಪಿ/ಆರ್‌ಎಸ್‌ಎಸ್ ಜನರು ಒಳಗೊಂಡ ಪ್ರಕರಣಗಳಲ್ಲಿ ಪೊಲೀಸರು ಮೃದುವಾಗಿ ವರ್ತಿಸುತ್ತಾರೆ ಎಂಬ ಆರೋಪವಿದೆ. ನಿಮ್ಮ ಪಕ್ಷಬಿ ಯುಎಪಿಎಗೆ ವಿರುದ್ಧವಾಗಿದ್ದರೂ, ಈ ಕಾಯ್ದೆಯನ್ನು ಕೇರಳ ಪೊಲೀಸರು ಬಳಸಿದ ಉದಾಹರಣೆಗಳಿವೆ. ಕೇರಳ ಪೊಲೀಸರು ಬಲಪಂಥೀಯ ಪಡೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಏನು ಹೇಳುತ್ತೀರಿ?

ಯುಎಪಿಎ ಕುರಿತು ನಮ್ಮ ಪಕ್ಷ ಮತ್ತು ಸರ್ಕಾರದ ನಿಲುವು ತುಂಬಾ ಸ್ಪಷ್ಟವಾಗಿದೆ. ಯುಎಪಿಎ ಪ್ರಕರಣಗಳನ್ನು ಪರಿಶೀಲಿಸಲು ಒಂದು ಸಮಿತಿ ಇದೆ. ಆದಾಗ್ಯೂ, ಅಂತಹ ಸಂದರ್ಭಗಳಲ್ಲಿ ಕೇಂದ್ರ ಏಜೆನ್ಸಿಗಳು ನೇರವಾಗಿ ಮಧ್ಯಪ್ರವೇಶಿಸುವಂತಹ ಪರಿಸ್ಥಿತಿ ಇದೆ. ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟಿನಡಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲು ಬದ್ಧರಾಗಿದ್ದಾರೆ. ಆದ್ದರಿಂದ, ಈ ವಿಷಯಗಳಲ್ಲಿ ತೊಡಗಿಸಿಕೊಳ್ಳುವವರ ರಾಜಕೀಯ ಸಂಬಂಧಕ್ಕಿಂತ ಕಾನೂನುಬದ್ಧತೆಯನ್ನು ನಾವು ಮಾನ್ಯ ಮಾಡುತ್ತೇವೆ. ಪೊಲೀಸರು ಮಾಡಿದ ಉತ್ತಮ ಕಾರ್ಯಗಳನ್ನು ಅಂಗೀಕರಿಸಲು ಮತ್ತು ಅವರ ನ್ಯೂನತೆಗಳನ್ನು ಎತ್ತಿ ತೋರಿಸಲು ಸರ್ಕಾರ ಹಿಂಜರಿಯುವುದಿಲ್ಲ. ಇನ್ನು ಪೊಲೀಸರ ಕುರಿತಂತೆ ಉಳಿದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂಬುದು ನನ್ನ ಅಭಿಪ್ರಾಯ.

ನಿಮ್ಮ ರಾಜಕೀಯ ವಿರೋಧಿಗಳು ದೇಶವನ್ನು ಆಳುತ್ತಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಬಿಜೆಪಿ ಸರ್ಕಾರ ಚುಕ್ಕಾಣಿ ಹಿಡಿದಿದ್ದು, ಇದು ಯಾವ ರೀತಿಯಲ್ಲಿ ಕಮ್ಯುನಿಸ್ಟ್ ನೇತೃತ್ವದ ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ?

ಕೇಂದ್ರ-ರಾಜ್ಯ ಸಂಬಂಧದಲ್ಲಿ ಅಧಿಕಾರದ ಅಸಮತೋಲನವು ಕೆಲವು ಸವಾಲುಗಳನ್ನು ಉಂಟುಮಾಡುತ್ತದೆ. ಈ ಸಮಸ್ಯೆಗಳನ್ನು ಸಾಂವಿಧಾನಿಕ ಮಾರ್ಗಗಳ ಮೂಲಕ ಪರಿಹರಿಸಲು ನಾವು ಪ್ರಯತ್ನಿಸುತ್ತಿದ್ದೇವೆ. COVID-19 ವಿರುದ್ಧ ಹೋರಾಡುವಾಗ, ನಾವು ಮಾರ್ಗಸೂಚಿಗಳನ್ನು ಅನುಸರಿಸುವಲ್ಲಿ ಕೇಂದ್ರ ಸರ್ಕಾರಕ್ಕೆ ಬದ್ಧರಾಗಿದ್ದೇವೆ.

ಕೇಂದ್ರವು ಮಾಡುವ ಮೊದಲೇ ನಾವು ಲಾಕ್‌ಡೌನ್ ಪ್ರಾರಂಭಿಸಿದ್ದೇವೆ. ಕೇಂದ್ರದೊಂದಿಗೆ ಮುಖಾಮುಖಿಯಾಗದೆ, ನಾವು ಸಹಕಾರದ ಮೂಲಕ ರಾಜ್ಯಕ್ಕೆ ಗರಿಷ್ಠ ಲಾಭಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಆದಾಗ್ಯೂ, ನಾವು ಕೇಂದ್ರ ಸರ್ಕಾರದ ಸಹಕಾರಕ್ಕಾಗಿ ಹೋದಾಗ ರಾಜ್ಯದ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

ರಾಜ್ಯದ ವಿರೋಧ ಪಕ್ಷ ಮತ್ತು ಅದರ ನಾಯಕರ ಸಹಕಾರದ ಕುರಿತು ನಿಮ್ಮ ಅಭಿಪ್ರಾಯವೇನು?

ರಾಜ್ಯದ ಉಳಿವು ಮತ್ತು ಭವಿಷ್ಯದ ವಿಷಯಗಳಿಗೆ ಸಂಬಂಧಿಸಿದಂತೆ, ಸರ್ಕಾರ ಮತ್ತು ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ನಾನು ನಂಬುತ್ತೇನೆ.

COVID-19 ಅನ್ನು ಕೇರಳ ನಿರ್ವಹಿಸುವುದನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಮತ್ತು ಹೆಚ್ಚು ಹೆಚ್ಚು ವ್ಯಾಖ್ಯಾನಕಾರರು ಇದನ್ನು ಜಗತ್ತಿಗೆ ಒಂದು ಮಾದರಿ ಎಂದು ಉಲ್ಲೇಖಿಸುತ್ತಿದ್ದಾರೆ. ನಿಫಾ ಬಿಕ್ಕಟ್ಟಿನ ಸಮಯದಲ್ಲಿಯೂ ಇದೇ ಸಂಭವಿಸಿದೆ. ನಿಮ್ಮ ‘ಯಶಸ್ಸಿನ ಮಂತ್ರ’ ಏನು?

ಯಶಸ್ಸಿಗೆ ಅಂತಹ ಯಾವುದೇ ಮಂತ್ರವಿಲ್ಲ. ನಾವು ಏನನ್ನಾದರೂ ಸಾಧಿಸಿದರೆ, ಅದರ ಸಂಪೂರ್ಣ ಮನ್ನಣೆ ಬಿಕ್ಕಟ್ಟನ್ನು ನಿವಾರಿಸಲು ಒಟ್ಟಾಗಿ ನಿಂತಿರುವ ಕೇರಳದ ಜನರಿಗೆ ಸಲ್ಲುತ್ತದೆ. ಅಂತಹ ಸೌಹಾರ್ದವು ನಮ್ಮ ಸಮಾಜದಲ್ಲಿ ಯಾವಾಗಲೂ ಇತ್ತು. ಕಠಿಣ ಕಾಲದಲ್ಲಿ ಇಂತಹ ಪ್ರಚಂಡ ಏಕತೆಯ ಪ್ರಜ್ಞೆಯನ್ನು ನಾವು ಪ್ರದರ್ಶಿಸಿದ್ದೇವೆ.

ಕೃಪೆ: ದಿ ಫೆಡರಲ್‌


ಇದನ್ನೂ ಓದಿ: ಕೊರೋನ ವಾರಿಯರ್ಸ್‌ಗಳೇ ರಿಯಲ್‌ ಹೀರೋಗಳು: ಅವರಿಗೆ ಹುಸಿ ಸಮ್ಮಾನಗಳು ಸಾಲವು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...